ಮೈಸೂರು ಪಂಚೆಯಲ್ಲಿ ಮಿಂಚಲಿದ್ದಾರೆ ಬರಾಕ್ ಒಬಾಮ!
ಮೈಸೂರು, ಜ, 19: ಗಣರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ರೇಷ್ಮೆಯಿಂದ ತಯಾರಿಸಿದ ಮೈಸೂರು ಶಲ್ಯ ಮತ್ತು ಧೋತಿಯನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಬಸವರಾಜ್, ಒಬಾಮಗೆ ಗಿಫ್ಟ್ ನೀಡುವ ಸಲುವಾಗಿ ರಾಷ್ಟ್ರಪತಿ ಭವನದಿಂದ ಕೆಎಸ್ಐಸಿಗೆ 100 ವಿಶೇಷ ಶಲ್ಯ ಹಾಗೂ ಧೋತಿಗಳನ್ನು ತಯಾರಿಸಲು ಬೇಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.[ದೆಹಲಿಯಲ್ಲಿ ಒಬಾಮಾ ಭದ್ರತೆಗೆ 1 ಲಕ್ಷ ಪೊಲೀಸರು]

ಸಾಮಾನ್ಯವಾಗಿ ರೇಷ್ಮೆ ಶಲ್ಯಗಳ ಜರಿಗಳು ಒಂದು ಇಂಚು ಇದ್ದು, ಒಬಾಮ ಅವರಿಗಾಗಿಯೇ ಜರಿಗಳನ್ನು ಎರಡು ಇಂಚು ದಪ್ಪವಾಗಿ ತಯಾರಿಸಿ ಕೊಡುವಂತೆ ರಾಷ್ಟಪತಿ ಭವನ ವಿಶೇಷ ಬೇಡಿಕೆ ಇಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಚೆನ್ನಪಟ್ಟಣ ಗೊಂಬೆ ನೀಡುತ್ತೇವೆ ಎಂದ ರೋಷನ್ ಬೇಗ್
ಒಬಾಮಾ ಅವರಿಗೆ ಚನ್ನಪಟ್ಟಣದ ಗೊಂಬೆಗಳನ್ನು ಉಡುಗೊರೆಯಾಗಿ ನೀಡಲು ಕೋರಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಲಾಗುವುದು ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.[ಗಣರಾಜ್ಯೋತ್ಸವಕ್ಕೆ ಉಗ್ರ ದಾಳಿ ಸಾಧ್ಯತೆ?]
ಚನ್ನಪಟ್ಟಣದ ಗೊಂಬೆಗಳ ಸ್ತಬ್ಧಚಿತ್ರ ಈ ವರ್ಷದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದೆ. ವಾರ್ತಾ ಇಲಾಖೆ ಚನ್ನಪಟ್ಟಣದ ಗೊಂಬೆಗಳ ಚಿತ್ರಗಳಿರುವ ವಿಶೇಷ ಕ್ಯಾಲೆಂಡರ್ ತಯಾರಿಸಿದೆ. ಈ ಕ್ಯಾಲೆಂಡರ್ ಮತ್ತು ಚನ್ನಪಟ್ಟಣದ ಗೊಂಬೆಗಳನ್ನು ಬರಾಕ್ ಒಬಾಮಾ ಅವರಿಗೆ ಉಡುಗೊರೆಯಾಗಿ ನೀಡಬೇಕು ಎಂಬುದು ನಮ್ಮ ಬಯಕೆ ಎಂದು ಹೇಳಿದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications