New year 2023: ಮೈಸೂರಿನ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗಾಗಿ ಸಿದ್ಧವಾದ 2 ಲಕ್ಷ ಲಡ್ಡು
ಮೈಸೂರು, ಡಿಸೆಂಬರ್, 30: ಹೊಸವರ್ಷದಂದು 2 ಲಕ್ಷ ಲಡ್ಡು ವಿತರಿಸಲು ವಿಜಯ ನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇವಸ್ಥಾನ ಆಡಳಿತ ಮಂಡಳಿ ತೀರ್ಮಾನಿಸಿದೆ.
ಹೊಸವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ಪ್ರತಿವರ್ಷದಂತೆ ಈ ಬಾರಿಯು ಭಕ್ತರಿಗೆ 2 ಲಕ್ಷ ಲಡ್ಡು ವಿತರಿಸಲಾಗುತ್ತದೆ ಎಂದು ಯೋಗಾ ನರಸಿಂಹಸ್ವಾಮಿ ದೇಗುಲದ ಸಂಸ್ಥಾಪಕ ಭಾಷ್ಯಂ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 1994ರಿಂದ ಲಡ್ಡು ವಿತರಿಸುವ ಕಾರ್ಯವನ್ನು ದೇವಸ್ಥಾನದಿಂದ ನಡೆಸಿಕೊಂಡು ಬಂದಿದ್ದೇವೆ. ಈ ಬಾರಿಯೂ ಹೊಸ ವರ್ಷಾರಂಭದ ಅಂಗವಾಗಿ ಜನವರಿ 1ರ ಮುಂಜಾನೆ 4 ರಿಂದ ಯೋಗಾನರಸಿಂಹಸ್ವಾಮಿಗೆ ವಿಶೇಷ ಅಲಂಕಾರ ಮತ್ತು ಶ್ರೀರಂಗಂ, ಮಧುರೆ ಕ್ಷೇತ್ರದಿಂದ ತರಿಸಿರುವ ವಿಶೇಷ ತೋಮಾಲೆ ಮತ್ತು ಸ್ವರ್ಣ ಪುಷ್ಪದಿಂದ ಸಹಸ್ರನಾಮರ್ಚನೆ ಮಾಡಲಾಗುತ್ತದೆ. ಮತ್ತು ದೇವಾಲಯದಿಂದ ಸಿದ್ಧಪಡಿಸಿರುವ ಲಡ್ಡುಗಳನ್ನು ಭಕ್ತರಿಗೆ ಹಂಚಲಾಗುವುದು ಎಂದರು.
ಭಕ್ತರಿಗೆ ಲಡ್ಡುಗಳನ್ನು ವಿತರಿಸುವ ಸಮಯ
ಮಹಾಮಾರಿ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಅದ್ದೂರಿಯಾಗಿ ಹೊಸ ವರ್ಷ ಆಚರಣೆ ಮಾಡಿರಲಿಲ್ಲ. ಈ ಬಾರಿ ಜನವರಿ 1 ರಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಲಡ್ಡುಗಳನ್ನು ವಿತರಿಸಲಾಗುತ್ತಿದ್ದು, ಇದಕ್ಕಾಗಿ ತಿರುಪತಿ ಮಾದರಿಯ 2 ಲಕ್ಷ ಲಡ್ಡುಗಳು ಸಿದ್ಧವಾಗುತ್ತಿವೆ. ಅಂದು ಮುಂಜಾನೆ 4ರಿಂದ ರಾತ್ರಿ 12 ಗಂಟೆಯವರೆಗೆ ಭಕ್ತಾದಿಗಳಿಗೆ ಲಡ್ಡು ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಲಡ್ಡು ತಯಾರಿಕೆಗೆ ಬಳಸುವ ದಿನಸಿಗಳು
ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ, ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ ಈ ಲಡ್ಡು ಪ್ರಸಾದ ನಿವೇದನೆ ಮಾಡಲಾಗುತ್ತದೆ. ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತಿದೆ ಎಂದರು. ಲಡ್ಡು ತಯಾರಿಕೆಗೆ 75 ಕ್ವಿಂಟಾಲ್ ಕಡ್ಲೆಹಿಟ್ಟು, 200 ಕಿಂಟಾಲ್ ಸಕ್ಕರೆ, ಲೀಟರ್ ಖಾದ್ಯ ತೈಲ, 200 ಕೆ.ಜಿ ಗೋಡಂಬಿ, 200 ಕೆ.ಜಿ ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 500 ಕೆ.ಜಿ ಡೈಮಂಡ್ ಸಕ್ಕರೆ, 1000 ಕೆ.ಜಿ ಬೂರಾ ಸಕ್ಕರೆ, 20 ಕೆ.ಜಿ ಪಿಸ್ತಾ, 50 ಕೆ.ಜಿ ಏಲಕ್ಕಿ, 40 ಕೆ.ಜಿ ಜಾಕಾಯಿ ಮತ್ತು ಜಾಪತ್ರೆ, 100 ಕೆ.ಜಿ ಲವಂಗವನ್ನು ಬಳಸಲಾಗುತ್ತದೆ ಎಂದು ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ತಿಳಿಸಿದ್ದಾರೆ.

ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ
ಈ ವರ್ಷ ಅಂದಾಜು 2 ಕೆ.ಜಿ. ತೂಕದ 10 ಸಾವಿರ ಲಡ್ಡು, 150 ಗ್ರಾಂ ತೂಕದ 2 ಲಕ್ಷ ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ವಿತರಿಸಲಾಗುವುದು. ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮೀ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ 20 ಪುಳಿಯೋಗರೆ ನಿವೇದನೆ ಮಾಡಲಾಗುತ್ತಿದೆ. ಜೊತೆಗೆ ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ತಿರುಪತಿ ಮಾದರಿಯ ಲಡ್ಡು ವಿತರಣೆ ಮಾಡಲಾಗುತ್ತದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications