ಎಚ್ಡಿಕೆ ಮುಂದಿನ ಮುಖ್ಯಮಂತ್ರಿ: ವಿಶ್ವನಾಥ್ ಗ್ಯಾರಂಟಿ
ಮೈಸೂರು, ಆಗಸ್ಟ್ 29: ಸಿ.ಪೋರ್ ಸಮೀಕ್ಷೆಯಿಂದ ಬೀಗುವುದು ಬೇಡ ಹಣ ನೀಡಿದರೆ ಯಾರೂ ಬೇಕಾದರೂ, ಯಾವ ಪಕ್ಷಕ್ಕೆ ಬೇಕಾದರೂ ಸರ್ಟಿಫಿಕೆಟ್ ಕೊಡುತ್ತಾರೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ 7ನೇ ವಾರ್ಡಿನಲ್ಲಿ ಆಯೋಜಿಸಿದ್ದ ಸಾಮೂಹಿಕ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ನಿರ್ಣಾಯಕ ಪಾತ್ರವಹಿಸಲಿದೆ, ರಾಜ್ಯದ ಜನತೆ ಈಗಾಗಲೇ ಜಾಗರೂಕರಾಗಿದ್ದು, ಯಾವ ಸಮೀಕ್ಷೆಯಿಂದಲೂ ಜನರ ಮನಸ್ಸನ್ನು ಬದಲಾಯಿಸಲು ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದರು.
ಇದೇ ವೇಳೆ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ಕಾಲೂನಿಯ ಪುರಸಭೆ ಮಾಜಿ ಅಧ್ಯಕ್ಷ ಬಿ.ಕೆ. ಶಿವಪ್ಪನವರ ಮೊಮ್ಮಗ ಚೇತನ್ ಕುಮಾರ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜಿಸಿದ ಹಿನ್ನಲೆಯಲ್ಲಿ ಪಟ್ಟಣದ ಹಾಗೂ ತಾಲೂಕಿನ ನೂರಾರು ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಎಚ್.ವಿಶ್ವನಾಥ್ ಮತ್ತು ಹರೀಶ್ ಗೌಡ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದು ವಿಶೇಷವಾಗಿತ್ತು.
ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಜೆಡಿಎಸ್ ಸೇರ್ಪಡೆಗೊಂಡ ನಂತರ ಹಲವಡೆ ಯುವಕರು, ಇತರೆ ಪಕ್ಷದ ಕಾರ್ಯಕರ್ತರು, ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ವಿಶ್ವನಾಥ್ ಅವರಿಗೆ ಹುಮ್ಮಸ್ಸು ಮೂಡಿಸಿದೆ. ಜತೆಗೆ ಈಗಾಗಲೇ ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಅವರೇ ಸ್ಪರ್ಧಿಸುವುದು ಖಚಿತವಾಗಿರುವುದರಿಂದ ಜೆಡಿಎಸ್ ಸಕ್ರಿಯವಾಗಿರುವುದು ಕಂಡು ಬರುತ್ತಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications