Mysuru: ಮೈಸೂರು ಅರಮನೆ ಮುಂದೆ ಪಾರಿವಾಳಗಳಿಗೆ ಕಾಳು ಹಾಕುವಂತಿಲ್ಲ
ಮೈಸೂರು ಅರಮನೆ ಮುಂದೆ ಇನ್ನು ಗುಂಪು ಗುಂಪಾಗಿ ಪಾರಿವಾಳಗಳನ್ನು ನೋಡಲು ಕಷ್ಟವಾಗಬಹುದು. ಪಾರಿವಾಳ ಗುಂಪಾಗಿ ಮೇಯುವುದು, ಹಾರುವುದು ನೋಡಲು, ಅವುಗಳ ಮುಂದೆ ಫೋಟೊ, ವಿಡಿಯೋ ಮಾಡಿಕೊಳ್ಳಲು ಚಂದವೇ ಎನಿಸಿದರೂ, ಹಲವು ಅಪಾಯಗಳು ಕೂಡ ಇದೆ. ಪಾರಿವಾಳಗಳಿಂದ ಪಾರಂಪರಿಕ ಕಟ್ಟಡಗಳಿಗೆ ಹಾನಿಯಾಗುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದ ನಂತರ, ಅರಮನೆ ಆವರಣದ ಮುಂದೆ ಪಾರಿವಾಳಗಳಿಗೆ ಇನ್ನು ಮುಂದೆ ಕಾಳು ಹಾಕುವುದನ್ನು ನಿಲ್ಲಿಸಲಾಗಿದೆ.
ಅರಮನೆ ಆವರಣದ ಮುಂಭಾಗ ದಿನ ನಿತ್ಯ ಪಾರಿವಾಳಗಳಿಗೆ ಕಾಳು, ಆಹಾರ ನೀಡಲಾಗುತ್ತಿತ್ತು. ಕಾಳು ತಿಂದ ಬಳಿಕ ಪಾರಿವಾಳಗಳು ಅರಮನೆ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಪ್ರತಿಮೆಗಳ ಮೇಲೆ ಕುಳಿತು ಹಿಕ್ಕೆ ಹಾಕುತ್ತಿದ್ದವು ಇದರಿಂದ ಕಟ್ಟಡಗಳಿಗೆ ಹಾನಿಯಾಗುತ್ತಿದ್ದು, ಸಾಕಷ್ಟು ದೂರು ಕೇಳಿಬಂದಿತ್ತು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಧಾನ ಸಭೆ ನಡೆಸಿದ್ದು ಪಾರಿವಾಳಗಳಿಗೆ ಕಾಳು ಹಾಕುವುದಕ್ಕೆ ಬ್ರೇಕ್ ಬಿದ್ದಿದೆ. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಂಸದ ಯದುವೀರ್ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಾರಿವಾಳಗಳಿಂದ ಅಪಾರ ಹಾನಿ
ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಆಗುವ ಹಾನಿಗಳ ಬಗ್ಗೆ ಇತಿಹಾಸ ತಜ್ಞ ಪ್ರೊ.ರಂಗರಾಜು ಸಂಪೂರ್ಣ ಮಾಹಿತಿ ನೀಡಿದರು. ಪಾರಿವಾಳಗಳಿಗೆ ಆಹಾರ ನೀಡುವ ಮೊದಲು ಅವುಗಳ ಸಂಖ್ಯೆ 300 ಇತ್ತು, ಈಗ ಪಾರಿವಾಳಗಳ ಸಂಖ್ಯೆ 3000 ದಾಟಿದೆ. ಪಾರಿವಾಳ ಸತ್ತಾಗ ತಿನ್ನಲು ಬರುವ ಹೆಗ್ಗಣಗಳು ಬಿಲ ತೋಡುತ್ತವೆ. ಈಗಾಗಲೇ ಅರಮನೆ ಆವರಣದ ಬಳಿ 300 ಬಿಲಗಳನ್ನು ಮಾಡಿಕೊಂಡಿವೆ, ಆದ್ದರಿಂದ ಪಾರಿವಾಳಗಳಿಗೆ ಕಾಳು ಹಾಕುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಡಾ. ಮಧು ಮಾತನಾಡಿ, ಪಾರಿವಾಳಗಳು ಸಾರ್ವಜನಿಕ ಸ್ಥಳಗಳಲ್ಲಿ ಹಿಕ್ಕೆ ಹಾಕುವದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಚರ್ಮಕಾಯಿಲೆ, ಅಲರ್ಜಿ ಸೇರಿ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಮಾರ್ಗದಲ್ಲಿ ಓಡಾಡುವರಿಗೆ ಹಿಕ್ಕೆಯ ಕೆಟ್ಟ ವಾಸನೆಯಿಂದ ತಲೆಸುತ್ತು ಬಂದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾರ್ವಜನಿಕರು ಪಾರಿವಾಳಗಳಿಗೆ ಕಾಳು ಹಾಕುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಳಿಕ, ಕಬೂತರ್ ದಾನ್ ಜೈನ್ ಸಂಘಟನೆ ಮುಖ್ಯಸ್ಥ ವಿನೋದ್ ಮಾತನಾಡಿ, ನಾವು ಯಾರಿಗೂ ತೊಂದರೆ ಕೊಡವುದಿಲ್ಲ, ಇಂದಿನಿಂದಲೇ ಪಾರಿವಾಳಗಳಿಗೆ ಆಹಾರ ಕೊಡುವುದನ್ನು ನಿಲ್ಲಿಸುತ್ತೇವೆ ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications