ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟಲು ಶುರುವಾಗಿದೆ ಡ್ರೋನ್ ಬಳಕೆ
ಮೈಸೂರು, ಜನವರಿ 18: ಅಕ್ರಮ ಗಣಿಗಾರಿಕೆ, ಕಟ್ಟಡ ನಿರ್ಮಾಣದ ಕಲ್ಲುಗಳ ಸಾಗಣೆ, ಅತಿಕ್ರಮಣ ಹಾಗೂ ಒತ್ತುವರಿಯನ್ನು ಕಡಿವಾಣ ಹಾಕಲು ಡಿಜಿಟಲ್ ಲೆಕ್ಕಪರಿಶೋಧನೆಗಾಗಿ ಮುಂದಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಈ ಸಂಬಂಧ ದೇಶದಲ್ಲಿ ಇದೇ ಮೊದಲ ಬಾರಿಗೆ ಡ್ರೋನ್ ಮೂಲಕ ರಾಜ್ಯದ ಎಲ್ಲಾ ಕ್ವಾರಿಗಳ ಸಮೀಕ್ಷೆ ನಡೆಸುತ್ತಿದೆ. ಈ ಸರ್ವೇ ಕಾರ್ಯ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ.
ರಾಜ್ಯದಲ್ಲಿರುವ ಉಪ ಖನಿಜಗಳ 2,400 ಕ್ವಾರಿಗಳು ಹಾಗೂ ಸ್ಥಗಿತಗೊಂಡ ಸುಮಾರು 2,300 ಕ್ವಾರಿಗಳನ್ನು ಗುರುತಿಸಿ ಡಿಜಿಪಿಎಎಸ್ ತಂತ್ರಜ್ಞಾನ ಬಳಸಿ ಹಾಗೂ ಡ್ರೋನ್ ಮೂಲಕ ಸಮೀಕ್ಷಾ ಕಾರ್ಯ ಕೈಗೆತ್ತಿಕೊಳ್ಳುತ್ತಿದೆ. ಈಗಾಗಲೇ ಶೇ.60ಷ್ಟು ಸರ್ವೆ ಸಂಪೂರ್ಣಗೊಂಡಿದೆ.
ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಮತ್ತು ಗ್ರಾಮಾಂತರ, ಶಿವಮೊಗ್ಗ ಸೇರಿದಂತೆ ಮುಂತಾದ ಕಡೆ ಈ ಬಹುತೇಕ ಸಮೀಕ್ಷೆ ಸಂಪೂರ್ಣಗೊಂಡಿದೆ. ಇದರೊಟ್ಟಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ಸಮೀಕ್ಷೆ ಕಾರ್ಯ ಆರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.
ಗಣಿ ಮತ್ತು ಭೂಗರ್ಭ ಇಲಾಖೆ ಅಂಕಿ ಅಂಶಗಳ ಪ್ರಕಾರ ಹಾಲಿ 2, 350 ಸಣ್ಣ ಪ್ರಮಾಣದ ಖನಿಜಗಳ ಗಣಿಗಾರಿಕೆ ಮತ್ತು 378 ದೊಡ್ಡ ಪ್ರಮಾಣದ ಖನಿಜಗಳ ಗಣಿಗಾರಿಕೆ ರಾಜ್ಯದಲ್ಲಿ ನಡೆಯುತ್ತಿದೆ. ಇದರಲ್ಲಿ ಬಹುತೇಕ ಕಲ್ಲು ಗಣಿಗಾರಿಕೆಯಾಗಿದೆ.

1000 ಕೋಟಿ ರೂ.ದಂಡ ಸಂಗ್ರಹ
ಗಣಿ ಇಲಾಖೆಯ ಡಿಜಿಟಲೀಕರಣ ಹಾಗೂ ಡ್ರೋನ್ ಸಮೀಕ್ಷೆಯಿಂದ ಮುಂದಿನ ವರ್ಷ 1000 ಕೋಟಿ ರೂ.ದಂಡ ಸಂಗ್ರಹದ ಗುರಿ ಹೊಂದಲಾಗಿದೆ. ಕಳೆದ ವರ್ಷ ದಂಡ ಶುಲ್ಕದ ಪ್ರಮಾಣ ಕೇವಲ 37 ಕೋಟಿಯಾಗಿತ್ತು. ಅಕ್ರಮ ಗಣಿಗಾರಿಕೆಯಿಂದ ಹಾಗೂ ವೈಜ್ಞಾನಿಕ ಸಮೀಕ್ಷೆ ಇಲ್ಲದ ಹಿನ್ನೆಲೆಯಲ್ಲಿ ಸರ್ಕಾರದ ಹಣ ಖೋತಾ ಆಗುತ್ತಿತ್ತು. ಆದರೆ ಈ ಬಾರಿ ಬರೋಬ್ಬರಿ 3000 ರೂ. ಕೋಟಿ ದಂಡದ ಗುರಿ ಹೊಂದಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಸಮೀಕ್ಷೆ ತೃಪ್ತಿಕರವಾಗಿರಲಿಲ್ಲ
ಈ ಮೊದಲು ಕ್ವಾರಿಗಳನ್ನು ಖುದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದರು. ಆದರೆ ಅದು ತೃಪ್ತಿಕರವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಆಧಾರಿತ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಡ್ರೋನ್ ಮೂಲಕ ಕ್ವಾರಿಗಳ ನಡೆದ ಮಟ್ಟವನ್ನು ಹಾಗೂ ಡಿಜಿಪಿಎಸ್ ನಿಂದ ಕ್ವಾರಿ ಗಡಿಗಳನ್ನು ಗುರುತಿಸಲಾಗುವುದು.

ಸರ್ಕಾರಕ್ಕೆ ಹೆಚ್ಚು ಆದಾಯ ಬರಲಿದೆ
ತದನಂತರದಲ್ಲಿ ಉದ್ದೇಶಿತ ಕ್ವಾರಿಗಳಲ್ಲಿ ಎಷ್ಟು ಗಣಿಗಾರಿಕೆ ನಡೆದಿದೆ ಎಂಬುದನ್ನು ಡಿಜಿಟಲ್ ತಂತ್ರಜ್ಞಾನದಿಂದ ಲೆಕ್ಕ ಹಾಕಲಾಗುವುದು. ಈ ಕ್ರಮದಿಂದ ಗುತ್ತಿಗೆದಾರರು ನಿಯಮ ಬಾಹಿರವಾಗಿ ಗಣಿಗಾರಿಕೆ ನಡೆಸಿದರೆ ಸುಲಭವಾಗಿ ಕಂಡುಹಿಡಿಯಬಹುದು. ಆ ಮೂಲಕ ಸರ್ಕಾರಕ್ಕೆ ಹೆಚ್ಚು ಆದಾಯ ಬರಲಿದೆ.

ಪಂಚಾಯಿತಿ ವ್ಯಾಪ್ತಿಯಲ್ಲೂ ಮಾಹಿತಿ ಲಭ್ಯ
ಮುಂದಿನ ದಿನಗಳಲ್ಲಿ ಈ ದತ್ತಾಂಶಗಳನ್ನು ಕ್ರೋಢೀಕರಿಸಿ ಮ್ಯಾಪಿಂಗ್ ಮಾಡಲಾಗುವುದು ಆಗ ಪಂಚಾಯಿತಿ ವ್ಯಾಪ್ತಿಯಲ್ಲೂ ಈ ಮಾಹಿತಿ ಲಭ್ಯವಾಗಲಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications