ಮೈಸೂರಿನಲ್ಲಿ ದೇಶದ ಮೊದಲ ಡಿಜಿಟಲ್ ಡಿಸ್ಪ್ಲೇ ತಾರಾಲಯ
ಮೈಸೂರು, ಮಾರ್ಚ್ 06: ಡಿಜಿಟಲ್ ಡಿಸ್ಪ್ಲೇಗಳ ಮೂಲಕ ಖಗೋಳದ ಆ ಕ್ಷಣದ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಬಹುದಾದ (ರಿಯಲ್ ಟೈಂ ಡೇಟಾ) ದೇಶದ ಮೊದಲ ಅತ್ಯಾಧುನಿಕ ಖಗೋಳ ತಾರಾಲಯಕ್ಕೆ ಭಾನುವಾರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಶಂಕು ಸ್ಥಾಪನೆ ಮಾಡಿದರು.
ಭಾನುವಾರ ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ ಸಂಸ್ಥೆ ವತಿಯಿಂದ ನಗರದ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಕಾಸ್ಮೋಲಜಿ ಶಿಕ್ಷಣ ಮತ್ತು ಸಂಶೋಧನಾ - ತರಬೇತಿ ಕೇಂದ್ರದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು.
ಸಚಿವರು ಮಾತನಾಡಿ, "ಈ ಕಾರ್ಯಕ್ರಮಕ್ಕೆ ಸಾಕಷ್ಟು ಹೆಣ್ಣು ಮಕ್ಕಳು ಬಂದಿದ್ದಾರೆ. ಇವರೇ ನಮ್ಮ ಭವಿಷ್ಯ. ಅವರೆಲ್ಲರೂ ತಾರೆಗಳಂತೆ ಹೊಳೆಯುತ್ತಿದ್ದಾರೆ. ಇವರೆಲ್ಲರೂ ವಿಜ್ಞಾನಿಗಳಾಗಿ ದೇಶದ ಕೀರ್ತಿ ಪತಾಕಿ ಹಾರಿಸಬೇಕು. ಯುವ ವಿಜ್ಞಾನಿಗಳು ಸಂಶೋಧನೆ ಮತ್ತು ತರಬೇತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು" ಎಂದರು.

"ಖಗೋಳ ತಾರಾಲಯ ಸ್ಥಾಪನೆಯಾದ ಮೇಲೆ ಹಳೆದು, ಹೊಸದು ಅಂತ ಸಾಕಷ್ಟು ಡೇಟಾ (ಅಂಕಿಅಂಶಗಳು) ಸಂಗ್ರಹವಾಗುತ್ತದೆ. ಆದರೆ ಬರೀ ಶೇಖರಣೆಯಾದರೆ ಪ್ರಯೋಜನವಿಲ್ಲ ಅದು ಬಳಕೆಯಾಗಬೇಕು. ಬಳಕೆಯಾಗಲು ಸೂಕ್ತವಾಗಿ ಮಾರ್ಗದರ್ಶನ ಮಾಡುವವರು ಬೇಕು. ಅಂತಹ ಸಲಹೆಗಾರರು ಮೈಸೂರು ವಿವಿಯಲ್ಲಿ ಇದ್ದಾರೆ. ಯುವ ವಿಜ್ಞಾನಿಗಳು ತಾರಾಲಯದ ಡೇಟಾವನ್ನು ಸರಿಯಾಗಿ ಬಳಸಿಕೊಂಡರೆ ಜನರಿಗೆ, ದೇಶಕ್ಕೆ, ಸಮಾಜಕ್ಕೆ ಒಳ್ಳೆಯದಾಗುತ್ತದೆ" ಎಂದು ಹೇಳಿದರು.
ಸಂಸದ ಪ್ರತಾಪಸಿಂಹ ಮಾತನಾಡಿ, "ಶತಮಾನೋತ್ಸವ ಆಚರಿಸಿದ ದೇಶದ ನಾಲ್ಕು ವಿವಿಗಳಲ್ಲಿ ಮೈಸೂರು ವಿಶ್ವವಿದ್ಯಾಲಯವೂ ಒಂದು. ನಿರ್ಮಲ ಸೀತಾರಾಮನ್ ಬಂದ ಮೇಲೆ ದೇಶದ ಆರ್ಥಿಕ ವ್ಯವಸ್ಥೆ ಸದೃಢವಾಗುತ್ತಿದೆ. ಚೀನಾಕ್ಕಿಂತ ಭಾರತದ ಜಿಡಿಪಿ ಶೇ 9.2ರಷ್ಟು ಹೆಚ್ಚುವ ಮುನ್ಸೂಚನೆ ಸಿಕ್ಕಿದೆ. ಮೈಸೂರು ವಿವಿಗೆ ಇನ್ಕ್ವಿಬಿಟಿ ಸೆಂಟರ್ ಅವಶ್ಯಕತೆ ಇದ್ದು, ಅದನ್ನು ಮಂಜೂರು ಮಾಡಿಕೊಡಬೇಕೆಂದು" ಹಣಕಾಸು ಸಚಿವರಲ್ಲಿ ಮನವಿ ಮಾಡಿದರು.
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮಾತನಾಡಿ, "ಮೈಸೂರು ವಿವಿ ಸ್ಥಾಪನೆಗೆ ಮೈಸೂರು ಅರಸರ ಕೊಡುಗೆ ಅಪಾರವಾಗಿದೆ. ಅದರಲ್ಲೂ ಜಯಚಾಮರಾಜ ಒಡೆಯರ್ ಅವರನ್ನು ಈ ವೇಳೆ ಸ್ಮರಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಶ್ರೀ ಜಯಚಾಮರಾಜ ಒಡೆಯರ್ ಉನ್ನತ ಕಲಿಕಾ ಕೇಂದ್ರವೊಂದನ್ನು ತೆರೆದಿದ್ದೇವೆ" ಎಂದರು.
"ಈ ತಾರಾಲಯ ಉದಯೋನ್ಮುಖ, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ವಿಜ್ಞಾನದ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಹಾಗೂ ಪ್ಲಾನಿಟೋರಿಯಂ ನಿರ್ಮಾಣದಿಂದ ಆಕಾಶಕಾಯಗಳ ಬಗೆಗೆ ಹೆಚ್ಚಿನ ಸಂಶೋಧನೆಯನ್ನು ನಡೆಸಲು ಅನುಕೂಲವಾಗಲಿದೆ" ಎಂದರು.
ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ. ಕೆ. ವಿಜಯ ರಾಘವನ್, ಆಟಾಮಿಕ್ ಎನರ್ಜಿ ಇಲಾಖೆ ಕೆ. ಎನ್. ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ. ಎಸ್. ಚಂದ್ರಶೇಖರ್ ಹಾಗೂ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ನಿರ್ದೇಶಕಿ ಪ್ರೊ. ಅನ್ನಪೂರ್ಣಿ ಸುಬ್ರಮಣಿಯಂ ಕಾರ್ಯಕ್ರಮದಲ್ಲಿದ್ದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications