ಮೈಸೂರಿನಲ್ಲಿ ಜನರನ್ನು ಸೆಳೆಯುತ್ತಿವೆ ಬುಡಕಟ್ಟು, ಸಖಿ ಮತಗಟ್ಟೆಗಳು
ಮೈಸೂರು, ಏಪ್ರಿಲ್ 17: ಮತದಾರನನ್ನು ಸೆಳೆಯಲು ಜಿಲ್ಲೆಯಲ್ಲಿ ಅಧಿಕಾರಿಗಳು ವಿವಿಧ ಕಸರತ್ತು ನಡೆಸಿದ್ದಾರೆ. ಬುಡಕಟ್ಟು ಮತದಾರರ ಮತದಾನ ಹೆಚ್ಚು ಮಾಡಲು ಸ್ವೀಪ್ ಸಮಿತಿ ಸಜ್ಜಾಗಿದ್ದು, ಮೈಸೂರು - ಕೊಡಗು ಲೋಕಸಭಾ ವ್ಯಾಪ್ತಿಗೆ ಬರುವ 11 ಕಡೆಗಳಲ್ಲಿ ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು ವಿಧಾನಸಭಾ ಕ್ಷೇತ್ರದ 9 ಕಡೆಗಳಲ್ಲಿ ಎಥ್ನಿಕ್ ಬೂತ್ ಅನ್ನು ಆರಂಭಿಸಲಾಗಿದೆ. ಬುಡಕಟ್ಟು ಜನರನ್ನು ಮತಗಟ್ಟೆಯತ್ತ ಸೆಳೆಯಲು ಜಿಲ್ಲಾಡಳಿತ ಹಾಗೂ ಸ್ವೀಪ್ ಮತ್ತು ಚುನಾವಣಾ ಆಯೋಗದಿಂದ ವಿನೂತನ ಮತಗಟ್ಟೆ ಸ್ಥಾಪನೆ ಮಾಡಲಾಗಿದೆ.

ಹುಣಸೂರಿನ ನಾಗಾಪುರ, ಶೆಟ್ಟಹಳ್ಳಿ, ನಲ್ಲೂರು ಪಾಲ, ಎಚ್.ಡಿ.ಕೋಟೆಯ ಬಸವನಗಿರಿ ಹಾಡಿ, ಪೆಂಜಹಳ್ಳಿ ಕಾಲೋನಿ, ಬೀಮನಹಳ್ಳಿ, ಪಿರಿಯಾಪಟ್ಟಣದ ಮುತ್ತೂರು ಕಾಲೋನಿ, ಅಬ್ಬಲಾತಿ, ರಾಣಿ ಗೇಟ್ ಗ್ರಾಮಗಳ್ಳಿಯಲ್ಲಿ ವಿಶೇಷ ಮತಗಟ್ಟೆ ಸ್ಥಾಪಿಸಿದ್ದಾರೆ.

ಬುಡಕಟ್ಟು ಮತದಾರನ್ನು ಸ್ವಾಗತ ಕೋರುವ ಮತಗಟ್ಟೆಗಳು ಒಣ ಹುಲ್ಲು, ಹಸಿ ಸೊಪ್ಪು ಹಾಗೂ ಕಾಡಿನಲ್ಲಿ ದೊರೆಯುವ ವಸ್ತುಗಳ ಬಳಕೆ ಮಾಡಿ ಸಿಂಗರಿಸಲಾಗಿದೆ. ಮತಗಟ್ಟೆಗೆ ಬಿದಿರು ಗುಡಿಸಲಿಗೆ ಹೆಣೆದ ತೆಂಗಿನ ಗರಿ ಹೊದಿಸಲಾಗಿದೆ. ಅದರ ಮೇಲೆ ಹುಲ್ಲು ಹೊದಿಸಿ ಆಕರ್ಷಣೀಯವಾಗಿ ನಿರ್ಮಿಸಲಾಗಿದೆ. ಮತದಾರರಿಗೆ ಅರಿವು ಮೂಡಿಸುವ ಫಲಕವನ್ನು ಮತಗಟ್ಟೆಯಲ್ಲಿ ಹಾಕಲಾಗಿದೆ. ಇಂತಹ ಮತಗಟ್ಟೆಗಳು ಬುಡಕಟ್ಟು ಮೂಲ ಸಂಸ್ಕೃತಿಯನ್ನು ಬಿಂಬಿಸುತ್ತವೆ.

ಮಹಿಳಾ ಮತದಾರರು ಹೆಚ್ಚಿರುವ ಕಡೆ ಸಖಿ ಪೋಲಿಂಗ್ ಬೂತ್ ಸಹ ಆರಂಭವಾಗಿದೆ. ನಗರದ ತ್ಯಾಗರಾಜು ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ನಿರ್ಮಾಣವಾಗಿರುವ ಸಖಿ ಮತಗಟ್ಟೆ ಜನಾಕರ್ಷಣೀಯವಾಗಿದೆ. ಸಂಪೂರ್ಣವಾಗಿ ಮಹಿಳೆಯರೇ ಕಾರ್ಯನಿರ್ವಹಿಸುವ ಸಖಿ ಮತದಾನ ಕೇಂದ್ರ, ಮಹಿಳಾ ಮತದಾರರನ್ನು ತನ್ನತ್ತ ಸೆಳೆಯುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications