ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ: ವ್ಯಕ್ತಿ ಸಾವು
ಮೈಸೂರು: ಕರ್ನಾಟಕದ ಚಿತ್ರದುರ್ಗದಲ್ಲಿ ಗುರುವಾರ ಮುಂಜಾನೆ ತೀವ್ರ ರಸ್ತೆ ಅಪಘಾತ ಸಂಭವಿಸಿತ್ತು. ಇದೀಗ ಸಂಜೆ ಮೈಸೂರಿನಲ್ಲಿ ಮತ್ತೊಂದು ಭೀಕರ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳ ಪರಿಸ್ಥಿತಿ ಗಂಭೀರವಾಗಿದೆ. ಮೈಸೂರಿನ ಅರಮನೆಯ ಮುಂದೆ ಬಲೂನ್ಗೆ ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಬ್ಲಾಸ್ಟ್ನಿಂದಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಹಲವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ತೀವ್ರ ಸ್ಫೋಟದ ಸದ್ದಿನಿಂದ ಅರಮನೆ ಆವರಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೈಟ್ರೋಜನ್ ಗ್ಯಾಸ್ ತುಂಬಿಸುವಾಗ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಈ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಬ್ಲಾಸ್ಟ್ನಲ್ಲಿ ಗಾಯಗೊಂಡಿರುವವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅವಘಡದಲ್ಲಿ ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದು ಬಂದಿದೆ. ಬಲೂನ್ಗೆ ಗ್ಯಾಸ್ ತುಂಬುವ ವ್ಯಕ್ತಿಗೆ ಗಾಯವಾಗಿದ್ದು, ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಲಭ್ಯವಾಗಬೇಕಾಗಿದೆ.

ಇನ್ನು ಘಟನೆ ಸಂಭವಿಸಿದ ಸ್ಥಳಕ್ಕೆ ಮೈಸೂರಿನ ಕೃಷ್ಣರಾಜ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರಮನೆಯ ಜಯಮಾರ್ತಂಡ ದ್ವಾರದ ಬಳಿ ಈ ಅವಘಡ ಸಂಭವಿಸಿದ್ದು, ಕೆಲ ಕ್ಷಣಗಳ ಕಾಲ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅವಘಡದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯರ ನೆರವಿನೊಂದಿಗೆ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿರಾರು ಜನ ಸೇರಿದ್ದರು
ಇನ್ನು ಗುರುವಾರ (ಡಿಸೆಂಬರ್ 25)ರಂದು ಕ್ರಿಸ್ಮಸ್ ಹಾಗೂ ವರ್ಷಾಂತ್ಯದ ರಜೆ ಇರುವ ಹಿನ್ನೆಲೆಯಲ್ಲಿ ಅರಮನೆ ಹಾಗೂ ಅರಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿಗರು ಸೇರಿದಂತೆ ಸಾವಿರಾರು ಜನ ಸೇರಿದ್ದರು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದಿಂದ ವ್ಯಕ್ತಿಯೊಬ್ಬರ ಮೃತದೇಶ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಪೊಲೀಸರಿಂದ ಹೆಚ್ಚಿನ ತನಿಖೆ
ಇನ್ನು ಅರಮನೆ ಮೈದಾನದಲ್ಲಿ ಸಂಭವಿಸಿರುವ ಸಿಲಿಂಡರ್ ಸ್ಫೋಟಕ್ಕೆ ಸಂಭವಿಸಿದಂತೆ ಮೈಸೂರು ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ. ಈ ಸ್ಫೋಟಕ್ಕೆ ನಿಖರ ಕಾರಣ ಏನು ಎನ್ನುವುದಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ನಿಖರ ಮಾಹಿತಿ ಲಭ್ಯವಾಗಬೇಕಾಗಿದೆ.
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ











Click it and Unblock the Notifications