ವರಮಹಾಲಕ್ಮಿ ಹಬ್ಬಕ್ಕೂ ರೇಷ್ಮೆ ಸೀರೆ ಡಿಸ್ಕೌಂಟ್ ಆಫರ್ ಇಲ್ಲ
ಮೈಸೂರು, ಆಗಸ್ಟ್ 23 : ಸಚಿವ ಸಾರಾ ಮಹೇಶ್ ರವರ ಕನಸಿನ ಯೋಜನೆಯಾದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಕಡಿಮೆ ದರದಲ್ಲಿ ಮೈಸೂರು ಸಿಲ್ಕ್ ಸೀರೆ ನೀಡುವ ಯೋಜನೆಯನ್ನು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್ಐಸಿ ) ತೆಗೆದುಹಾಕಿದೆ.
ಕೊಡಗು ಪ್ರವಾಹ ಪರಿಸ್ಥಿತಿ ಎದುರಾದ ಕಾರಣ ರಿಯಾಯಿತಿ ದರದಲ್ಲಿ ಸೀರೆ ಮಾರಾಟ ಇಲ್ಲ ಎಂದು ಕೆಎಸ್ಐಸಿ ತಿಳಿಸಿದೆ.

ಈ ಹಿನ್ನೆಲೆ ಹಬ್ಬದ ಪ್ರಯುಕ್ತ ರಿಯಾಯಿತಿ ದರದಲ್ಲಿ ಸೀರೆ ಕೊಳ್ಳಲು ಬಂದ ಮಹಿಳೆಯರು ಫಲಕ ನೋಡಿ ನಿರಾಸೆಯಿಂದ ಹಿಂದಿರುಗುತ್ತಿದ್ದಾರೆ.
ಇತ್ತ ಮೈಸೂರಿನಲ್ಲಿ ಸಿಲ್ಕ್ ಸೀರೆಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡದಿರಲು ಆಗ್ರಹಿಸಿ ಸಿಲ್ಕ್ ಸೀರೆ ತಯಾರಿಕಾ ಕಂಪೆನಿಯ ನೌಕರರು ಪತ್ರಿಭಟನೆ ನಡೆಸಿದ್ದಾರೆ.
ರಿಯಾಯಿತಿ ದರದಲ್ಲಿ 10,500 ರೂ. ರೇಷ್ಮೆಸೀರೆಯನ್ನು 4,500 ರೂ.ಗೆ ಗ್ರಾಹಕರು ಕೊಂಡುಕೊಳ್ಳಬಹುದಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮೈಸೂರು ಸಿಲ್ಕ್ ಫ್ಯಾಕ್ಟರಿ ನೌಕರರು, ರಿಯಾಯಿತಿ ದರದಲ್ಲಿ ನೀಡಿದರೆ ಫ್ಯಾಕ್ಟರಿಗೆ ಕೋಟ್ಯಂತರ ರೂಪಾಯಿ ನಷ್ಟ ಆಗಲಿದೆ. ಮೊದಲು ರಿಯಾಯಿತಿ ದರದ ಹಣವನ್ನು ಒದಗಿಸಿ. ಆ ಬಳಿಕ ರಿಯಾಯಿತಿ ದರದಲ್ಲಿ ಸೀರೆ ಮಾರಾಟ ಮಾಡಿ ಎಂದು ಪ್ರತಿಭಟನೆ ನಡೆಸಿದರು.
ಈ ಯೋಜನೆಯಿಂದ ಸಂಸ್ಥೆಗೆ 6 ಕೋಟಿ ನಷ್ಟ ಆಗಲಿದೆ. ಹೀಗಾಗಿ ವರಮಹಾಲಕ್ಷ್ಮಿ ಹಬ್ಬದಂದು ರಿಯಾಯಿತಿ ದರದಲ್ಲಿ ಸೀರೆ ಮಾರಾಟ ಮಾಡಲು ನಾವು ಬಿಡುವುದಿಲ್ಲ. ಕಡಿಮೆ ದರದಲ್ಲಿ ಸೀರೆ ಕೊಡುವ ಕ್ರಮವನ್ನು ಕೂಡಲೇ ಕೈ ಬಿಡಬೇಕು. ಇಲ್ಲವಾದರೆ ಫ್ಯಾಕ್ಟರಿ ಮುಚ್ಚಲಿದೆ.
ಇದು ಸರ್ಕಾರಿ ಸಂಸ್ಥೆಯಾಗಿರುವುದರಿಂದ ಈಗಾಗಲೇ 10% ರಿಯಾಯಿತಿ ನೀಡಲಾಗುತ್ತಿದೆ. ಕೂಡಲೇ ಈ ಯೋಜನೆ ಕೈಬಿಡುವಂತೆ ನೌಕರರು ಆಗ್ರಹಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications