ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ: ವ್ಯಕ್ತಿ ಸಾವು
ಮೈಸೂರು: ಕರ್ನಾಟಕದ ಚಿತ್ರದುರ್ಗದಲ್ಲಿ ಗುರುವಾರ ಮುಂಜಾನೆ ತೀವ್ರ ರಸ್ತೆ ಅಪಘಾತ ಸಂಭವಿಸಿತ್ತು. ಇದೀಗ ಸಂಜೆ ಮೈಸೂರಿನಲ್ಲಿ ಮತ್ತೊಂದು ಭೀಕರ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರಿನ ಅರಮನೆಯ ಮುಂದೆ ಬಲೂನ್ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಬ್ಲಾಸ್ಟ್ನಿಂದಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರ ಸ್ಫೋಟದ ಸದ್ದಿನಿಂದ ಅರಮನೆ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಬ್ಲಾಸ್ಟ್ನಲ್ಲಿ ಗಾಯಗೊಂಡಿರುವವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅವಘಡದಲ್ಲಿ ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಬಲೂನ್ಗೆ ಗ್ಯಾಸ್ ತುಂಬುವ ವ್ಯಕ್ತಿಗೆ ಗಾಯವಾಗಿದ್ದು, ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಲಭ್ಯವಾಗಬೇಕಾಗಿದೆ.

ಇನ್ನು ಘಟನೆ ಸಂಭವಿಸಿದ ಸ್ಥಳಕ್ಕೆ ಮೈಸೂರಿನ ಕೃಷ್ಣರಾಜ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ಈ ಅವಘಡ ಸಂಭವಿಸಿದ್ದು, ಕೆಲ ಕ್ಷಣಗಳ ಕಾಲ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವಘಡದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯರ ನೆರವಿನೊಂದಿಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿರಾರು ಜನ ಸೇರಿದ್ದರು
ಇನ್ನು ಗುರುವಾರ (ಡಿಸೆಂಬರ್ 25)ರಂದು ಕ್ರಿಸ್ಮಸ್ ಹಾಗೂ ವರ್ಷಾಂತ್ಯದ ರಜೆ ಇರುವ ಹಿನ್ನೆಲೆಯಲ್ಲಿ ಅರಮನೆ ಹಾಗೂ ಅರಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿಗರು ಸೇರಿದಂತೆ ಸಾವಿರಾರು ಜನ ಸೇರಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದಿಂದ ವ್ಯಕ್ತಿಯೊಬ್ಬರ ಮೃತದೇಶ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಪೊಲೀಸರಿಂದ ಹೆಚ್ಚಿನ ತನಿಖೆ
ಇನ್ನು ಅರಮನೆ ಮೈದಾನದಲ್ಲಿ ಸಂಭವಿಸಿರುವ ಸಿಲಿಂಡರ್ ಸ್ಫೋಟಕ್ಕೆ ಸಂಭವಿಸಿದಂತೆ ಮೈಸೂರು ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ಈ ಸ್ಫೋಟಕ್ಕೆ ನಿಖರ ಕಾರಣ ಏನು ಎನ್ನುವುದಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications