ಮೈಸೂರಿನಲ್ಲಿ ಅನಿವಾಸಿ ಭಾರತೀಯರ 'ನಾವಿಕೋತ್ಸವ'
ಮೈಸೂರು, ಏಪ್ರಿಲ್ 24: ಅನಿವಾಸಿ ಭಾರತೀಯ ಸಮಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಆಗಸ್ಟ್ 4,5 ರಂದು 'ನಾವಿಕೋತ್ಸವ 2018'ನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ.
ನಮ್ಮ ಕನ್ನಡ ನಾಡನ್ನು ಬಿಟ್ಟು ಬೇರೆ ಬೇರೆ ದೇಶಗಳಲ್ಲಿ, ಪ್ರದೇಶಗಳಲ್ಲಿ ಬದುಕು ಕಟ್ಟಿಕೊಂಡಿದ್ದಾರೆ, ಬೇರೆ ಭಾಷೆಯನ್ನು ಕಲಿತು, ಬೇರೆ ಜನರೊಂದಿಗೆ ಬಾಳುತ್ತಿದ್ದಾರೆ ಆದರೆ ಕನ್ನಡವನ್ನು ಮರೆಯಲು ಸಾಧ್ಯವಿಲ್ಲ, ಯಾವುದಾದರು ಒಂದು ನೆಪ ಹುಡುಕಿಕೊಂಡು ಸೇರುತ್ತಲೆ ಇರುತ್ತಾರೆ ಹಾಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರೆಲ್ಲ ಸೇರಿ ನಾವಿಕ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಯಶಸ್ವಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ.
ಈ ವರ್ಷ ನಾವಿಕ ಸಂಸ್ಥೆ ನಮ್ಮ ವಿಶ್ವಕನ್ನಡೋತ್ಸವ - 2018 ಅಂದರೆ ನಾವಿಕೋತ್ಸವ 2018 ಎಂಬ ಎರಡು ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ.

ಅನಿವಾಸಿ ಭಾರತೀಯ ಸಮಿತಿ ಮತ್ತು ಕನ್ನಡ ಪ್ರಾಧಿಕಾರದ ಸಹಯೋಗದಿಂದ ಆಯೋಜಿಸಲ್ಪಡುವ ಈ ಹಬ್ಬದಲ್ಲಿ ಜಗತ್ತಿನಾದ್ಯಂತ ನೆಲೆಸಿರುವ ಎಲ್ಲ ಕನ್ನಡಿಗರು ಭಾಗವಹಿಸಬೇಕು ಎಂಬುದು ನಾವಿಕದ ಆಶಯವಾಗಿದೆ.
ಈ ಬಾರಿಯ ನಾವಿಕೋತ್ಸವದಲ್ಲಿ ಅಮೆರಿಕನ್ನಡೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಕಲೆ, ಸಾಹಿತ್ಯ ಗೋಷ್ಠಿಗಳು, ವಿಚಾರ ಸಂಕೀರ್ಣಗಳು, ಸಂವಾದ, ಚರ್ಚೆ ಮತ್ತು ಮಾತುಕತೆಗಳಿಗೆ ವೇದಿಕೆ ಕಲ್ಪಿಸಿಕೊಡವ ಸಿದ್ಧತೆಯಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು [email protected] ಗೆ ಇಮೇಲ್ ಕಳುಹಿಸಿ. ನೀವು ಮೈಸೂರಿನವರಾಗಿದ್ದು (ಎನ್ಆರ್ ಐ) ಮತ್ತು ಸ್ವಯಂ ಸೇವೆಗೆ ಇಚ್ಛಿಸಿದ್ದಲ್ಲಿ ಇಮೇಲ್ ಮೂಲಕ ತಿಳಿಸಬಹುದು.
ಈ ಉತ್ಸವದಲ್ಲಿ ಭಾಗವಹಿಸುವ ಎಲ್ಲ ಕನ್ನಡಿಗರಿಗೆ ಆಯೋಜಕರು ವೇದಿಕೆಯಲ್ಲಿ ಅವಕಾಶವನ್ನು ಮಾತ್ರ ಕಲ್ಪಿಸುತ್ತಾರೆ. ಪ್ರವಾಸ ಹಾಗೂ ಊಟೋಪಚಾರದ ಖರ್ಚನ್ನು ಭಾಗವಹಿಸುವವರೇ ಭರಿಸಬೇಕು ಎಂದು ತಿಳಿಸಿದ್ದಾರೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications