ಮೈಸೂರು ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮ
ಮೈಸೂರು, ಜೂನ್ 22: ಆಷಾಢ ಮಾಸ ಆರಂಭಕ್ಕೆ ಕೆಲವೇ ದಿನಗಳಿವೆ. ನಾಡದೇವತೆ ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ಮಾಸದ ವಿಶೇಷ ಪೂಜೆಗಳು ಆರಂಭವಾಗಲಿದೆ. ಆಷಾಧ ಮಾಸದ ಪ್ರಯುಕ್ತ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಹೊಸ ನಿಯಮ ತರಲಾಗುತ್ತಿದೆ.
ಜುಲೈ 1 ರಿಂದ ಆಷಾಢ ಮಾಸ ಆರಂಭವಾಗುತ್ತಿದೆ. ಆಷಾಢ ಮಾಸದಲ್ಲಿ ಚಾಮುಂಡಿ ದೇವಿ ದರ್ಶನಕ್ಕೆ ಲಕ್ಷಾಂತರ ಜನ ಆಗಮಿಸುತ್ತಾರೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಕಾರಣ ಮೈಸೂರು ಜಿಲ್ಲಾಡಳಿತ ಹೊಸ ನಿಬಂಧನೆಗಳನ್ನು ಜಾರಿ ಮಾಡಲು ಮುಂದಾಗಿದೆ.
ಇನ್ನು ಈ ಬಾರಿ ಆಷಾಢ ಮಾಸದಲ್ಲಿ ಚಾಮುಂಡಿದೇವಿ ದರ್ಶನ ಮಾಡಲು ಎರಡು ಡೋಸ್ ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಡಳಿತ ಹೇಳಿದೆ. ಒಂದು ವೇಳೆ ಲಸಿಕೆ ಹಾಕಿಸಿಕೊಂಡಿಲ್ಲ ಎಂದರೆ ದರ್ಶನಕ್ಕೆ ಹೋಗುವ 72 ಗಂಟೆ ಒಳಗೆ ಕೋವಿಡ್ ಟೆಸ್ಟ್ ಮಾಡಿಕೊಂಡು, ನೆಗೆಟಿವ್ ಸರ್ಟಿಫಿಕೇಟ್ ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.

ಜೂನ್ 25 ರಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಡಳಿತ ಸಭೆ ನಡೆಸಲಿದ್ದು, ಇನ್ನೂ ಹಲವು ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ.
ಕಳೆದ 2 ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಭಕ್ತರಿಲ್ಲದೆ ಆಷಾಢ ಮಾಸದ ವಿಶೇಷ ಪೂಜೆಗಳು ನಡೆದಿದ್ದವು. ಕೊರೊನಾ ಸಮಯದಲ್ಲಿ ಆಷಾಢ ಮಾಸದಲ್ಲಿ, ಮುಂಜಾನೆ 5 ಗಂಟೆಗೆ ಪೂಜೆ ಪ್ರಾರಂಭಿಸಿ 8 ಗಂಟೆ ಹೊತ್ತಿಗೆ ಪೂಜಾ ಕಾರ್ಯಗಳು ಮುಕ್ತಾಯಗೊಳ್ಳುತ್ತಿದ್ದವು. 8 ಗಂಟೆ ನಂತರ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿತ್ತು. ಎರಡು ವರ್ಷ ಕೊರೊನಾ ಕಾರಣದಿಂದ ಆಷಾಢ ಮಾಸದಲ್ಲಿ ಚಾಮುಂಡಿತಾಯಿ ದರ್ಶನ ಪಡೆಯಲು ಭಕ್ತರಿಗೆ ಸಾಧ್ಯವಾಗಿರಲಿಲ್ಲ. ಕೊರೊನಾ ಸೋಂಕು ಪ್ರಕರಣಗಳು ಕಡಿಮೆಯಾದ ನಂತರ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಚಾಮುಂಡಿ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿದ್ದರು.

ಈಗ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ತಿಳಿಸಿದ್ದಾರೆ.
ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ವಿಶೇಷ ಅಲಂಕಾರ ಕೂಡ ಮಾಡಲಾಗುತ್ತದೆ. ಅದರಲ್ಲೂ ಆಷಾಢ ಮಾಸದ ಪ್ರತಿ ಶುಕ್ರವಾರ ದೇವಿಯ ದರ್ಶನಕ್ಕೆ ಸಾವಿರಾರು ಜನ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದಲ್ಲಿ ಜಾತ್ರೆಯ ವಾತಾವರಣವೇ ನಿರ್ಮಾಣವಾಗುತ್ತದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications