ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಕಮಿಷನರ್ ಕಚೇರಿ ಉದ್ಘಾಟನೆಗೆ ದೂರುದಾರರ ಆಕ್ಷೇಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 21: ಸಾರ್ವಜನಿಕ ಉದ್ಯಾನದ ಜಾಗದಲ್ಲಿ ನಗರ ಪೊಲೀಸ್​ ಕಮಿಷನರ್ ಕಚೇರಿ ನಿರ್ಮಾಣಕ್ಕೆ ಈ ಹಿಂದೆ ರಾಜ್ಯ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಿದ್ದರೂ ಸಿಎಂ ಯಡಿಯೂರಪ್ಪ ಅವರಿಂದ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಿರುವುದು ಸರಿಯಲ್ಲ ಎಂದು ದೂರುದಾರ ಅಶೋಕ್ ಕುಮಾರ್ ಆರೋಪಿಸಿದ್ದಾರೆ.

ನಗರದ ನಜರ್​ಬಾದ್​ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪೊಲೀಸ್​ ಕಮಿಷನರ್ ಕಚೇರಿ ಉದ್ಯಾನವನಕ್ಕೆ ಸೇರಿದ ಜಾಗದಲ್ಲಿದ್ದು, ಯಾವುದೇ ಅನುಮತಿ ಪಡೆಯದೇ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ನಜರ್ ಬಾದ್ ನಿವಾಸಿ ಅಶೋಕ್ ಕುಮಾರ್ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಮೈಸೂರು; ಯಡಿಯೂರಪ್ಪ ಅವರಿಂದ ನಗರ ಪೊಲೀಸ್‌ ಆಯುಕ್ತರ ಕಚೇರಿ ಉದ್ಘಾಟನೆಮೈಸೂರು; ಯಡಿಯೂರಪ್ಪ ಅವರಿಂದ ನಗರ ಪೊಲೀಸ್‌ ಆಯುಕ್ತರ ಕಚೇರಿ ಉದ್ಘಾಟನೆ

ವಿಚಾರಣೆ ನಡೆಸಿದ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ತಡೆಯಾಜ್ಞೆ ಲೆಕ್ಕಿಸದೆ ಪೊಲೀಸ್ ಕಮಿಷನರ್ ಕಚೇರಿ ನಿರ್ಮಾಣವಾಗಿದೆ. ಇದನ್ನು ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ಉದ್ಘಾಟನೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆಗ ದೂರುದಾರ ಅಶೋಕ್ ಕುಮಾರ್ ಪ್ರತಿಕಾ ಹೇಳಿಕೆ ನೀಡಿದ್ದರು. ಇದನ್ನು ಗಮನಿಸಿದ ಸಿದ್ದರಾಮಯ್ಯ ಕೋರ್ಟ್​ನ ತಡೆಯಾಜ್ಞೆಯ ಉಲ್ಲಂಘನೆ ಆಗುತ್ತದೆ ಎಂದು ಉದ್ಘಾಟನೆಗೆ ಬರಲಿಲ್ಲ. ಆದರೆ, ಮಂಗಳವಾರ ನ.24ರಂದು ಸಿಎಂ ಯಡಿಯೂರಪ್ಪ ಈ ಕಟ್ಟಡ ಉದ್ಘಾಟನೆ ಮಾಡುತ್ತಾರೆ ಎಂದು ದಿನಾಂಕ ನಿಗದಿ ಮಾಡಲಾಗಿದೆ.

Mysuru: Objection To Inauguration Of New Police Commissioner Office

ತಡೆಯಾಜ್ಞೆ ಇದ್ದರೂ ಯಡಿಯೂರಪ್ಪ ಈ ನೂತನ ಪೊಲೀಸ್ ಕಮಿಷನರ್ ಕಚೇರಿ ಉದ್ಘಾಟನೆಗೆ ಬರುತ್ತಿರುವುದು ಸರಿಯಲ್ಲ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಅಶೋಕ್​ ಕುಮಾರ್​ ಹೇಳಿದ್ದಾರೆ.

English summary
Objection by complainant Ashok Kumar to the Inauguration of new police commissioner Office in mysuru. The High Court had earlier issued an injunction to construct a building in the public park area
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X