ಮೈಸೂರು ಅರಮನೆಗೆ ಎನ್ಎಸ್ ಜಿ ತಂಡ ಭೇಟಿ
ಮೈಸೂರು, ಜು. 23 : ವಿಶ್ವವಿಖ್ಯಾತ ನಾಡಹಬ್ಬ ದಸರಾ ತಯಾರಿ ಮೈಸೂರಿನಲ್ಲಿ ಆರಂಭವಾಗಿದೆ. ಮಂಗಳವಾರ ಅರಮನೆಗೆ ರಾಷ್ಟ್ರೀಯ ಭದ್ರತಾ ಪಡೆಯ ಅಧಿಕಾರಿಗಳು ಭೇಟಿ ನೀಡಿ, ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪ್ರವಾಸಿಗರ ಭದ್ರತೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಅಮಿತ್ ತರೂರ್ ನೇತೃತ್ವದಲ್ಲಿನ 11 ಮಂದಿ ಅಧಿಕಾರಿಗಳ ತಂಡ ಮಂಗಳವಾರ ಅರಮನೆಗೆ ಭೇಟಿ ನೀಡಿತ್ತು. ಮಧ್ಯಾಹ್ನದ ತನಕ ಅರಮನೆ ಆವರಣ ಸೇರಿದಂತೆ ಸುತ್ತಮುತ್ತಲೂ ಕೈಗೊಂಡಿರುವ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿತು. ನಂತರ ಅರಮನೆಗೆ ಒಂದು ಸುತ್ತು ಹಾಕಿದ ತಂಡ ಪ್ರಮುಖ ಸ್ಥಳಗಳ ಭದ್ರತಾ ವ್ಯವಸ್ಥೆ ಬಗ್ಗೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿತು.

ಅಂಬಾ ವಿಲಾಸ ದ್ವಾರ, ಕರಿಕಲ್ಲು ತೊಟ್ಟಿ, ಬ್ರಹ್ಮಪುರಿ ದ್ವಾರ, ಬಲರಾಮ ದ್ವಾರ ಹಾಗೂ ಜಯಮಾರ್ತಾಂಡ ದ್ವಾರದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಅರಮನೆ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಪೊಲೀಸರು ಎನ್ಎಸ್ ಜಿ ಸಿಬ್ಬಂದಿಗೆ ಮಾಹಿತಿ ನೀಡಿದರು. ದಸರಾದ ಪ್ರಮುಖ ಆಕರ್ಷಣೆಯಾದ ಆನೆಗಳು ತಂಗುವ ಬಿಡಾರಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿತು. [ಮೈಸೂರು ಮೃಗಾಲಯಕ್ಕೆ ಬಂದ ವಿರಾಟ್, ಬಬ್ಲಿ]
ಅರಮನೆಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾ ವಹಿಸಲು ಅಳವಡಿಸಿರುವ ಸಿಸಿಟಿವಿಗಳ ಪರಿಶೀಲನೆ ನಡೆಸಿದ ತಂಡ, ಪ್ರವೇಶ ದ್ವಾರದಲ್ಲಿ ಪ್ರತಿಯೊಬ್ಬ ಪ್ರವಾಸಿಗರನ್ನು ಪರೀಕ್ಷಿಸಲು ಇಟ್ಟಿರುವ ಲೋಹ ಶೋಧಕ ಯಂತ್ರ ಸೇರಿದಂತೆ ಅರಮನೆ ಹೊರ ಮತ್ತು ಒಳ ಆವರಣಗಳ ಭದ್ರತೆ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆಯಿತು. [ದಸರಾ ಉದ್ಘಾಟಿಸಲಿದ್ದಾರೆ ಗಿರೀಶ್ ಕಾರ್ನಾಡ್]
ಸಲಹೆ ಇದ್ದರೆ ನೀಡುತ್ತಾರೆ : ಎನ್ಎಸ್ ಜಿ ತಂಡದ ಭೇಟಿ ಬಗ್ಗೆ ಮಾಹಿತಿ ನೀಡಿರುವ ಅರಮನೆ ಭದ್ರತಾ ಪಡೆ ಸಹಾಯಕ ಪೊಲೀಸ್ ಆಯುಕ್ತ ಚನ್ನಯ್ಯ ಅವರು, ಅರಮನೆಗೆ ನಿತ್ಯ ಸಹಸ್ರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ತಂಡ ಪ್ರತಿ ಎರಡು ವರ್ಷಕ್ಕೊಮ್ಮೆ ಅರಮನೆಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುತ್ತದೆ.
ಮಂಗಳವಾರ ಸಹ ತಂಡ ಅರಮನೆ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದೆ. ಹೆಚ್ಚುವರಿ ಭದ್ರತೆಯ ಅಗತ್ಯವಿದ್ದಲ್ಲಿ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಲಿದೆ ಎಂದು ಚನ್ನಯ್ಯ ಅವರು ತಿಳಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications