ಮೈಸೂರು ಅರಮನೆಗೆ ಎನ್ಎಸ್ ಜಿ ತಂಡ ಭೇಟಿ
ಮೈಸೂರು, ಜು. 23 : ವಿಶ್ವವಿಖ್ಯಾತ ನಾಡಹಬ್ಬ ದಸರಾ ತಯಾರಿ ಮೈಸೂರಿನಲ್ಲಿ ಆರಂಭವಾಗಿದೆ. ಮಂಗಳವಾರ ಅರಮನೆಗೆ ರಾಷ್ಟ್ರೀಯ ಭದ್ರತಾ ಪಡೆಯ ಅಧಿಕಾರಿಗಳು ಭೇಟಿ ನೀಡಿ, ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪ್ರವಾಸಿಗರ ಭದ್ರತೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಅಮಿತ್ ತರೂರ್ ನೇತೃತ್ವದಲ್ಲಿನ 11 ಮಂದಿ ಅಧಿಕಾರಿಗಳ ತಂಡ ಮಂಗಳವಾರ ಅರಮನೆಗೆ ಭೇಟಿ ನೀಡಿತ್ತು. ಮಧ್ಯಾಹ್ನದ ತನಕ ಅರಮನೆ ಆವರಣ ಸೇರಿದಂತೆ ಸುತ್ತಮುತ್ತಲೂ ಕೈಗೊಂಡಿರುವ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿತು. ನಂತರ ಅರಮನೆಗೆ ಒಂದು ಸುತ್ತು ಹಾಕಿದ ತಂಡ ಪ್ರಮುಖ ಸ್ಥಳಗಳ ಭದ್ರತಾ ವ್ಯವಸ್ಥೆ ಬಗ್ಗೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿತು.

ಅಂಬಾ ವಿಲಾಸ ದ್ವಾರ, ಕರಿಕಲ್ಲು ತೊಟ್ಟಿ, ಬ್ರಹ್ಮಪುರಿ ದ್ವಾರ, ಬಲರಾಮ ದ್ವಾರ ಹಾಗೂ ಜಯಮಾರ್ತಾಂಡ ದ್ವಾರದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಅರಮನೆ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಪೊಲೀಸರು ಎನ್ಎಸ್ ಜಿ ಸಿಬ್ಬಂದಿಗೆ ಮಾಹಿತಿ ನೀಡಿದರು. ದಸರಾದ ಪ್ರಮುಖ ಆಕರ್ಷಣೆಯಾದ ಆನೆಗಳು ತಂಗುವ ಬಿಡಾರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿತು. [ಮೈಸೂರು ಮೃಗಾಲಯಕ್ಕೆ ಬಂದ ವಿರಾಟ್, ಬಬ್ಲಿ]
ಅರಮನೆಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾ ವಹಿಸಲು ಅಳವಡಿಸಿರುವ ಸಿಸಿಟಿವಿಗಳ ಪರಿಶೀಲನೆ ನಡೆಸಿದ ತಂಡ, ಪ್ರವೇಶ ದ್ವಾರದಲ್ಲಿ ಪ್ರತಿಯೊಬ್ಬ ಪ್ರವಾಸಿಗರನ್ನು ಪರೀಕ್ಷಿಸಲು ಇಟ್ಟಿರುವ ಲೋಹ ಶೋಧಕ ಯಂತ್ರ ಸೇರಿದಂತೆ ಅರಮನೆ ಹೊರ ಮತ್ತು ಒಳ ಆವರಣಗಳ ಭದ್ರತೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆಯಿತು. [ದಸರಾ ಉದ್ಘಾಟಿಸಲಿದ್ದಾರೆ ಗಿರೀಶ್ ಕಾರ್ನಾಡ್]
ಸಲಹೆ ಇದ್ದರೆ ನೀಡುತ್ತಾರೆ : ಎನ್ಎಸ್ ಜಿ ತಂಡದ ಭೇಟಿ ಬಗ್ಗೆ ಮಾಹಿತಿ ನೀಡಿರುವ ಅರಮನೆ ಭದ್ರತಾ ಪಡೆ ಸಹಾಯಕ ಪೊಲೀಸ್ ಆಯುಕ್ತ ಚನ್ನಯ್ಯ ಅವರು, ಅರಮನೆಗೆ ನಿತ್ಯ ಸಹಸ್ರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ತಂಡ ಪ್ರತಿ ಎರಡು ವರ್ಷಕ್ಕೊಮ್ಮೆ ಅರಮನೆಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತದೆ.
ಮಂಗಳವಾರ ಸಹ ತಂಡ ಅರಮನೆ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದೆ. ಹೆಚ್ಚುವರಿ ಭದ್ರತೆಯ ಅಗತ್ಯವಿದ್ದಲ್ಲಿ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಲಿದೆ ಎಂದು ಚನ್ನಯ್ಯ ಅವರು ತಿಳಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications