ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಆಗಮಿಸಿದ ನಿಸಾರ್ ಅಹ್ಮದ್
ಮೈಸೂರು, ಸೆಪ್ಟೆಂಬರ್ 20: ನಿತ್ಯೋತ್ಸವ ಕವಿ ನಿಸಾರ್ ಅಹಮ್ಮದ್ ದಸರೆಯ ಉದ್ಘಾಟನೆಗಾಗಿ ಮೈಸೂರಿಗೆ ಬಂದಿಳಿದಿದ್ದಾರೆ. ನಾಳೆ(ಸೆ.21) ನಡೆಯುವ ದಸರೆಯ ಕಾರ್ಯಕ್ರಮಕ್ಕೆ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ ದಸರಾವನ್ನು ಉದ್ಘಾಟಿಸಲಿದ್ದಾರೆ.
ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ಮುಸ್ಲಿಂ ವ್ಯಕ್ತಿಯನ್ನು ಸರ್ಕಾರ ಆಹ್ವಾನಿಸಿದ್ದು, ಈ ಕುರಿತಾಗಿ ಪ್ರತಿಕ್ರಿಯಿಸಿದ ಕವಿ ಕವಿ ನಿಸಾರ್ ಅಹ್ಮದ್, "ಇದು ನನ್ನ ಜೀವನದ ಅತ್ಯುತ್ತಮ ಕ್ಷಣ" ಎಂದರು.
1952 ರಲ್ಲಿ ಬಿಎಸ್ಸಿ ವಿದ್ಯಾರ್ಥಿಯಾಗಿದ್ದಾಗ ದಸರಾ ಮೆರವಣಿಗೆ, ವಿಜಯದಶಮಿಯಂದು ನಡೆಯುವ, ಜಂಬೂ ಸವಾರಿ ಮೆರವಣಿಗೆಯನ್ನು ತಮ್ಮ ಕುಟುಂಬದವರೊಡನೆ ನೋಡಿದ ದಿನಗಳನ್ನು ಮೆಲುಕು ಹಾಕಿದರು.

ನಾನು ಮೈಸೂರಿಗೆ ಬರಲು ಸಂತೋಷ ಪಡುತ್ತೇನೆ ಎಂದ ಕವಿ ನಿಸಾರ್, ರಾಜ್ಯದಲ್ಲಿ ಒಳ್ಳೆಯ ಮಳೆ ಬೀಳುವ ಮೂಲಕ ರೈತರ ಸಂತಸಕ್ಕೆ ಕಾರಣವಾಗಿದೆ. ಈ ವರುಷ ಇದೇ ಪ್ರಾರ್ಥನೆಯನ್ನು ದೇವರಲ್ಲಿ ಮಾಡುತ್ತೇನೆ ಎಂದು ತಿಳಿಸಿದರು.
Photos : 407ನೇ ಮೈಸೂರು ದಸರಾಗೆ ವೈಭವದ ಚಾಲನೆ
ಪ್ರವಾಸಿಗರಿಗೆ ಆರತಿ ಬೆಳಗಿ ಸ್ವಾಗತ
ದೇಶ ವಿದೇಶಗಳಿಂದ ಜನರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಮೈಸೂರಿನ ಜನನೀ ಟ್ರಸ್ಟ್ ವತಿಯಿಂದ ಮೈಸೂರಿಗೆ ಆಗಮಿಸಿದ ದೇಶ-ವಿದೇಶಗಳ ಆತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿದೇಶದಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಜನತೆಯನ್ನು ಅರಮನೆಯ ಬಳಿ ಆರತಿ ಬೆಳಗಿ, ಹೂ ನೀಡಿ, ಮೈಸೂರು ಪೇಟ ತೊಡಿಸಿ, ಮಹಿಳೆಯರಿಗೆ ಬಳೆ ನೀಡಿ, ಪನ್ನೀರು ಚಿಮುಕಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ಪ್ರವಾಸಿಗರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು ಬಂದಿದ್ದೇವೆ. ನೀವು ಆತ್ಮೀಯವಾಗಿ ನಮ್ಮನ್ನು ಸ್ವಾಗತಿಸಿರುವುದು ನಮಗೆ ಸಂತಸ ನೀಡಿದೆ ಎಂದರು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಅರಮನೆ ಆಡಳಿತ ಮಂಡಳಿಯ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣಿ, ಜನನಿ ಟ್ರಸ್ಟ್ ಅಧ್ಯಕ್ಷ .ಕೆ.ಅಶೋಕ್, ಡಿ.ಟಿ.ಪ್ರಕಾಶ್, ನಾಗರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications