ಅರಮನೆ ದ್ವಾರದಲ್ಲಿ ಬೆಂಕಿ: ತಾತ್ಕಲಿಕ ಕೌಂಟರ್ ಓಪನ್
ಮೈಸೂರು, ಮೇ 12 : ಅರಮನೆಯ ವರಾಹ ದ್ವಾರದ ಬಳಿ ಬೆಂಕಿ ಅವಘಡ ಸಂಭವಿಸಿದ್ದರಿಂದ ತಾತ್ಕಲಿಕವಾಗಿ ಅರಮನೆ ಆಡಳಿತ ಮಂಡಳಿ ಬೇರೊಂದು ಟಿಕೆಟ್ ಕೌಂಟರ್ ನ್ನು ತೆರೆದಿದ್ದಾರೆ.
ಇಂದು (ಮೇ 12) ಬೆಳ್ಳಂಬೆಳಿಗ್ಗೆ ಅರಮನೆ ವರಾಹ ದ್ವಾರದಲ್ಲಿರುವ ಬಳಿ ಬೆಂಕಿ ಆವರಿಸಿ ಟಿಕೆಟ್ ಕೌಂಟರ್ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ತಕ್ಷಣವೇ ಅವಘಡ ಸಂಭವಿಸಿದ ಘಟನಾ ಸ್ಥಳಕ್ಕೆ ಆಗಮಿಸಿದ್ದ ಬಾಂಬ್ ಪತ್ತೆ ದಳ ಹಾಗೂ ಶ್ವಾನದಳದ ಸಿಬ್ಬಂದಿ ವರ್ಗ ಬೆಂಕಿ ಬಿದ್ದ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದರು.[ಮೈಸೂರಿನ ಅರಮನೆ ದ್ವಾರದ ಆವರಣದಲ್ಲಿ ಬೆಂಕಿ]

ಒಂದು ಟಿಕೇಟ್ ಕೌಂಟರ್ ಗೆ ಬೆಂಕಿ ಬಿದ್ದಿರುವ ಹಿನ್ನೆಲೆಯಲ್ಲಿ ಮತ್ತೊಂದು ಟಿಕೆಟ್ ಕೌಂಟರ್ ಮೂಲಕ ಪ್ರವಾಸಿಗರಿಗೆ ಟಿಕೆಟ್ ವಿತರಣೆ ಮಾಡಲು ಅರಮನೆ ಆಡಳಿತ ಮಂಡಳಿ ವ್ಯವಸ್ಥೆ ಮಾಡಿದೆ.
ಬೆಂಕಿ ಪ್ರಕರಣಕ್ಕೆ ಕಾವಲುಗಾರನ ಹೇಳಿಕೆ:
ಬೆಳಗ್ಗೆ 5.45ರ ಸುಮಾರಿಗೆ ಮೂತ್ರ ವಿಸರ್ಜನೆಗೆ ಹೊರಗೆ ಹೋದೆ. ಮೂತ್ರ ವಿಸರ್ಜನೆ ಮಾಡಿ ಬಂದು ನೋಡಿದಾಗ ಎಟಿಎಂ ಬಾಗಿಲಲ್ಲಿ ಹೊಗೆ ಕಾಣಿಸಿಕೊಂಡಿತ್ತು.
ತಕ್ಷಣ ಪಕ್ಕದ ರೂಮಿನಲ್ಲಿ ಮಲಗಿದ್ದ ಪೊಲೀಸರು ಎಚ್ಚರಗೊಂಡು ಹೊರಗೆ ಬಂದರು. ಆಗ ನೋಡ ನೋಡುತ್ತಿದಂತೆ ಇಡೀ ಎಟಿಎಂಗೆ ಬೆಂಕಿ ಆವರಿಸಿಕೊಂಡಿತು.
ಕೂಡಲೇ ಪೊಲೀಸರು ಅಗ್ನಿಶಾಮಕ ದಳದವರಿಗೆ ಫೋನ್ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರ ಮೊಬೈಲ್ ಹಾಗೂ ಮಲಗಿದ್ದ ಹಾಸಿಗೆ ಸುಟ್ಟು ಕರಕಲಾಯಿತು ಎಂದು ಭಯದಿಂದಲೇ ಎಟಿಎಂ ಕಾವಾಲುಗಾರ ಶಿವಣ್ಣ ಅವರು ಘಟನೆ ಬಗ್ಗೆ ಹೇಳಿದರು.
ಅರಮನೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗೊಂಡ ಮೇಯರ್
ವರಾಹ ದ್ವಾರದ ಬಳಿ ಬೆಂಕಿ ಬಿದ್ದಿದ್ದ ಸ್ಥಳವನ್ನು ಪರಿಶೀಲಿಸಲು ಆಗಮಿಸಿದ ವೇಳೆ ಇಲ್ಲಿ ಸ್ವಚ್ಛತೆ ಇಲ್ಲದಿರುವುದು ಮೇಯರ್ ಎಂ.ಜೆ ರವಿಕುಮಾರ್ ಅವರ ಗಮನಕ್ಕೆ ಬಂದಿದ್ದು ಅರಮನೆ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅರಮನೆಯ ವರಾಹ ದ್ವಾರದ ಬಳಿಯಿರುವ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವುದಕ್ಕೆ ಕಿಡಿಕಾರಿದರು. ಅರಮನೆ ವರಾಹದ್ವಾರದ ಬಳಿ ಕುಡಿಯುವ ನೀರಿನ ಸ್ಥಳದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಮೇಯರ್ ಅವರು ಸ್ವತಃ ತಮ್ಮ ಕೈಯ್ಯಾರೆ ತಾವೇ ತೆರವುಗೊಳಿಸಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications