ಜಿಲ್ಲೆಗೊಂದು ವಿವಿ ಎಫೆಕ್ಟ್: ಮೈವಿವಿಯಲ್ಲಿ ಹತ್ತು ಸಾವಿರ ಪ್ರವೇಶಾತಿ ಕುಸಿತ
ಮೈಸೂರು, ಡಿಸೆಂಬರ್ 1: ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ 10 ಸಾವಿರ ಪ್ರವೇಶಾತಿ ಕುಸಿತ ಕಂಡಿದೆ.
ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳು ಸೇರ್ಪಡೆ ಆಗಿದ್ದವು. ಆದರೆ, ಈ ಮೂರು ಜಿಲ್ಲೆಗಳಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ತೆರೆದ ಕಾರಣ ಈ ವರ್ಷ ಮೈಸೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಕಡಿಮೆ ಆಗಿದೆ. ಆಯಾ ಜಿಲ್ಲೆಯ ವಿದ್ಯಾರ್ಥಿಗಳು ಹೊಸ ವಿವಿಯಲ್ಲೇ ಪ್ರವೇಶ ಪಡೆದುಕೊಂಡಿದ್ದಾರೆ.

ಕುಸಿದ ಪ್ರವೇಶಾತಿ:
ಕಳೆದ ವರ್ಷ ವಿವಿಧ ಸ್ನಾತಕ ಪದವಿ ಕೋರ್ಸ್ಗಳಿಗೆ 36 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಈ ಶೈಕ್ಷಣಿಕ ಸಾಲಿನಲ್ಲಿ 26 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, 10 ಸಾವಿರ ವಿದ್ಯಾರ್ಥಿಗಳು ಕಡಿಮೆ ಆಗಿದ್ದಾರೆ. ಈ ಹಿಂದೆ ಮೈಸೂರು ವಿವಿ ವ್ಯಾಪ್ತಿಯಲ್ಲಿ 232 ಕಾಲೇಜುಗಳು ಬರುತ್ತಿದ್ದವು. ಈಗ ಆ ಸಂಖ್ಯೆ 111ಕ್ಕೆ ಇಳಿದಿದೆ. ಬೋಧಕ-ಬೋಧಕೇತರ ಸೇರಿದಂತೆ ಕಾಯಂ ನೌಕರರಿಗೆ ಸರಕಾರದಿಂದಲೇ ವೇತನ ಬರುತ್ತದೆ. ಅತಿಥಿ ಉಪನ್ಯಾಸಕರು ಸೇರಿದಂತೆ ಕಾಯಂ ಅಲ್ಲದ ಸಿಬ್ಬಂದಿಗೆ ವಿವಿಯೇ ವೇತನ ಭರಿಸಬೇಕಿದೆ.
420 ಹುದ್ದೆ ಖಾಲಿ:
ಮೈಸೂರು ವಿವಿಗೆ 665 ಕಾಯಂ ಪ್ರಾಧ್ಯಾಪಕರು ಆಗತ್ಯ. ಆದರೆ, ಪ್ರಸ್ತುತ ಕೇವಲ 245 ಕಾಯಂ ಅಧ್ಯಾಪಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 420 ಹುದ್ದೆ ಖಾಲಿ ಉಳಿದಿದೆ. ಬೋಧಕರೇತರರು ವೃಂದದಲ್ಲೂ ತಾತ್ಕಾಲಿಕ ಸಿಬ್ಬಂದಿ ಹೆಚ್ಚಿದ್ದಾರೆ. ಮೈಸೂರು ವಿವಿ 900 ಅತಿಥಿ ಉಪನ್ಯಾಸಕರಿಂದಲೇ ನಡೆಯುತ್ತಿದೆ. ಇದು ಗುಣಮಟ್ಟದ ಶಿಕ್ಷಣಕ್ಕೂ ಕಂಟಕಪ್ರಾಯವಾಗಿದೆ. ಸಂಶೋಧನೆಗೂ ಮುಳ್ಳಾಗಿ ಪರಿಣಮಿಸಿದೆ. ಕಳೆದ ಬಾರಿ ನ್ಯಾಕ್ನಿಂದ ವಿವಿ 'ಎ' ಗ್ರೇಡ್ ಪಡೆಯಲು ಅಧ್ಯಾಪಕರ ಕೊರತೆಯೇ ಪ್ರಮುಖ ಕಾರಣವಾಗಿತ್ತು.
"ಜಿಲ್ಲೆಗೊಂದು ವಿವಿ ಸ್ಥಾಪನೆಯಾದ ಪರಿಣಾಮ ಮೈಸೂರು ವಿವಿ ಕಾರ್ಯ ವ್ಯಾಪ್ತಿ ಮೈಸೂರು ಜಿಲ್ಲೆಗಷ್ಟೇ ಸೀಮಿತಗೊಂಡಿದೆ. ಪರಿಣಾಮ ಸ್ನಾತಕ ಪದವಿ ಕೋರ್ಸ್ ಪ್ರವೇಶಾತಿಯಲ್ಲಿ 10 ಸಾವಿರ ಮಕ್ಕಳು ಕಡಿಮೆ ಆಗಿದ್ದಾರೆ. ಸರಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ಯುಜಿಸಿಯಿಂದ ಬರುತ್ತಿದ್ದ ಅನುದಾನವೂ ಕಡಿಮೆ ಆಗಿದೆ" ಎನ್ನುತ್ತಾರೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications