ಪ್ಲಾಸ್ಟಿಕ್ ನಿರ್ಮೂಲನೆಗೆ ಮೈಸೂರು ಮೃಗಾಲಯ ವಿನೂತನ ಉಪಾಯ
ಮೈಸೂರು, ಡಿಸೆಂಬರ್ 28: ಎಲ್ಲಿ ನೋಡಿದರಲ್ಲಿ ಪ್ಲಾಸ್ಟಿಕ್ ಕಸ ತುಂಬಿರುವ ಈ ದಿನಗಳಲ್ಲಿ ಇಲ್ಲಿನ ಜಯಚಾಮರಾಜೇಂದ್ರ ಮೃಗಾಲಯ ಪ್ಲಾಸ್ಟಿಕ್ ನಿರ್ಮೂಲನೆಗೆ ಹಾಗೂ ಮೃಗಾಲಯವನ್ನು ಸ್ವಚ್ಚವಾಗಿಟ್ಟುಕೊಳ್ಳಲು ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ಸಾಮಾನ್ಯವಾಗಿ ಮೃಗಾಲಯಕ್ಕೆ ಬರುವ ಎಲ್ಲ ಪ್ರವಾಸಿಗರೂ ಕುಡಿವ ನೀರಿನ ಬಾಟಲ್ ನ್ನು ಹಿಡಿದುಕೊಂಡೇ ಬರುತ್ತಾರೆ.
ಆದರೆ ಬಾಟಲ್ ಖಾಲಿಯಾದ ಕೂಡಲೇ ಎಲ್ಲೆಂದರಲ್ಲಿ ಬಿಸಾಕಿ ಮುಂದೆ ಹೋಗುತ್ತಾರೆ. ಈ ಖಾಲಿ ಬಾಟಲ್ ಗಳನ್ನು ಎತ್ತಿ ಹೊರಗೆ ಸಾಗಿಸುವುದೇ ಇಲ್ಲಿನ ಸಿಬ್ಬಂದಿಗಳಿಗೆ ತುಂಬಾ ಸಮಯ ಹಾಗೂ ಶ್ರಮ ಹಿಡಿಯುತಿತ್ತು.
ಆದರೆ ಮೃಗಾಲಯದ ನಿರ್ದೇಶಕರು ಕೈಗೊಂಡ ಈ ವಿನೂತನ ಕ್ರಮದಿಂದಾಗಿ ಕಳೆದ ಕೆಲವು ದಿನಗಳಿಂದ ಮೃಗಾಲಯದ ಎಲ್ಲೂ ಹುಡುಕಿದರೂ ಒಂದು ಪ್ಲಾಸ್ಟಿಕ್ ಬಾಟಲಿ ಸಿಗುತ್ತಿಲ್ಲ. ಕಾರಣವೇನು ಗೊತ್ತೇ ? ಮೃಗಾಲಯ ಪ್ರವೇಶಿಸುವ ಎಲ್ಲ ಪ್ರವಾಸಿಗರ ಬಳಿಯಲ್ಲೂ ಇರುವ ಪ್ಲಾಸ್ಟಿಕ್ ಬಾಟಲ್ ನ ಮೇಲೆ ಮೃಗಾಲಯದ ಸಿಬ್ಬಂದಿ ಬಾರ್ ಕೋಡ್ ಅಂಟಿಸಿ 10 ರೂಪಾಯಿಗಳ ಶುಲ್ಕ ಪಡೆಯುತಿದ್ದಾರೆ. ಅವರು ವೀಕ್ಷಣೆ ಮುಗಿಸಿ ಹೊರ ಹೋಗುವಾಗ ಪ್ಲಾಸ್ಟಿಕ್ ಬಾಟಲ್ ತೋರಿಸಿ ಅಥವಾ ಹಿಂತುರುಗಿಸಿ 10 ರೂಪಾಯಿ ವಾಪಸ್ ಪಡೆಯಬಹುದಾಗಿದೆ.

ಈ ವಿನೂತನ ಕ್ರಮಕ್ಕೆ ಪ್ರವಾಸಿಗರಿಂದಲೂ ಪೂರಕ ಸ್ಪಂದನೆ ಸಿಕ್ಕಿದೆ ಎನ್ನುತ್ತಾರೆ ಮೃಗಾಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಅವರು. ಈ ನೂತನ ಪ್ರಯೋಗಕ್ಕೆ ಪ್ರವಾಸಿಗರೂ ಕೂಡ ಸಹಕಾರ ನೀಡಿದ್ದು , ನೀವು ಇಡೀ ಮೃಗಾಲಯ ಸುತ್ತಿದರೂ ಒಂದೂ ಖಾಲಿ ಬಾಟಲ್ ಕಾಣ ಸಿಗುವುದಿಲ್ಲ ಎಂದೂ ಅವರು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications