ಬಿಸಿಯೂಟದ ಸಾಮಗ್ರಿಯಲ್ಲೇ ಮೈಸೂರಿನ ಶಾಲೆಯಲ್ಲಿ ಭರ್ಜರಿ ಬಾಡೂಟ
ಮೈಸೂರು, ಜುಲೈ 6: ಸರಕಾರಿ ಜಾಗದಲ್ಲಿ ಗೋಮಾಂಸ ತಿಂದ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಮಾಂಸದೂಟದ ಪ್ರಕರಣ ನಡೆದಿದೆ. ಸರಕಾರಿ ಅನುದಾನಿತ ಶಾಲೆಯಲ್ಲಿ ಶಿಕ್ಷಕರು ಮಾಂಸದೂಟ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಬುಧವಾರ ಮಧ್ಯಾಹ್ನ ಶಿಕ್ಷಕರು ಶಾಲೆ ಕಚೇರಿಯ ಒಳಗೆ ಕುಳಿತು ಮಾಂಸದೂಟ ಸವಿದಿದ್ದಾರೆ. ಬಿಸಿಯೂಟಕ್ಕೆ ಸರಕಾರ ನೀಡುವ ಸಾಮಗ್ರಿಗಳನ್ನು ಬಳಸಿ, ಬಿಸಿ ಊಟ ತಯಾರಿಸುವ ಸಿಬ್ಬಂದಿಯಿಂದಲೇ ಈ ಮಾಂಸದೂಟ ತಯಾರಿಸಲಾಗಿದೆ.

ಶಾಲೆಯ ಸಿಬ್ಬಂದಿಯೊಬ್ಬರ ವರ್ಗಾವಣೆ ಹಾಗೂ ಇಬ್ಬರು ನೂತನ ಶಿಕ್ಷಕರ ಆಗಮನದ ಅಂಗವಾಗಿ ಈ ಮಾಂಸದೂಟ ವ್ಯವಸ್ಥೆ ಮಾಡಿಸಲಾಗಿದೆ. ಸರಕಾರಿ ಕಚೇರಿ, ಸರ್ಕಾರಿ ಅನುದಾನಿತ ಕಚೇರಿಗಳಲ್ಲಿ ಮಾಂಸದೂಟ ಸೇವಿಸುವಂತಿಲ್ಲ. ಇಂತಹದರಲ್ಲಿ ಹೀಗೆ ಬಿಸಿ ಊಟದ ಸಾಮಗ್ರಿಗಳನ್ನು ಬಳಸಿ ಮಾಂಸದೂಟ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

ಒಟ್ಟಾರೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು ಇಂಥ ಕಾರಣಗಳಿಗೆ ಸುದ್ದಿ ಆಗುತ್ತಿರುವುದನ್ನು ಗಮನಿಸಿದರೆ, ಜಿಲ್ಲಾಡಳಿತವು ಹಿಡಿತ ಕಳೆದುಕೊಂಡಿದೆಯೇ ಎಂಬ ಅನುಮಾನ ಮೂಡುತ್ತದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications