ಸಿದ್ದರಾಮಯ್ಯನವರ ಊರಲ್ಲೇ ಇಂಗ್ಲೀಷ್ ಮಾಧ್ಯಮಕ್ಕೆ ಡಿಮ್ಯಾಂಡ್
ಮೈಸೂರು, ಜೂನ್ 7: ಇಂಗ್ಲೀಷ್ ಮಾಧ್ಯಮಕ್ಕೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರವರ ತವರೂರು ಮೈಸೂರಿನ ಸಿದ್ದರಾಮನ ಹುಂಡಿ ಶಾಲೆಯಲ್ಲೇ ಇಂಗ್ಲೀಷ್ ಮಾಧ್ಯಮ ತರಗತಿಗಳಿಗೆ ಹೆಚ್ಚು ಡಿಮ್ಯಾಂಡ್ ಶುರುವಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಪ್ರಾರಂಭವಾಗಿದೆ. ಸಿದ್ದರಾಮಯ್ಯನವರ ಹುಟ್ಟೂರಾದ ಈ ಕ್ಷೇತ್ರದಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಮಕ್ಕಳನ್ನು ಸೇರಿಸಲು ಪೋಷಕರು ಮುಗಿಬಿದ್ದಿದ್ದಾರೆ. ಕನ್ನಡ ಮಾಧ್ಯಮ ಶಾಲೆಯೆಡೆಗೆ ಆಸಕ್ತಿ ತೋರುತ್ತಿಲ್ಲ. ಮೊದಲ ವರ್ಷವೇ ಇಂಗ್ಲೀಷ್ ಕಲಿಕೆಗೆ ಪೋಷಕರಿಂದ ಹೆಚ್ಚಿನ ಆಸಕ್ತಿ ವ್ಯಕ್ತವಾಗುತ್ತಿರುವುದು ಸಿದ್ದರಾಮಯ್ಯನವರ ನಿಲುವನ್ನು ಅಣಕಿಸುವಂತೆ ಮಾಡುತ್ತಿದೆ. ಎಲ್ಕೆಜಿಯ ಇಂಗ್ಲೀಷ್ ಮಾಧ್ಯಮ ತರಗತಿಗೆ 30 ಮಕ್ಕಳು ದಾಖಲಾತಿ ಪಡೆದಿದ್ದಾರೆ. ಎಲ್ಕೆಜಿ ಕನ್ನಡ ಮಾಧ್ಯಮಕ್ಕೆ ಒಂದೇ ಒಂದು ದಾಖಲಾತಿಯೂ ಆಗಿಲ್ಲ. ಹೀಗಾಗಿ ಒಂದನೇ ತರಗತಿಯ ಕನ್ನಡ ತರಗತಿಗಳು ಖಾಲಿ ಖಾಲಿಯಾಗಿವೆ.
ಪ್ರಸಕ್ತ ವರ್ಷದಿಂದ ಜಿಲ್ಲೆಯ 46 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭವಾಗಿದೆ. ಇದರಲ್ಲಿ 29 ಕನ್ನಡ ಮಾಧ್ಯಮ ಶಾಲೆಗಳಿಗೆ ಪೋಷಕರು ಮಕ್ಕಳನ್ನು ಕಳಿಸಿಲ್ಲ. 30 ಸಾವಿರ ರೂಪಾಯಿ ನೀಡಿ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮವಿರುವ ಖಾಸಗಿ ಶಾಲೆಗಳಿಗೆ ಕಳುಹಿಸಲು ನಮ್ಮಿಂದ ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಸರ್ಕಾರವೇ ಇಂಗ್ಲೀಷ್ ಮಾಧ್ಯಮ ಆರಂಭಿಸಿದ್ದು ನಮಗೆ ಹೆಚ್ಚು ಅನುಕೂಲವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಕನ್ನಡದ ಉಳಿವಿನ ವಿಚಾರಕ್ಕೆ ಯಾವುದೇ ಕಾರಣಕ್ಕಾಗಿ ನಾನು ರಾಜಿಯಾಗುವುದಿಲ್ಲ ಎಂದು ಘೋಷಿಸಿದ್ದ ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲೇ ಈ ಪರಿ ಬದಲಾವಣೆಯಾಗಿರುವುದು ಅಚ್ಚರಿ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications