ಬಿಜೆಪಿ ʻಭಕ್ತʼರಿಗೆ ಬಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಿರಿ
ಮೈಸೂರು, ಫೆಬ್ರವರಿ 15: ದಿನನಿತ್ಯದ ವಸ್ತುಗಳ ದರ ವೇಗವಾಗಿ ಏರುತ್ತಿದ್ದರೂ ದೇಶದ ಅಭಿವೃದ್ಧಿಗಾಗಿ ಅನ್ನುತ್ತಿರುವ ಬಿಜೆಪಿ ʻಭಕ್ತʼರಿಗೆ ಬಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆದು 1 ಸಾವಿರ ರೂ.ಗೆ ಪೆಟ್ರೋಲ್-ಡಿಸೇಲ್ ಮತ್ತು ಮತ್ತು ಗ್ಯಾಸ್ ಅನ್ನು 5 ಸಾವಿರ ರೂ.ಗೆ ನೀಡಿ ಸರ್ಕಾರದ ಖಜಾನೆ ತುಂಬಿಕೊಳ್ಳಲಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಾಗ್ದಾಳಿ ನಡೆಸಿದರು.
ಸೋಮವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರು, ಬಿಪಿಎಲ್ ಕಾರ್ಡ್ದಾರರಿಗೆ ಕಡಿಮೆ ದರದಲ್ಲಿ ಗ್ಯಾಸ್ ನೀಡಿ. ಅಧಿಕಾರಕ್ಕೇರುವ ಮುನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಪಡಿತರ ವ್ಯವಸ್ಥೆಯಲ್ಲಿಯೇ 300 ರೂ.ಗೆ ಗ್ಯಾಸ್ ನೀಡಬೇಕು. ಇಲ್ಲವಾದರೆ ಕುರ್ಚಿ ಬಿಟ್ಟು ಇಳಿಯಿರಿ. ನಾವು ಸರ್ಕಾರಕ್ಕೆ, ಸಾಮಾನ್ಯ ಜನರಿಗೆ ನೆರವಾಗುತ್ತೇವೆ ಎಂದರು.
ಜನ ವಿರೋಧಿ ಮತ್ತು ಮಹಿಳಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ನಾಯಕರು ಮತ್ತು ಸರ್ಕಾರ ನಿಜವಾದ ದೇಶದ್ರೋಹಿಗಳು. ʻಭಾರತ್ ಮಾತಾ ಕೀ ಜೈʼ ಎನ್ನುವ ಬಿಜೆಪಿ ಸರ್ಕಾರ, ಹಿಂದೂ ಹೆಣ್ಣು ಮಕ್ಕಳನ್ನು ಆರ್ಥಿಕವಾಗಿ ಶೋಷಿಸುತ್ತಿದೆ. ಎಲ್ಪಿಜಿ ಗ್ಯಾಸ್ ಬೆಲೆ ಒಂದೇ ತಿಂಗಳಲ್ಲಿ 75 ರೂ. ಹೆಚ್ಚಳ ಮಾಡಿ ಮಹಿಳಾ ವಿರೋಧಿ ಮುಖವನ್ನು ಬಿಚ್ಚಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪರ ಧ್ವನಿ ಎತ್ತಿದರೆ ದೇಶವಿರೋಧಿ ಪಟ್ಟ ಕಟ್ಟಲಾಗುತ್ತಿದೆ. ಇನ್ನು ಬೆಲೆ ಏರಿಕೆ ಬಗ್ಗೆ ಮಾತನಾಡಿದರಂತೂ ನಮ್ಮ ಮೇಲೆಯೂ ದೇಶದ್ರೋಹಿ ಹಣೆಪಟ್ಟಿ ಕಟ್ಟುವ ಭಯ ಕಾಡುತ್ತಿದೆ. ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು. ಯಾರಿಗಾಗಿ ಬೆಲೆ ಏರಿಕೆ ಮಾಡುತ್ತಿದ್ದೀರಾ? 70 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವ ಕೇಂದ್ರ ಸರ್ಕಾರ, ಕಳೆದ 7 ವರ್ಷಗಳಲ್ಲಿ ದೇಶವನ್ನು 100 ವರ್ಷ ಹಿಂದಕ್ಕೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಆರ್.ಪುಷ್ಪವಲ್ಲಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಜಗನ್ನಾಥ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications