ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂದ್ ಮಾಡುವವರು ಸಂಪರ್ಕಿಸಿಯೇ ಇಲ್ಲ: ಕುರುಬೂರು

|
Google Oneindia Kannada News

ಮೈಸೂರು, ಮೇ 27: ಕುಮಾರಸ್ವಾಮಿ ಅವರ ನೇತೃತದ ಸರ್ಕಾರ ಈಗ ತಾನೆ ಅಸ್ತಿತ್ವಕ್ಕೆ ಬಂದಿದೆ. ಈಗಲೇ ಸಾಲಮನ್ನಾ ಮಾಡುವಂತೆ ಒತ್ತಡ ಹೇರುವುದು ಸರಿಯಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಬಂದ್ ನಡೆಸುವವರಾರೂ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ನಾವು ಅದಕ್ಕೆ ಬೆಂಬಲ ನೀಡುವುದಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಾಲ ಮನ್ನಾ ಮಾಡುತ್ತಾರೆ ಎಂಬ ವಿಶ್ವಾಸವಿದೆ.

ಸಾಲ ಮನ್ನಾ ಮಾಡದಿದ್ದರೆ ರಾಜೀನಾಮೆ ಕೊಡುವೆ : ಎಚ್.ಡಿ.ಕುಮಾರಸ್ವಾಮಿಸಾಲ ಮನ್ನಾ ಮಾಡದಿದ್ದರೆ ರಾಜೀನಾಮೆ ಕೊಡುವೆ : ಎಚ್.ಡಿ.ಕುಮಾರಸ್ವಾಮಿ

ಅವರನ್ನು ಶೀಘ್ರದಲ್ಲಿಯೇ ಭೇಟಿ ಮಾಡಿ, ಸಾಲ ಮನ್ನಾ ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

no support to karnataka bandh kuruburu shanthakumar

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಣಾಳಿಕೆಯಲ್ಲಿ ಹೇಳಿದ್ದರು. ಅವರು ತಕ್ಷಣ ಸಾಲ ಮನ್ನಾ ಮಾಡದೆ ಇದ್ದರೆ ಸೋಮವಾರ ಕರ್ನಾಟಕ ಬಂದ್ ನಡೆಸುವುದಾಗಿ ಸದನದಲ್ಲಿ ಹೇಳಿದ್ದರು.

ಆದರೆ, ರಾಜ್ಯ ರೈತ ಸಂಘ ಸೇರಿದಂತೆ ಬಹುತೇಕ ಸಂಘಟನೆಗಳು, ಸಂಸ್ಥೆಗಳು ರಾಜ್ಯ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಹೇಳಿಕೆ ನೀಡಿವೆ.

English summary
President of Kabbu Belegaarara Sangha Kuruburu Shanthakumar has said that, the organization will not support the Karnataka bandh called by BJP for demanding loan waive of formers loan ಬಂದ್ ಮಾಡುವವರು ಸಂಪರ್ಕಿಸಿಯೇ ಇಲ್ಲ: ಕುರುಬೂರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X