ಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಜಾರಿಗೆ ಚಿಂತನೆ
ಮೈಸೂರು, ಫೆಬ್ರವರಿ 18: ಮೈಸೂರು ನಗರವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿದ್ದು, ನಗರದ ವಿವಿಧ ಪ್ರವಾಸಿ ತಾಣಗಳಿಗೆ ದೇಶ, ವಿದೇಶದಿಂದ ಆಗಮಿಸುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಇಲಾಖೆಯು ಬುಕ್ ಮೈ ಶೋ ಆ್ಯಪ್ ಸಹಯೋಗದಲ್ಲಿ ಸಿಟಿ ಪಾಸ್ ಹಾಗೂ ಸಿಂಗಲ್ ಟಿಕೆಟಿಂಗ್ ಸಿಸ್ಟಮ್ ಜಾರಿ ಮಾಡಲು ಉದ್ದೇಶಿಸಿದೆ.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಗಳವಾರ ಚರ್ಚೆ ನಡೆಸಲಾಯಿತು.
ನಗರದ ಹೋಟೆಲ್ ಮಯೂರದಲ್ಲಿ ನಡೆದ ಸಭೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಕುಮಾರ್ ಪುಷ್ಕರ್ ಮಾತನಾಡಿ, ಆನ್ ಲೈನ್ ಟಿಕೆಟ್ ಜಾರಿ ಮಾಡುವುದರಿಂದ ಪ್ರವಾಸಿಗರಿಗೆ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ನಗರದ ಅನೇಕ ಪ್ರವಾಸಿ ತಾಣಗಳಿಗೆ ಆನ್ ಲೈನ್ ಟಿಕೆಟ್ ಸೇವೆಯನ್ನು ಜಾರಿ ಮಾಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಸೆಂಟ್ ಫಿಲೋಮಿನಾ ಚರ್ಚ್, ಅರಮನೆ, ಸ್ಯಾಂಡ್ ಮ್ಯೂಸಿಯಂ, ವ್ಯಾಕ್ಸ್ ಮ್ಯೂಸಿಯಂ, ರೈಲ್ವೆ ಮ್ಯೂಸಿಯಂ, ಲಲಿತ ಮಹಲ್ ಪ್ಯಾಲೆಸ್, ಮೃಗಾಲಯ, ಕಾರಂಜಿ ಕೆರೆ ಮುಂತಾದ ಪ್ರವಾಸಿ ತಾಣಗಳಲ್ಲಿ ಆನ್ ಲೈನ್ ಮಾದರಿಯಲ್ಲಿ ಟಿಕೆಟ್ ವ್ಯವಸ್ಥೆ ಕಲ್ಪಿಸಿ, ಸ್ಥಳಗಳನ್ನು ವೀಕ್ಷಿಸಲು ಸುಲಭವಾಗುವಂತೆ ಮಾಡಬೇಕು ಎಂದು ಮಾಹಿತಿ ನೀಡಿದರು.
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ರವಾಸಿಗರು ನಗರದಲ್ಲಿರುವ ಎಲ್ಲಾ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಅಲ್ಲದೇ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಮೈದಾನದಲ್ಲಿ ನಡೆಯುವ ಕಾರ್ಯಕ್ರಮಗಳನ್ನು ನೋಡಲು ಕೂಡಾ ವಿದೇಶಿಗರಿಗೆ ಟಿಕೆಟ್ ದೊರೆಯುವುದಿಲ್ಲ. ಈ ನಿಟ್ಟಿನಲ್ಲಿ ವಿದೇಶಿ ಪ್ರವಾಸಿಗರಿಗಾಗಿಯೇ ಸ್ವಲ್ಪ ಟಿಕೆಟ್ ಮೀಸಲಿಡಬೇಕು ಎಂದು ಹೇಳಿದರು.

ದಸರಾ ಹಬ್ಬಕ್ಕೆ ಈಗಿನಿಂದಲೇ ಸಭೆ ಸೇರಿ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಂಡು, ದಸರಾ ಸಮೀಪದಲ್ಲಿ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರವಾಸೋದ್ಯಮ ಸಚಿವರು ಸೂಚಿಸಿದ್ದಾರೆ. ನಗರಕ್ಕೆ ಆಗಮಿಸುವ ಪ್ರವಾಸಿಗರಿಗೆ ಪೂರಕವಾಗುವಂತೆ ಎಲ್ಲಾ ಸೌಲಭ್ಯವನ್ನು ಒದಗಿಸಬೇಕು ಎಂದರು.
ಮುಂಬರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಯೋಗ ಪಟುಗಳೊಂದಿಗೆ ಆಚರಿಸಲು ಪೂರ್ವ ಸಿದ್ಧತೆಯನ್ನು ಮಾಡಲಾಗಿದ್ದು, ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications