ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿಷೇಧ
ಮೈಸೂರು, ಜೂನ್ 26: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಏರಿದೆ. ಆಷಾಢ ಮಾಸ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪ್ರತಿ ವರ್ಷ ಆಷಾಢ ಮಾಸದಲ್ಲಿ ಸಾವಿರಾರು ಭಕ್ತರಿಂದ ಬೆಟ್ಟ ತುಂಬಿ ತುಳುಕುತ್ತಿತು. ಸಾವಿರಾರು ಮಂದಿಗೆ ಪ್ರಸಾದ ವಿತರಣೆಗೆ ಸಾಕ್ಷಿಯಾಗಿತ್ತು. ಆದರೆ ಕೊರೊನಾ ವೈರಸ್ ಸೋಂಕಿನ ಆತಂಕದಲ್ಲಿ ಚಾಮುಂಡಿ ಬೆಟ್ಟ ಸಂಪೂರ್ಣ ಖಾಲಿ ಖಾಲಿಯಾಗಿದೆ. ಚಾಮುಂಡಿ ಬೆಟ್ಟ ಭಕ್ತರಿಲ್ಲದೆ ಬಣಗುಡುತ್ತಿದೆ.
ಬೆಟ್ಟದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ವಿಶೇಷ ಅಲಂಕಾರ ರದ್ದು ಮಾಡಲಾಗಿದೆ. 7.30ರವರೆಗು ಧಾರ್ಮಿಕ ವಿಧಿ ವಿಧಾನ ಮುಗಿಸಿ ದೇಗುಲಕ್ಕೆ ಬೀಗ ಹಾಕಲಾಗುತ್ತದೆ. ಭಕ್ತರ ವಿಶೇಷ ಪೂಜಾ ವ್ಯವಸ್ಥೆಗೂ ಬ್ರೇಕ್ ಹಾಕಲಾಗಿದೆ.

ಹೀಗಾಗಿ, ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮೊದಲ ಶುಕ್ರವಾರ ಭಕ್ತರಿಲ್ಲದೆ ಖಾಲಿಯಾಗಿದೆ. ಭಕ್ತರಿಗೆ ಅವಕಾಶ ನೀಡದ ಕಾರಣ ಪ್ರಸಾದ ವಿತರಣೆಗು ಜಿಲ್ಲಾಢಳಿತ ಬ್ರೇಕ್ ಹಾಕಿದೆ.












Click it and Unblock the Notifications