ಬಿಜೆಪಿ ʻಭಕ್ತʼರಿಗೆ ಬಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಿರಿ
ಮೈಸೂರು, ಫೆಬ್ರವರಿ 15: ದಿನನಿತ್ಯದ ವಸ್ತುಗಳ ದರ ವೇಗವಾಗಿ ಏರುತ್ತಿದ್ದರೂ ದೇಶದ ಅಭಿವೃದ್ಧಿಗಾಗಿ ಅನ್ನುತ್ತಿರುವ ಬಿಜೆಪಿ ʻಭಕ್ತʼರಿಗೆ ಬಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆದು 1 ಸಾವಿರ ರೂ.ಗೆ ಪೆಟ್ರೋಲ್-ಡಿಸೇಲ್ ಮತ್ತು ಮತ್ತು ಗ್ಯಾಸ್ ಅನ್ನು 5 ಸಾವಿರ ರೂ.ಗೆ ನೀಡಿ ಸರ್ಕಾರದ ಖಜಾನೆ ತುಂಬಿಕೊಳ್ಳಲಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಾಗ್ದಾಳಿ ನಡೆಸಿದರು.
ಸೋಮವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರು, ಬಿಪಿಎಲ್ ಕಾರ್ಡ್ದಾರರಿಗೆ ಕಡಿಮೆ ದರದಲ್ಲಿ ಗ್ಯಾಸ್ ನೀಡಿ. ಅಧಿಕಾರಕ್ಕೇರುವ ಮುನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಪಡಿತರ ವ್ಯವಸ್ಥೆಯಲ್ಲಿಯೇ 300 ರೂ.ಗೆ ಗ್ಯಾಸ್ ನೀಡಬೇಕು. ಇಲ್ಲವಾದರೆ ಕುರ್ಚಿ ಬಿಟ್ಟು ಇಳಿಯಿರಿ. ನಾವು ಸರ್ಕಾರಕ್ಕೆ, ಸಾಮಾನ್ಯ ಜನರಿಗೆ ನೆರವಾಗುತ್ತೇವೆ ಎಂದರು.
ಜನ ವಿರೋಧಿ ಮತ್ತು ಮಹಿಳಾ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ನಾಯಕರು ಮತ್ತು ಸರ್ಕಾರ ನಿಜವಾದ ದೇಶದ್ರೋಹಿಗಳು. ʻಭಾರತ್ ಮಾತಾ ಕೀ ಜೈʼ ಎನ್ನುವ ಬಿಜೆಪಿ ಸರ್ಕಾರ, ಹಿಂದೂ ಹೆಣ್ಣು ಮಕ್ಕಳನ್ನು ಆರ್ಥಿಕವಾಗಿ ಶೋಷಿಸುತ್ತಿದೆ. ಎಲ್ಪಿಜಿ ಗ್ಯಾಸ್ ಬೆಲೆ ಒಂದೇ ತಿಂಗಳಲ್ಲಿ 75 ರೂ. ಹೆಚ್ಚಳ ಮಾಡಿ ಮಹಿಳಾ ವಿರೋಧಿ ಮುಖವನ್ನು ಬಿಚ್ಚಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಪರ ಧ್ವನಿ ಎತ್ತಿದರೆ ದೇಶವಿರೋಧಿ ಪಟ್ಟ ಕಟ್ಟಲಾಗುತ್ತಿದೆ. ಇನ್ನು ಬೆಲೆ ಏರಿಕೆ ಬಗ್ಗೆ ಮಾತನಾಡಿದರಂತೂ ನಮ್ಮ ಮೇಲೆಯೂ ದೇಶದ್ರೋಹಿ ಹಣೆಪಟ್ಟಿ ಕಟ್ಟುವ ಭಯ ಕಾಡುತ್ತಿದೆ. ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಬೇಕು. ಯಾರಿಗಾಗಿ ಬೆಲೆ ಏರಿಕೆ ಮಾಡುತ್ತಿದ್ದೀರಾ? 70 ವರ್ಷಗಳಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವ ಕೇಂದ್ರ ಸರ್ಕಾರ, ಕಳೆದ 7 ವರ್ಷಗಳಲ್ಲಿ ದೇಶವನ್ನು 100 ವರ್ಷ ಹಿಂದಕ್ಕೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಆರ್.ಪುಷ್ಪವಲ್ಲಿ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಜಗನ್ನಾಥ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications