ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಯತೀಂದ್ರ ಸಿದ್ದರಾಮಯ್ಯ
ಮೈಸೂರು, ಮೇ 30 : ನೂತನ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಅರಮನೆ ನಗರಿಗೆ ಆಗಮಿಸಿದ್ದು, ಶಾಸಕರಾದ ನಂತರ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಎಚ್.ಡಿ.ಕೋಟೆ ನೂತನ ಶಾಸಕ ಅನಿಲ್ ಕುಮಾರ್ ಜೊತೆ ಯತೀಂದ್ರ ಸಿದ್ದರಾಮಯ್ಯ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಮಗ ಯತೀಂದ್ರ ಸಿದ್ದರಾಮಯ್ಯ ಮೈಸೂರಿನ ವರುಣ ಕ್ಷೇತ್ರದಿಂದ ನಿಂತು ಗೆದ್ದಿದ್ದರು. ಆದ ಕಾರಣ ಇಂದು ಕ್ಷೇತ್ರದ ಹಳ್ಳಿಗಳಿಗೆ ಹೋಗಿ ಅಭಿನಂದನೆ ಸಲ್ಲಿಸಲಿದ್ದಾರೆ.
ಚಾಮುಂಡಿಗೆ ಪೂಜೆ ಸಲ್ಲಿಸಿದ ಬಳಿಕ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದು, ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಯತೀಂದ್ರ, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿಲ್ಲ. ಪಕ್ಷದ ವರಿಷ್ಠರಿಗೆ ನಾನು ಬದ್ದನಾಗಿರುತ್ತೇನೆ. ಸದನದಲ್ಲಿ ಬಹುಮತ ಸಾಬೀತುಪಡಿಸುವ ಅನಿವಾರ್ಯತೆ ಇದ್ದುದ್ದರಿಂದ ಕ್ಷೇತ್ರಕ್ಕೆ ಬರಲಾಗಲಿಲ್ಲ. ಇಂದು ಮೈಸೂರಿಗೆ ಬಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದೇನೆ.

ಹಾಗೆಯೇ ಸುತ್ತೂರು ಶ್ರೀಗಳ ಆರ್ಶಿವಾದ ಪಡೆದಿದ್ದೇನೆ ಎಂದರು. ವರುಣಾ ಕ್ಷೇತ್ರವನ್ನು ಸಾಕ್ಷರತೆಯ ಕ್ಷೇತ್ರವನ್ನಾಗಿ ಮಾಡುವ ಕನಸು ಕಂಡಿದ್ದೇನೆ. ಜತೆಗೆ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುವುದೇ ನನ್ನ ಮೊದಲ ಆದ್ಯತೆಯಾಗಿದೆ.

ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಯ ಗುರಿ ಹೊಂದಿದ್ದೇನೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
-
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕರ್ನಾಟಕ ಬಜೆಟ್ 2026: ನಮಗೆ ಹಣ ಬೇಡ, ಗುಣಮಟ್ಟದ ಶಾಲೆ, ಆಸ್ಪತ್ರೆ ಕೊಡಿ: ಸಾರ್ವಜನಿಕರ ಆಗ್ರಹ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್












Click it and Unblock the Notifications