ಮೈಸೂರಿನಲ್ಲಿ ಹೊಸ ವರ್ಷಾಚರಣೆ: ಚಾಮುಂಡಿ ಬೆಟ್ಟದಲ್ಲಿ ನೆರೆದ ಭಕ್ತರ ದಂಡು, ಕಂಗೊಳಿಸಿದ ಅರಮನೆ
ಮೈಸೂರು, ಜನವರಿ, 01: ಮೈಸೂರಿಗರು 2023ರ ಹೊಸ ವರ್ಷವನ್ನು ಭಾನುವಾರ (ಜನವರಿ 01) ಸಂಭ್ರಮದಿಂದ ಸ್ವಾಗತಿಸಿದರು. ಅರಮನೆ ಆವರಣದಲ್ಲಿ ನೂತನ ವರ್ಷದ ಪ್ರಯುಕ್ತ ರಾತ್ರಿ 11 ಗಂಟೆಯಿಂದ 12 ಗಂಟೆಯವರೆಗೆ ಪೊಲೀಸ್ ಬ್ಯಾಂಡ್ ಕಾರ್ಯಕ್ರಮವನ್ನು ನಡೆಸಲಾಯಿತು. ರಾತ್ರಿ 12 ಗಂಟೆ ಕಳೆಯುತ್ತಿದ್ದಂತೆ ಸಾರ್ವಜನಿಕರು ಪಟಾಕಿಯನ್ನು ಸಿಡಿಸಿ ನೂತನ ವರ್ಷವನ್ನು ಸ್ವಾಗತಿಸಿದರು. ನಂತರ ಅರಮನೆ ಆವರಣದಲ್ಲಿ ಬಾಣ ಬಿರುಸುಗಳ ಪ್ರದರ್ಶನ ಮನಮೋಹಕವಾಗಿತ್ತು.
ನಗರದ ಚಾಮುಂಡೇಶ್ವರಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಪ್ರಮುಖ ದೇವಸ್ಥಾನಗಳು ಹಾಗೂ ಬಡಾವಣೆಗಳಲ್ಲಿರುವ ದೇಗುಲಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ, ಪೂಜೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ನಗರದ ಬಹುತೇಕ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು. ಅಲ್ಲದೇ ಪ್ರವಾಸಿಗರು ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆಗೆ ತೆರಳಿ ಕಾಲ ಕಳೆಯುವ ಮೂಲಕ ಸಂಭ್ರಮಾಚರಣೆ ಮಾಡಿದರು.

ನೆಚ್ಚಿನ ಹಾಡುಗಳಿಗೆ ಹೆಜ್ಜೆ ಹಾಕಿದ ಜನ
ಹಾಗೆಯೇ ಜನರು ಹೋಟೆಲ್, ಪಬ್, ಬಾರ್ ಹಾಗೂ ರೆಸ್ಟೋರೆಂಟ್ಗಳಲ್ಲಿ ನೆಚ್ಚಿನ ಹಾಡುಗಳಿಗೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಶಿಳ್ಳೆ, ಚಪ್ಪಾಳೆ ತಟ್ಟಿ ನಲಿದರು. ಕೆಲವೆಡೆ ಸಂಗೀತ ಬ್ಯಾಂಡ್ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಲ್ಲಾ ರಸ್ತೆಗಳಲ್ಲಿ ಸಾರ್ವಜನಿಕರು ತಮ್ಮ ವಾಹನಗಳಲ್ಲಿ ಸಂಚರಿಸುತ್ತಾ, ಹೊಸ ವರ್ಷದ ಶುಭಾಶಯ ಕೋರುತ್ತಾ ಸಂಭ್ರಮಿಸಿದರು. ಹೊಸ ವರ್ಷ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ತಿರುಪತಿ ಮಾದರಿಯ ಲಡ್ಡು ವಿತರಣೆ
ಹೊಸ ವರ್ಷಾಚರಣೆ ಹಿನ್ನೆಲೆ ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾಧಿಗಳಿಗೆ 2 ಲಕ್ಷ ಲಡ್ಡು ವಿತರಿಸಲಾಯಿತು. ಭಕ್ತಾಧಿಗಳಿಗೆ ವಿತರಣೆ ಮಾಡಲೆಂದೇ ತಿರುಪತಿ ಮಾದರಿಯ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗಿತ್ತು. ಮುಂಜಾನೆ 4ರಿಂದ ರಾತ್ರಿ 12ರವರೆಗೆ ಭಕ್ತರು ಲಡ್ಡು ಸ್ವೀಕರಿಸಿದರು. ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಿಂದ ಪ್ರವಾಸಿಗರು ಆಗಮಿಸಿದ್ದರು. ಪ್ರವಾಸಿಗರು ಬಸ್, ಕಾರು, ಟಿಟಿ ವಾಹನಗಳ ಮೂಲಕ ಆಗಮಿಸಿದ್ದರಿಂದ ಅರಮನೆ ಸುತ್ತಮುತ್ತ, ಮೃಗಾಲಯ ರಸ್ತೆ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಸಂಚಾರವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications