ಪ್ಲಾಸ್ಟಿಕ್ ನಿರ್ಮೂಲನೆಗೆ ಮೈಸೂರು ಮೃಗಾಲಯ ವಿನೂತನ ಉಪಾಯ
ಮೈಸೂರು, ಡಿಸೆಂಬರ್ 28: ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್ ಕಸ ತುಂಬಿರುವ ಈ ದಿನಗಳಲ್ಲಿ ಇಲ್ಲಿನ ಜಯಚಾಮರಾಜೇಂದ್ರ ಮೃಗಾಲಯ ಪ್ಲಾಸ್ಟಿಕ್ ನಿರ್ಮೂಲನೆಗೆ ಹಾಗೂ ಮೃಗಾಲಯವನ್ನು ಸ್ವಚ್ಚವಾಗಿಟ್ಟುಕೊಳ್ಳಲು ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ಸಾಮಾನ್ಯವಾಗಿ ಮೃಗಾಲಯಕ್ಕೆ ಬರುವ ಎಲ್ಲ ಪ್ರವಾಸಿಗರೂ ಕುಡಿವ ನೀರಿನ ಬಾಟಲ್ ನ್ನು ಹಿಡಿದುಕೊಂಡೇ ಬರುತ್ತಾರೆ.
ಆದರೆ ಬಾಟಲ್ ಖಾಲಿಯಾದ ಕೂಡಲೇ ಎಲ್ಲೆಂದರಲ್ಲಿ ಬಿಸಾಕಿ ಮುಂದೆ ಹೋಗುತ್ತಾರೆ. ಈ ಖಾಲಿ ಬಾಟಲ್ ಗಳನ್ನು ಎತ್ತಿ ಹೊರಗೆ ಸಾಗಿಸುವುದೇ ಇಲ್ಲಿನ ಸಿಬ್ಬಂದಿಗಳಿಗೆ ತುಂಬಾ ಸಮಯ ಹಾಗೂ ಶ್ರಮ ಹಿಡಿಯುತಿತ್ತು.
ಆದರೆ ಮೃಗಾಲಯದ ನಿರ್ದೇಶಕರು ಕೈಗೊಂಡ ಈ ವಿನೂತನ ಕ್ರಮದಿಂದಾಗಿ ಕಳೆದ ಕೆಲವು ದಿನಗಳಿಂದ ಮೃಗಾಲಯದ ಎಲ್ಲೂ ಹುಡುಕಿದರೂ ಒಂದು ಪ್ಲಾಸ್ಟಿಕ್ ಬಾಟಲಿ ಸಿಗುತ್ತಿಲ್ಲ. ಕಾರಣವೇನು ಗೊತ್ತೇ ? ಮೃಗಾಲಯ ಪ್ರವೇಶಿಸುವ ಎಲ್ಲ ಪ್ರವಾಸಿಗರ ಬಳಿಯಲ್ಲೂ ಇರುವ ಪ್ಲಾಸ್ಟಿಕ್ ಬಾಟಲ್ ನ ಮೇಲೆ ಮೃಗಾಲಯದ ಸಿಬ್ಬಂದಿ ಬಾರ್ ಕೋಡ್ ಅಂಟಿಸಿ 10 ರೂಪಾಯಿಗಳ ಶುಲ್ಕ ಪಡೆಯುತಿದ್ದಾರೆ. ಅವರು ವೀಕ್ಷಣೆ ಮುಗಿಸಿ ಹೊರ ಹೋಗುವಾಗ ಪ್ಲಾಸ್ಟಿಕ್ ಬಾಟಲ್ ತೋರಿಸಿ ಅಥವಾ ಹಿಂತುರುಗಿಸಿ 10 ರೂಪಾಯಿ ವಾಪಸ್ ಪಡೆಯಬಹುದಾಗಿದೆ.

ಈ ವಿನೂತನ ಕ್ರಮಕ್ಕೆ ಪ್ರವಾಸಿಗರಿಂದಲೂ ಪೂರಕ ಸ್ಪಂದನೆ ಸಿಕ್ಕಿದೆ ಎನ್ನುತ್ತಾರೆ ಮೃಗಾಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಅವರು. ಈ ನೂತನ ಪ್ರಯೋಗಕ್ಕೆ ಪ್ರವಾಸಿಗರೂ ಕೂಡ ಸಹಕಾರ ನೀಡಿದ್ದು , ನೀವು ಇಡೀ ಮೃಗಾಲಯ ಸುತ್ತಿದರೂ ಒಂದೂ ಖಾಲಿ ಬಾಟಲ್ ಕಾಣ ಸಿಗುವುದಿಲ್ಲ ಎಂದೂ ಅವರು ಹೇಳಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications