ಅರಮನೆ ದ್ವಾರದಲ್ಲಿ ಬೆಂಕಿ: ತಾತ್ಕಲಿಕ ಕೌಂಟರ್ ಓಪನ್
ಮೈಸೂರು, ಮೇ 12 : ಅರಮನೆಯ ವರಾಹ ದ್ವಾರದ ಬಳಿ ಬೆಂಕಿ ಅವಘಡ ಸಂಭವಿಸಿದ್ದರಿಂದ ತಾತ್ಕಲಿಕವಾಗಿ ಅರಮನೆ ಆಡಳಿತ ಮಂಡಳಿ ಬೇರೊಂದು ಟಿಕೆಟ್ ಕೌಂಟರ್ ನ್ನು ತೆರೆದಿದ್ದಾರೆ.
ಇಂದು (ಮೇ 12) ಬೆಳ್ಳಂಬೆಳಿಗ್ಗೆ ಅರಮನೆ ವರಾಹ ದ್ವಾರದಲ್ಲಿರುವ ಬಳಿ ಬೆಂಕಿ ಆವರಿಸಿ ಟಿಕೆಟ್ ಕೌಂಟರ್ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ತಕ್ಷಣವೇ ಅವಘಡ ಸಂಭವಿಸಿದ ಘಟನಾ ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದ ಸಿಬ್ಬಂದಿ ವರ್ಗ ಬೆಂಕಿ ಬಿದ್ದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು.[ಮೈಸೂರಿನ ಅರಮನೆ ದ್ವಾರದ ಆವರಣದಲ್ಲಿ ಬೆಂಕಿ]

ಒಂದು ಟಿಕೇಟ್ ಕೌಂಟರ್ ಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಮತ್ತೊಂದು ಟಿಕೆಟ್ ಕೌಂಟರ್ ಮೂಲಕ ಪ್ರವಾಸಿಗರಿಗೆ ಟಿಕೆಟ್ ವಿತರಣೆ ಮಾಡಲು ಅರಮನೆ ಆಡಳಿತ ಮಂಡಳಿ ವ್ಯವಸ್ಥೆ ಮಾಡಿದೆ.
ಬೆಂಕಿ ಪ್ರಕರಣಕ್ಕೆ ಕಾವಲುಗಾರನ ಹೇಳಿಕೆ:
ಬೆಳಗ್ಗೆ 5.45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೊರಗೆ ಹೋದೆ. ಮೂತ್ರ ವಿಸರ್ಜನೆ ಮಾಡಿ ಬಂದು ನೋಡಿದಾಗ ಎಟಿಎಂ ಬಾಗಿಲಲ್ಲಿ ಹೊಗೆ ಕಾಣಿಸಿಕೊಂಡಿತ್ತು.
ತಕ್ಷಣ ಪಕ್ಕದ ರೂಮಿನಲ್ಲಿ ಮಲಗಿದ್ದ ಪೊಲೀಸರು ಎಚ್ಚರಗೊಂಡು ಹೊರಗೆ ಬಂದರು. ಆಗ ನೋಡ ನೋಡುತ್ತಿದಂತೆ ಇಡೀ ಎಟಿಎಂಗೆ ಬೆಂಕಿ ಆವರಿಸಿಕೊಂಡಿತು.
ಕೂಡಲೇ ಪೊಲೀಸರು ಅಗ್ನಿಶಾಮಕ ದಳದವರಿಗೆ ಫೋನ್ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರ ಮೊಬೈಲ್ ಹಾಗೂ ಮಲಗಿದ್ದ ಹಾಸಿಗೆ ಸುಟ್ಟು ಕರಕಲಾಯಿತು ಎಂದು ಭಯದಿಂದಲೇ ಎಟಿಎಂ ಕಾವಾಲುಗಾರ ಶಿವಣ್ಣ ಅವರು ಘಟನೆ ಬಗ್ಗೆ ಹೇಳಿದರು.
ಅರಮನೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗೊಂಡ ಮೇಯರ್
ವರಾಹ ದ್ವಾರದ ಬಳಿ ಬೆಂಕಿ ಬಿದ್ದಿದ್ದ ಸ್ಥಳವನ್ನು ಪರಿಶೀಲಿಸಲು ಆಗಮಿಸಿದ ವೇಳೆ ಇಲ್ಲಿ ಸ್ವಚ್ಛತೆ ಇಲ್ಲದಿರುವುದು ಮೇಯರ್ ಎಂ.ಜೆ ರವಿಕುಮಾರ್ ಅವರ ಗಮನಕ್ಕೆ ಬಂದಿದ್ದು ಅರಮನೆ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅರಮನೆಯ ವರಾಹ ದ್ವಾರದ ಬಳಿಯಿರುವ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವುದಕ್ಕೆ ಕಿಡಿಕಾರಿದರು. ಅರಮನೆ ವರಾಹದ್ವಾರದ ಬಳಿ ಕುಡಿಯುವ ನೀರಿನ ಸ್ಥಳದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಮೇಯರ್ ಅವರು ಸ್ವತಃ ತಮ್ಮ ಕೈಯ್ಯಾರೆ ತಾವೇ ತೆರವುಗೊಳಿಸಿದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications