3 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತ ಮೈಸೂರಲ್ಲಿ ಡೆಂಗ್ಯೂಗೆ ಬಲಿ
ಮೈಸೂರು, ಜೂನ್ 29: ಮೈಸೂರಿನಲ್ಲಿ ಇದೀಗ ಡೆಂಗ್ಯೂ ಮಹಾಮಾರಿಗೆ ನವಾವಿವಾಹಿತ ಬಲಿಯಾಗಿದ್ದಾನೆ. ಹರವೆ ಗ್ರಾಮದ ನಿವಾಸಿ ಸಣ್ಣತಮ್ಮಯ್ಯ ಎಂಬುವರ ಪುತ್ರ ರವಿಚಂದ್ರ(32) ಡೆಂಗ್ಯೂಗೆ ಬಲಿಯಾದ ದುರ್ದೈವಿ. ಈತ ಮೂರು ತಿಂಗಳ ಹಿಂದೆಯಷ್ಟೆ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ ವೆಂಕಟೇಶ ಎಂಬುವರ ಪುತ್ರಿ ಶಿಲ್ಪಾ ಎಂಬಾಕೆಯನ್ನು ವಿವಾಹವಾಗಿದ್ದ.
ದಾಂಪತ್ಯ ಬದುಕನ್ನು ಆರಂಭಿಸಿ, ಆಷಾಢಕ್ಕೆ ಪತ್ನಿಯನ್ನು ತವರಿಗೆ ಕಳುಹಿಸುವ ಸಿದ್ಧತೆಯಲ್ಲಿದ್ದಾಗಲೇ ರವಿಚಂದ್ರ ಡೆಂಗ್ಯೂಗೆ ಬಲಿಯಾಗಿರುವುದು ಮನಕಲಕುವಂತಿದೆ. ಡೆಂಗ್ಯೂ ಜ್ವರ ಮೈಸೂರು ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಒಬ್ಬರಾದ ಮೇಲೆ ಒಬ್ಬರು ಎಂಬಂತೆ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ.

ಓರಿಯಂಟಲ್ ಇನ್ಷೂರೆನ್ಸ್ ಕಂಪೆನಿಯಲ್ಲಿ ನೌಕರನಾಗಿದ್ದ ರವಿಚಂದ್ರನಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಮಾಮೂಲಿ ಜ್ವರ ಇರಬಹುದೆಂದು ಮಾತ್ರೆ ತೆಗೆದುಕೊಂಡರೂ ಕಡಿಮೆಯಾಗದಿದ್ದಾಗ ಹುಣಸೂರು ಸಾರ್ವಜನಿಕ ಆಸ್ಪತೆಯಲ್ಲಿ ಎರಡು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ.
ಆ ನಂತರ ಕೂಡ ವಾಸಿಯಾಗದಿದ್ದಾಗ ಮೈಸೂರಿನ ಗೋಪಾಲ್ ಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿಯೂ ಚೇತರಿಕೆ ಕಾಣದೆ ಅಪೋಲೋ ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿಯೂ ಯಾವುದೇ ರೀತಿ ಚೇತರಿಕೆ ಕಾಣದ್ದರಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲಿ ಎರಡು ದಿನ ಚಿಕಿತ್ಸೆ ನೀಡಲಾಯಿತಾದರೂ ಸ್ಪಂದಿಸದೆ ರವಿಚಂದ್ರ ಮೃತಪಟ್ಟಿದ್ದಾನೆ.
ಗ್ರಾಮೀಣ ಪ್ರದೇಶದಲ್ಲಿ ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದರ ಬಗ್ಗೆ ಅರಿವಿಲ್ಲದೆ ಜ್ವರವೆಂದು ಹಗುರವಾಗಿ ಪರಿಗಣಿಸಿ ಮಾತ್ರೆಗಳನ್ನು ತೆಗೆದುಕೊಂಡು ಉಲ್ಭಣವಾದ ಬಳಿಕ ಆಸ್ಪತ್ರೆಗೆ ದಾಖಲಾಗುತ್ತಿರುವುದೇ ಸಾವಿಗೆ ಕಾರಣ ಎನ್ನಲಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications