ಪ್ರತಾಪ್ ಸಿಂಹ ನೇತೃತ್ವದಲ್ಲಿ ಮತ್ತೊಮ್ಮೆ ಹನುಮಜಯಂತಿ ಆಚರಣೆ
ಮೈಸೂರು, ಜನವರಿ 27 : ಕಳೆದ ತಿಂಗಳ ಹಿಂದಷ್ಟೇ ವಿವಾದಕ್ಕೆ ಕಾರಣವಾಗಿದ್ದ ಹುಣಸೂರು ಹನುಮ ಜಯಂತಿ ಮೆರವಣಿಗೆ ಮತ್ತೊಮ್ಮೆ ಆರಂಭಗೊಂಡಿದೆ. ಈ ಹಿನ್ನೆಲೆ ಹಿಂದೂಪರ ಸಂಘಟನೆಗಳ ಬೇಡಿಕೆಯಂತೆಯೇ ಜಿಲ್ಲಾಡಳಿತ ಮಾರ್ಗ ನಿಗದಿ ಮಾಡಿದೆ. ದೇವಸ್ಥಾನದ ಕಲ್ಕುಣಿಕೆ ವೃತ್ತ, ಹಳೇ ಬಸ್ ನಿಲ್ದಾಣದಲ್ಲಿ ಮೆರವಣಿಗೆ ಸಂಚರಿಸಲಿದ್ದು ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಿ ಮಂಜುನಾಥ ದೇವಾಲಯ ಆವರಣದಲ್ಲಿ ಮುಕ್ತಾಯವಾಗಲಿದೆ.
ಮೆರವಣಿಗೆಯ ಪ್ರತಿಯೊಂದು ಚಲನವಲನಗಳನ್ನು ಜಿಲ್ಲಾಧಿಕಾರಿ, ರಂದೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ. ಡಿ ಚನ್ನಣ್ಣನವರ್ ಗೆ ಸೂಚನೆ ನೀಡಿದ್ದಾರೆ. ಮಂಜುನಾಥ ದೇವಸ್ಥಾನದಿಂದ ಹನುಮ ಮೂರ್ತಿ ಉತ್ಸವ ಹೊರಟ್ಟಿದ್ದು ರಂಗನಾಥ ಬಡಾವಣೆ ಕಡೆ ತೆರಳುತ್ತಿದೆ. ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ಹನುಮ ಭಕ್ತರು ಜಮಾಯಿಸಿದ್ದು, ಮಧ್ಯಾಹ್ನ 3.30ಕ್ಕೆ ಬಹಿರಂಗ ಮೆರವಣಿಗೆಗೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ.
ಹುಣಸೂರಿನ ರಂಗನಾಥ ಬಡಾವಣೆಗೆ 11 ಅಡಿ ಹನುಮನ ಮೂರ್ತಿ ಆಗಮಿಸಿದೆ. ರಂಗನಾಥ ಬಡಾವಣೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್, ಅಡಿಷನಲ್ ಎಸ್ಪಿ ರುದ್ರಮುನಿ ಸ್ಥಳಕ್ಕೆ ತೆರಳಿ ಭದ್ರತೆಯನ್ನು ಪರಿಶೀಲಿಸಿದ್ದಾರೆ.

ಕಳೆದ ತಿಂಗಳು ಗಲಾಟೆ ನಡೆದಿದ್ದರಿಂದ ಹನುಮ ಜಯಂತಿ ಮೆರವಣಿಗೆ ನಡೆದಿರಲಿಲ್ಲ. ಜಿಲ್ಲಾಡಳಿತಕ್ಕೆ ಸೆಡ್ಡು ಹೊಡೆದು ಹನುಮ ಜಯಂತಿಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಕಳೆದ ಬಾರಿ ಮಂಜುನಾಥ
ದೇವಸ್ಥಾನಕ್ಕೆ 1 ಕಿ. ಮೀ. ದೂರ ಮೆರವಣಿಗೆ ನಿಗದಿಯಾಗಿತ್ತು. ಆದರೆ ಈ ಬಾರಿ ಹನುಮ ಜಯಂತಿ ಮೆರವಣಿಗೆ 5 ಕಿಲೋ ಮೀಟರ್ ಸಾಗಲಿದೆ. ಈಗಾಗಲೇ ಪ್ರತಾಪ್ ಸಿಂಹ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳಿಂದ ಮೆರವಣಿಗೆಗೆ ಚಾಲನೆ ಸಿಕ್ಕಿದೆ.
ಮೊದಲ ಬಾರಿ ಹನುಮ ಜಯಂತಿ ಗದ್ದಲ ಹಿನ್ನಲೆಯಲ್ಲಿ ಎರಡನೇ ಬಾರಿ ಹನುಮ ಜಯಂತಿಗೆ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ಪಿ, ನಾಲ್ವರು ಡಿವೈಎಸ್ಪಿ, 10 ಸಿಪಿಐ, 25 ಪಿಎಸ್ ಐ, ಎಪ್ಪತೈದು ಎಎಸ್ , 500 ಹೆಚ್'ಸಿಪಿಸಿ, 200 ಹೋಂ ಗಾರ್ಡ್ಸ್ ನಿಯೋಜಿಸಲಾಗಿದೆ. 8 ಕೆಎಸ್'ಆರ್'ಪಿ ತುಕಡಿ, 15. ಡಿಎಆರ್,31 ಪೆಟ್ರೋಲಿಯಂ ವಾಹನ ಬಳಕೆ ಮಾಡಲಾಗಿದೆ. ಮೆರವಣಿಗೆ ಸುತ್ತಲೂ ಕ್ಯಾಮರಾ ಹದ್ದಿನ ಕಣ್ಣಿಡಲಾಗಿದೆ. 51 ವಿಡಿಯೋ ಗ್ರಾಫರ್'ಗಳ ಬಳಕೆ, 80 ಸಿಸಿ ಕ್ಯಾಮರ ಅಳವಡಿಕೆ ಮಾಡಲಾಗಿದೆ.

ಈ ಹಿಂದೆ ಸಣ್ಣಪುಟ್ಟ ವಿಚಾರಗಳಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಪರಿಣಾಮ ಹನುಮ ಜಯಂತಿ ಮೆರವಣಿಗೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಆ ದಿನ ನಡೆಯಬೇಕಿದ್ದ ಮೆರವಣಿಗೆ ಅಪೂರ್ಣಗೊಂಡ ಕಾರಣ ಹಿಂದೆ ನಡೆಯುತ್ತಿದೆ. ಮೈಸೂರು ಜಿಲ್ಲಾಡಳಿತದಿಂದ ಹಲವು ನಿಬಂಧನೆಗಳೊಂದಿಗೆ ಇಂದು ಮತ್ತೆ ಮೆರವಣಿಗೆ ನಡೆಯುತ್ತಿದ್ದು, ಜಿಲ್ಲಾಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದಲೇ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದೆ. ಹೊಸ ಐದು ನಿಬಂಧನೆಗಳನ್ನು ವಿಧಿಸಿ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿದೆ .
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications