ಎಚ್ ಡಿ ಕೋಟೆಯಲ್ಲಿ ಹುಲಿ ಪ್ರತ್ಯಕ್ಷ, ಸೆರೆ ಹಿಡಿಯಲು 80 ಸಿಬ್ಬಂದಿ!
ಮೈಸೂರು, ನವೆಂಬರ್ 06: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಅರಣ್ಯ ವ್ಯಾಪ್ತಿಯ ಕಾರಾಪುರ ಕಬಿನಿ ರಿವರ್ ಲಾಡ್ಜ್ (ಜಂಗಲ್ ಲಾಡ್ಜ್) ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ನಾಗರಹೊಳೆ ಅರಣ್ಯದಿಂದ ನಾಡಿಗೆ ಬಂದಿದ್ದ ಹುಲಿಯನ್ನು ಸೆರೆಹಿಡಿಯಲಾಗಿತ್ತು. ಇದೀಗ ಕಾರಾಪುರ ಬಲಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಅದರ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ.

ಕಳೆದ ಎರಡು ದಿನಗಳ ಹಿಂದೆಯೇ ಈ ಹುಲಿ ಜನರ ಕಣ್ಣಿಗೆ ಬಿದ್ದಿದ್ದು, ಎಲ್ಲೆಂದರಲ್ಲಿ ಓಡಾಡುತ್ತಾ ಭಯ ಹುಟ್ಟಿಸಿದೆ. ಸದ್ಯ ಹುಲಿಯು ಜಂಗಲ್ ಲಾಡ್ಜ್ ನ ಆಸುಪಾಸಿನ ಜಮೀನಿನಲ್ಲೇ ಓಡಾಡುತ್ತಿದೆ ಎನ್ನಲಾಗಿದ್ದು ಇದನ್ನು ಕೆಲವು ರೈತರು ನೋಡಿ ಭಯಗೊಂಡಿದ್ದಾರೆ.
ಜನರು ನೀಡಿದ ಮಾಹಿತಿ ಮೇರೆಗೆ ಅಂತರಸಂತೆ ಹಾಗೂ ಡಿ.ಬಿ.ಕುಪ್ಪೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಹುಲಿ ತಿರುಗುತ್ತಿರುವುದು ಖಚಿತವಾಗಿದೆ.
ಪಕ್ಕಾ ಮಾಹಿತಿ ಅರಿಯುವ ಮತ್ತು ಹುಲಿಯ ಚಲನವಲನ ತಿಳಿಯುವ ಸಲುವಾಗಿ ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈ ಪೈಕಿ ಒಂದು ಕ್ಯಾಮೆರಾದಲ್ಲಿ ಹುಲಿ ಅಡ್ಡಾಡಿರುವುದು ಸೆರೆಯಾಗಿದೆ.

ಡಿ.ಬಿ.ಕುಪ್ಪೆ ವಲಯದ 50 ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ, ಸರಗೂರು ಠಾಣೆಯ ಪಿಎಸ್ಐ ಬಸವರಾಜು, ಬೀಚನಹಳ್ಳಿ ಠಾಣೆಯ ಪಿಎಸ್ಐ ಸುರೇಶ್ ಸೇರಿದಂತೆ 20 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 70ರಿಂದ 80 ಸಿಬ್ಬಂದಿ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಕಾರ್ಯಾಚರಣೆಗೆ ದಸರಾ ಆನೆಗಳಾದ ಅರ್ಜುನ ಮತ್ತು ಅಭಿಮನ್ಯು ಆನೆಗಳು ಸಾಥ್ ನೀಡಿವೆ. ಒಟ್ಟಾರೆ ಹುಲಿ ಸೆರೆಯಾಗುವ ತನಕ ಈ ವ್ಯಾಪ್ತಿಯ ಜನರಿಗೆ ಭಯ ದೂರವಾಗುವ ಯಾವ ಲಕ್ಷಣಗಳು ಕಂಡು ಬರುತ್ತಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications