ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಲಾಕ್​ಡೌನ್ ಮುಂದುವರಿಕೆ ಯಾಕೆ ಅನಿವಾರ್ಯ?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 08: ಮೈಸೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯಾದ್ಯಂತ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮವನ್ನೂ ತೆಗೆದುಕೊಳ್ಳಲಾಗಿದೆ. ಆದರೆ ಇನ್ನೂ ಜನ ಎಚ್ಚೆತ್ತಂತೆ ಕಾಣುತ್ತಿಲ್ಲ.

Recommended Video

ಲಾಕ್ ಡೌನ್ ಇದ್ರೂ ರಸ್ತೆಗೆ‌ ಇಳಿಯಲಿವೆ ಓಲಾ ಮತ್ತು ಉಬರ್ ಕ್ಯಾಬ್ ಗಳು | Oneindia Kannada

ದೇಶಕ್ಕೆಲ್ಲ ಒಂದು ಕಾನೂನಾದರೆ, ಮೈಸೂರಿನ ನರಸಿಂಹರಾಜ ಕ್ಷೇತ್ರಕ್ಕೇ ಮತ್ತೊಂದು ಕಾನೂನಾ ಎಂಬ ಪ್ರಶ್ನೆ ಮೂಡುತ್ತಿದೆ. ಮೈಸೂರಿನ ಮಂಡಿ ಮೊಹಲ್ಲಾ, ನಜರ್​ಬಾದ್, ಕಲ್ಯಾಣಗಿರಿ, ಉದಯಗಿರಿಯಲ್ಲಿ ಜನ ಸಂಚಾರ ಮಾಮೂಲಿನಂತೆಯೇ ಸಾಗಿದೆ. ಲಾಕ್ ಡೌನ್ ಗೆ ತಲೆಕೆಡಿಸಿಕೊಳ್ಳದೇ ಜನ ಕಾರು, ಬೈಕ್​ಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದಾರೆ.

ನಂಜನಗೂಡು ಜುಬಿಲಿಯಂಟ್ ಕಾರ್ಖಾನೆ ಕುರಿತು ಡಿಸಿ ಹೇಳುತ್ತಿರುವುದೇನು?ನಂಜನಗೂಡು ಜುಬಿಲಿಯಂಟ್ ಕಾರ್ಖಾನೆ ಕುರಿತು ಡಿಸಿ ಹೇಳುತ್ತಿರುವುದೇನು?

ರಸ್ತೆಗೆ ಬರಬೇಡಿ ಎಂದು ಪೊಲೀಸ್ ಅಧಿಕಾರಿಗಳು ಎಷ್ಟೇ ಮನವಿ ಮಾಡಿದರೂ ಜನ ಅದಕ್ಕೆ ಸ್ಪಂದಿಸಿದಂತೆ ಕಾಣುತ್ತಿಲ್ಲ. ಕಟ್ಟುನಿಟ್ಟಿನ ಕ್ರಮ ವಹಿಸುವಲ್ಲಿ ನಗರದ ಪೊಲೀಸರು ಹೈರಾಣಾಗಿದ್ದಾರೆ. ಮೈಸೂರು ನಗರ ಕೇಂದ್ರದಲ್ಲಿ ಮಾತ್ರ ಎಲ್ಲ ಕಾನೂನುಗಳು ಜಾರಿಯಾಗಿವೆ. ಆದರೆ ಜನ ಹೀಗೆ ಆರಾಮಾಗಿ ಓಡಾಡುತ್ತಿರುವುದನ್ನು ನೋಡಿದರೆ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯ ಬಡಾವಣೆಗಳಿಗೆ ಯಾವುದೇ ನಿಯಮ ಅನ್ವಯಿಸುತ್ತಿಲ್ಲ ಎಂಬುದು ತಿಳಿಯುತ್ತಿದೆ.

No Lockdown Rules Followed In Narasimharaja Constituency In Mysuru

ಉದಯಗಿರಿ ಪೊಲೀಸ್ ಠಾಣೆ ಮುಂಭಾಗದ ರಸ್ತೆಯಲ್ಲೇ ಜನ ಕಿಕ್ಕಿರಿದಿರುತ್ತಾರೆ. ಸಾಮಾಜಿಕ ಅಂತರವೂ ಇಲ್ಲಿ ಮಂಗ ಮಾಯವಾಗಿದೆ. ಈ ಬಗ್ಗೆ ನಿಗಾ ವಹಿಸುವವರು ಯಾರೂ ಇಲ್ಲವಾ ಎಂಬ ಪ್ರಶ್ನೆಯೂ ಮೂಡುತ್ತದೆ. ಮೈಸೂರಿನಲ್ಲಿ ಲಾಕ್​ಡೌನ್ ಮುಂದುವರಿಕೆ ಅನಿವಾರ್ಯವೂ ಅನಿಸಿಬಿಡುತ್ತದೆ.

English summary
People in narasimharaja constituency are not following lockdown rules. Though corona cases increasing in mysuru, they are not worried
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X