ತಿ ನರಸೀಪುರದ ಕುಂಭಮೇಳಕ್ಕೆ ಹರಿದು ಬಂದ ಜನಸಾಗರ
ಮೈಸೂರು, ಫೆಬ್ರವರಿ 18: ಕಾವೇರಿ-ಕಪಿಲ-ಸ್ಫಟಿಕ ಸರೋವರಗಳ ಸಂಗಮದ ಪುಣ್ಯಕ್ಷೇತ್ರ ತಿರುಮಕೂಡಲಿನಲ್ಲಿ ಹನ್ನೊಂದನೇ ಕುಂಭಮೇಳಕ್ಕೆ ಭಾನುವಾರ (ಫೆ.17)ವೈಭವದ ಚಾಲನೆ ದೊರೆತಿದೆ.
ತಿ.ನರಸೀಪುರ ತಾಲೂಕು ಹಾಗೂ ಸುತ್ತಮುತ್ತಲಿನ ಊರುಗಳ ಸಾವಿರಾರು ಮಂದಿ ಮೊದಲ ದಿನ ಪುಣ್ಯ ಸ್ನಾನ ಮಾಡಿದರು. ಬೆಳಗ್ಗೆಯಿಂದ ರಾತ್ರಿಯವರೆಗೂ ಭಕ್ತ ಸಮೂಹ ತ್ರಿವೇಣಿ ಸಂಗಮಕ್ಕೆ ಹರಿದುಬಂತು.
ಸಂಗಮದ ಸ್ಥಳದಲ್ಲಿ ನಿರ್ಮಿಸಿರುವ ಯಾಗ ಮಂಟಪದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ದೇವಸ್ಥಾನದ ಆಗಮಿಕರು ಸಂಕಲ್ಪ, ಗಣಹೋಮ, ಹವನ, ಮಂತ್ರ ಪಠಣದ ಮೂಲಕ ತ್ರಯೋದಶಿ ಅನುಜ್ಞೆ, ಪುಣ್ಯಾಹ, ಅಭಿಷೇಕ ಹಾಗೂ ಮಹಾಮಂಗಳಾರತಿ ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಿದರು.
ಕುಂಭಮೇಳ 2019: ವೈಭವದ ಗಂಗಾರತಿಯ, ಆಕರ್ಷಕ ಚಿತ್ರಗಳು

ಕುಂಭಮೇಳಕ್ಕೆ ಬರುವ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಿದ್ದು, ಅದರ ಸುರಕ್ಷತೆ ಹಾಗೂ ಗುಣಮಟ್ಟ ತಪಾಸಣೆ ಮಾಡಲು ಮೂವರು ಆಹಾರ ಭದ್ರತಾ ಅಧಿಕಾರಿಗಳ ಪ್ರತ್ಯೇಕ ತಂಡ ಕೆಲಸ ಮಾಡುತ್ತಿವೆ ಎಂದು ಕುಂಭಮೇಳದ ಆಹಾರ ಭದ್ರತಾ ಅಧಿಕಾರಿ ಡಾ.ಎಸ್.ಚಿದಂಬರ ತಿಳಿಸಿದರು.
ತಿ.ನರಸೀಪುರದ ಜೆ.ಎಸ್.ಎಸ್ ಸಭಾಭವನ, ಆದಿಚುಂಚನಗಿರಿ ಸಭಾ ಮಂಟಪ ಹಾಗೂ ಅದರ ಪಕ್ಕದಲ್ಲಿ ಪೊಲೀಸ್ ಸಿಬ್ಬಂದಿಗೆ ಟೆಂಟ್ ನಿರ್ಮಿಸಲಾಗಿದೆ. ಈ ಮೂರು ಸ್ಥಳಗಳಲ್ಲಿ ದಾಸೋಹ ವ್ಯವಸ್ಥೆ ಆಯೋಜಿಸಲಾಗಿದೆ, ನಮ್ಮ ಅಧಿಕಾರಿಗಳು ದಾಸೋಹಕ್ಕೆ ಉಪಯೋಗಿಸುವ ಪಧಾರ್ಥಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಇರುವ ಪದಾರ್ಥಗಳನ್ನು ಮಾತ್ರ ಉಪಯೋಗಿಸುವಂತೆ ಸೂಚಿಸಲಾಗಿದೆ ಚಿದಂಬರ ಹೇಳಿದರು.

ಪಟ್ಟಣದ ಗುಂಜಾನರಸಿಂಹಸ್ವಾಮಿ ದೇವಾಲಯ, ಅಗಸ್ತ್ಯೇಶ್ವರ ಸ್ವಾಮಿ ದೇವಾಲಯ, ಬಳ್ಳೇಶ್ವರ ದೇಗುಲ, ಚೌಡೇಶ್ವರಿ, ಹನುಮಂತೇಶ್ವರ ದೇವಾಲಯಗಳಿಗೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ರಸ್ತೆಗಳಾದ ಲಿಂಕ್ ರಸ್ತೆ, ಮಾರುಕಟ್ಟೆ ರಸ್ತೆ, ಜೋಡಿ ರಸ್ತೆ ಹಳೆಯ ಹಾಗೂ ಹೊಸ ಸೇತುವೆ ಮತ್ತು ಸಂಗಮದ ರಸ್ತೆಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ.
ಇನ್ನು ನಿನ್ನೆ ಸಂಜೆ ನಡೆದ ಧಾರ್ಮಿಕ ಸಭೆಯನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಎಲ್ಲಾ ಇಲಾಖೆಗಳ ನೆರವಿನಿಂದ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಸಲು ಸಾಧ್ಯವಾಗಿದೆ. ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಮತ್ತು ಅಶ್ವಿನ್ ಕುಮಾರ್ ಅವರು ಲವ-ಕುಶ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications