ಒನ್ ಇಂಡಿಯಾ ಫಲಶೃತಿ: ಸರಿಹೋಯ್ತು ಮೈಸೂರು ವಿವಿ ಕ್ಲಾಕ್ ಟವರ್
ಮೈಸೂರು, ಮೇ 27 : ಮೈಸೂರು ವಿವಿಯ ಕ್ಲಾಕ್ ಟವರ್ ಅಂತೂ ತನ್ನ ಶಬ್ದವನ್ನು ಮತ್ತೊಮ್ಮೆ ಶುರುಮಾಡಿಕೊಂಡಿದೆ.
ಕಳೆದ ಮೇ 15 ರಂದು 'ತನ್ನ ಶಬ್ಧ ನಿಲ್ಲಿಸಿದ ಮೈಸೂರು ವಿವಿ ಕ್ಲಾಕ್ ಟವರ್' ಎಂಬ ಶೀರ್ಷಿಕೆಯಡಿ 'ಒನ್ ಇಂಡಿಯಾದಲ್ಲಿ' ಪ್ರಕಟಗೊಂಡಿದ್ದ ವರದಿ ನೋಡಿದ ವಿವಿ ಸಿಬ್ಬಂದಿ ವರ್ಗ ಗಡಿಯಾರವನ್ನು ಅಂತೂ ರಿಪೇರಿ ಮಾಡಿಸಿ ತಹಬದಿಗೆ ತಂದಿದ್ದಾರೆ.[ಮೈಸೂರು ವಿವಿ ಗಡಿಯಾರದ ಟಿಕ್ ಟಿಕ್ ಶಬ್ದವೀಗ ಸ್ತಬ್ಧ!]

ಮಾನಸ ಗಂಗೋತ್ರಿ ವಿಶ್ವವಿದ್ಯಾಲಯದ ಜನಾಕರ್ಷಣೆಯ ಕೇಂದ್ರ ಬಿಂದು, ಕ್ಲಾಕ್ ಟವರ್ ನ ಗಡಿಯಾರ ಕೆಟ್ಟುಹೋಗಿತ್ತು. ಕೊನೆಗೆ ಮಾಧ್ಯಮಗಳಲ್ಲಿ ಸುದ್ದಿಯಾದ ನಂತರ ಎಚ್ಚೆತ್ತುಕೊಂಡಿರುವ ಮೈಸೂರು ವಿಶ್ವವಿದ್ಯಾನಿಲಯ ಅಧಿಕಾರಿಗಳು ಇದೀಗ ಗಡಿಯಾರವನ್ನ ರಿಪೇರಿ ಮಾಡಿಸಿದ್ದಾರೆ.
ಸುಮಾರು 70 ಲಕ್ಷ ವೆಚ್ಚದಲ್ಲಿ ಹೆಚ್.ಎಂ.ಟಿ ಕಂಪನಿಯ ಗಡಿಯಾರವನ್ನು ಈ ಹಿಂದೆ ಕುಲಪತಿಗಳಾಗಿದ್ದ ಪ್ರೊ.ಕೆ.ಎಸ್.ರಂಗಪ್ಪ ಅವರ ಅವಧಿಯಲ್ಲಿ ನಿರ್ಮಿಸಲಾಗಿತ್ತು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇದನ್ನು ಉದ್ಘಾಟಿಸಿದ್ದರು.

ವಾಯುವಿಹಾರಿಗಳು, ವಿದ್ಯಾರ್ಥಿಗಳಿಗೆ ಇದು ಆಕರ್ಷಕ ತಾಣವಾಗಿತ್ತು. ಆದರೆ ಈ ಗಡಿಯಾರ ಕೆಟ್ಟು ನಿಂತರೂ ಸಹ ವಿವಿಯ ಆಡಳಿತಾಧಿಕಾರಿಗಳು ಶೀಘ್ರ ಕ್ರಮ ಕೈಗೊಂಡಿರಲಿಲ್ಲ. ಇದೀಗ ಗಂಗೋತ್ರಿ ಗಡಿಯಾರ ರಿಪೇರಿಯಾಗಿ ಟಿಕ್ ಟಿಕ್ ಸದ್ದು ಮಾಡುತ್ತಿದ್ದು. ಇದು ಇಲ್ಲಿನವರಿಗೆ ಸಂತಸ ತಂದಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications