ದೇಶದಲ್ಲೇ ಕುಮಾರಸ್ವಾಮಿಯಂತಹಾ ಇನ್ನೊಬ್ಬ ರಾಜಕಾರಣಿ ಇಲ್ಲ: ದೇವೇಗೌಡ
ಬೆಂಗಳೂರು, ಅಕ್ಟೋಬರ್ 11: ದೇಶದಲ್ಲೇ ಕುಮಾರಸ್ವಾಮಿ ಅವರಂತಹಾ ಇನ್ನೊಬ್ಬ ರಾಜಕಾರಣಿ ಇಲ್ಲ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೇಳಿದರು.
ಮೈಸೂರಿನ ಗದ್ದಿಗೆಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದೇವೇಗೌಡ ಅವರು, 'ಏಡ್ಸ್ ಪೀಡಿತ ಮನೆಗೆ ಹೋಗಿದ್ದ ಕುಮಾರಸ್ವಾಮಿ ವಾಸ್ತವ್ಯ, ಅವರ ಜೊತೆ ಊಟ ಮಾಡಿದ್ದಾರೆ' ಈ ರೀತಿ ದೇಶದ ಇನ್ನಾವುದೇ ರಾಜಕಾರಣಿಯೂ ಮಾಡಿಲ್ಲ ಎಂದರು.
'ಜೆಡಿಎಸ್ ಪಕ್ಷ ಯಾವ ಸಮುದಾಯಕ್ಕೂ ತಾರತಮ್ಯ ಮಾಡಿಲ್ಲ, ಈ ವಯಸ್ಸಿನಲ್ಲಿ ನಾನು ಯಾರಿಗೋಸ್ಕರ ಪಾದಯಾತ್ರೆ ಮಾಡುತ್ತಿದ್ದೇನೆ, ರಾಜ್ಯದ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಆದರೆ ಕೇಂದ್ರ ರಾಜ್ಯದ ಬಗ್ಗೆ ತಾರತಮ್ಯ ಮಾಡಿದೆ. ನಾನು ಈಗ ಲೋಕಸಭೆಯಲ್ಲಿಲ್ಲ ಆದರೂ ಎರಡು ಬಾರಿ ಮೋದಿಗೆ ಪತ್ರ ಬರೆದಿದ್ದೇನೆ' ಎಂದು ದೇವೇಗೌಡ ಹೇಳಿದರು.

'ಕೇಂದ್ರವು ರಾಜ್ಯದ ಬಗ್ಗೆ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ಜನರು ನೋಡಬೇಕು, ರಾಜ್ಯಕ್ಕೆ ಆಗಿರುವ ನಷ್ಟ 38,000 ಕೋಟಿ ಆದರೆ ಕೊಟ್ಟಿರುವುದು 1200 ಕೋಟಿ, ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು' ಎಂದು ದೇವೇಗೌಡ ಹೇಳಿದರು.
ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ ದೇವೇಗೌಡರು, 'ರಾಜ್ಯದ ಬಿಜೆಪಿ ಸರ್ಕಾರಕ್ಕೆ ಹೆಚ್ಚು ಆಯುಷ್ಯವಿಲ್ಲ, ಅವರಲ್ಲೇ ಕಚ್ಚಾಟ ಆರಂಭವಾಗಿದೆ. ಈ ಸರ್ಕಾರ ಯಾವಾಗ ಬೇಕಾದರೂ ಉರುಳಬಹುದು, ಮೇಲಾಗಿ ಇದೇ ತಿಂಗಳ 22 ರಂದು ಅನರ್ಹರ ಬಗ್ಗೆ ತೀರ್ಪು ಹೊರಬೀಳಲಿದೆ. ತೀರ್ಪಿನ ಮೇಲೆ ರಾಜ್ಯದ ರಾಜಕೀಯ ಭವಿಷ್ಯ ನಿರ್ಧಾರಿತವಾಗಿದೆ' ಎಂದು ಅವರು ಹೇಳಿದರು.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications