ಹಿಂದೂ ರುದ್ರಭೂಮಿಯಲ್ಲಿ ಮೂಡಾ ವ್ಯಾಪಾರ ಮಳಿಗೆ ನಿರ್ಮಾಣ: ಸ್ಥಳೀಯರ ವಿರೋಧ
ಮೈಸೂರು, ನವೆಂಬರ್ 18: ಮೈಸೂರು ನಗರದ ಎನ್.ಆರ್ ಮೊಹಲ್ಲಾ ವಾರ್ಡ್ 15ಕ್ಕೆ ಸೇರಿದ ಗಣೇಶ ನಗರದ ಮುಖ್ಯ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಗೆ ಮೀಸಲಿರಿಸಿರುವ ಜಾಗದಲ್ಲಿ ವ್ಯಾಪಾರಿ ಮಳಿಗೆ ನಿರ್ಮಿಸಲು ಮುಡಾ ಅಧಿಕಾರಿಗಳು ಇತ್ತೀಚೆಗೆ ಸರ್ವೇ ಮಾಡಿಸಿರುವುದು ಸ್ಥಳೀಯರನ್ನು ಕೆರಳಿಸಿದೆ.
ಸರ್ವೇ ಮಾಡುವಾಗ ಸ್ಥಳೀಯರು ಅಧಿಕಾರಿಯನ್ನು ವಿಚಾರಿಸಿದ್ದಾರೆ. ಆಗ ಅಭಿಯಂತರ ಮೋಹನ್ ಅವರು ಈ ನಿವೇಶನದಲ್ಲಿ ಮುಡಾ ವ್ಯಾಪಾರಿ ಮಳಿಗೆ ನಿರ್ಮಾಣ ಮಾಡಲಾಗುವುದು. ಪ್ರಾಧಿಕಾರದ ಅಧ್ಯಕ್ಷರ ಆದೇಶದ ಮೇರೆಗೆ ಸರ್ವೇ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ತಕ್ಷಣ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾದ ಸ್ಥಳೀಯ ಕಾಂಗ್ರೆಸ್ ಮುಖಂಡ ಹಾಗೂ ಹೋರಾಟಗಾರರಾದ ಎಂ.ಎನ್.ಮಹದೇವು, ಈ ವಿಚಾರವಾಗಿ ಶಾಸಕರು, ಜಿಲ್ಲಾಧಿಕಾರಿ, ಮುಡಾ ಹಾಗೂ ಪಾಲಿಕೆ ಆಯುಕ್ತರು ಮತ್ತು ಪಾಲಿಕೆಯ ಮುಡಾ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಈ ಕಾರ್ಯವನ್ನು ಕೈಗೆತ್ತಿಕೊಳ್ಳುವ ಮೊದಲು ಇದರ ಹಿನ್ನೆಲೆ ತಿಳಿದುಕೊಂಡು ಸುಮಾರು 21 ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ಕೋರಿದ್ದಾರೆ.

ಅನೇಕ ಜಾತಿಯವರು ಇಲ್ಲಿ ಶವ ಸಂಸ್ಕಾರ ಮಾಡುತ್ತಾರೆ
ಶತಮಾನಕ್ಕೂ ಹಳೆಯದಾದ ಈ ರುದ್ರಭೂಮಿಯಲ್ಲಿ ಸಮೀಪದ 21 ಬಡಾವಣೆಗಳ ವಿವಿಧ ಸಮುದಾಯಗಳವರಾದ ರಜಪೂತ್, ನಾಯಕರು, ಕುಂಬಾರರು, ಉಪ್ಪಾರರು, ಒಕ್ಕಲಿಗರು, ಕಮ್ಮಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬೋವಿ, ಗಂಗಟಕಾರ, ಸವಿತ ಸಮಾಜ, ಮಡಿವಾಳ, ದರ್ಜಿ, ಕೊರವ, ಉಳವ, ಈಡಿಗ ಮುಂತಾದ ಅನೇಕ ಜಾತಿ ಮತಕ್ಕೆ ಸೇರಿದವರು ಇಲ್ಲಿ ಶವ ಸಂಸ್ಕಾರ ಮಾಡುತ್ತಾ ಬಂದಿದ್ದಾರೆ. ಸ್ಮಶಾನದ ಸಮೀಪ ರಸ್ತೆ ಅಗಲೀಕರಣದ ನಂತರ ಉಳಿದ ಭೂಮಿಯನ್ನು ಹಿಂದೂ ರುದ್ರಭೂಮಿಗೇ ನೀಡಬೇಕೆಂದು ತೀರ್ಮಾನಿಸಲಾಗಿದ್ದರೂ, 1980 ರಲ್ಲಿ ಪ್ರಾಧಿಕಾರವು ಜೆ.ಕೆ.ಟ್ರಸ್ಟ್ ಮತ್ತು ಇತರರು ಸೇರಿದಂತೆ 8 ಮಂದಿಗೆ ಹಂಚಿಕೆ ಮಾಡಿತ್ತು.

ಈವರೆಗೂ ಆ ನಿವೇಶನಕ್ಕೆ ಕಾಂಪೌಂಡ್ ಹಾಕಿಲ್ಲ
ಆ ಸಂದರ್ಭದಲ್ಲಿ ಸ್ಥಳಿಯರು ಈ ಭೂಮಿಯನ್ನು ರುದ್ರಭೂಮಿಗೆ ನೀಡಬೇಕೆಂದು ಒತ್ತಾಯಿಸಿದ್ದರಿಂದ ಅಂದಿನ ವಿಭಾಗೀಯ ಅಧಿಕಾರಿ ಬಸವರಾಜು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ವಿಶ್ವನಾಥ್, ಸ್ಥಳೀಯ ಶಾಸಕ ತನ್ವೀರ್ ಸೇಠ್ ಹಾಗೂ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರೂ ಕೂಡ ರಸ್ತೆ ಅಭಿವೃದ್ಧಿಯ ನಂತರ ಉಳಿದಿರುವ ಬಾಕಿ ತುಂಡು ಭೂಮಿಯನ್ನು ಹಿಂದೂ ರುದ್ರಭೂಮಿಗೇ ನೀಡುವಂತೆ ಆದೇಶ ಮಾಡಿದ್ದರು. ಆದರೆ ಈವರೆಗೂ ಆ ನಿವೇಶನಕ್ಕೆ ಕಾಂಪೌಂಡ್ ಹಾಕದ ಕಾರಣ ಯಾರು, ಯಾವಾಗ ಈ ಜಾಗವನ್ನು ಲಪಟಾಯಿಸುತ್ತಾರೋ ಎಂಬ ಆತಂಕದಲ್ಲಿದ್ದಾರೆ.

ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ನಿರ್ದೇಶನ
ಸುಮಾರು ನಲವತ್ತು ವರ್ಷಗಳಿಂದ ಪ್ರಾಧಿಕಾರದ ಯಾವ ಅಧ್ಯಕ್ಷರೂ ಈ ನಿವೇಶನಕ್ಕೆ ಕಣ್ಣು ಹಾಕಲಿಲ್ಲ. ಆದರೆ ಈಗ ಹಿಂದುತ್ವದ ರಕ್ಷಕರು ಎಂದೇ ಹೇಳಿಕೊಳ್ಳುವ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಈ ನಿವೇಶನದಲ್ಲಿ ವ್ಯಾಪಾರಿ ಮಳಿಗೆ ಮಾಡುವ ಉದ್ದೇಶದಿಂದ ತಮ್ಮ ಅಧಿಕಾರಿಗಳಿಗೆ ಸರ್ವೇ ಮಾಡಿ ವರದಿ ನೀಡಲು ಸೂಚಿಸಿದ್ದಾರೆ.

ವ್ಯಾಪಾರಿ ಮಳಿಗೆ ಮಾಡಲು ಬಿಡುವುದಿಲ್ಲ
ಈ ವಿಷಯ ತಿಳಿದು ಎಚ್ಚೆತ್ತುಕೊಂಡಿರುವ ಸ್ಥಳೀಯರು, ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲು ಸನ್ನದ್ಧರಾಗುತ್ತಿರುವುದಲ್ಲದೇ, ರುದ್ರಭೂಮಿಗೆ ಖಾಲಿ ನಿವೇಶನ ಸೇರಿಸಿಯೇ ಕಾಂಪೌಂಡ್ ನಿರ್ಮಿಸಲು ತೀರ್ಮಾನಿಸಿದ್ದೇವೆ ಎನ್ನುತ್ತಾರೆ. ಹೋರಾಟದಲ್ಲಿ ಅಂದು ಭಾಗವಹಿಸಿದ್ದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಇಂದಿಗೂ ನಲವತ್ತು ವರ್ಷಗಳ ಹಿಂದೆ ನಡೆದ ಹೋರಾಟವನ್ನು ಮೆಲುಕು ಹಾಕುತ್ತಾ, ಯಾವುದೇ ಕಾರಣಕ್ಕೂ ಈ ನಿವೇಶನದಲ್ಲಿ ವ್ಯಾಪಾರಿ ಮಳಿಗೆ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ವಿಷಯ ಮಂಡಿಸಲು ತೀರ್ಮಾನ
ಈ ಕುರಿತು ಶಾಸಕರಾದ ತನ್ವೀರ್ ಸೇಠ್ ಅವರನ್ನು ಸಂಪರ್ಕಿಸಿದಾಗ, ಈ ನಿವೇಶನದ ಬಗ್ಗೆ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿದೆ. ನಾನೂ ಕೂಡ ಅಧಿಕಾರಿಗಳಿಗೆ ಅನೇಕ ವರ್ಷಗಳಿಂದ ಪತ್ರ ಬರೆಯುತ್ತಲೇ ಇದ್ದೇನೆ. ಈ ಬಾರಿಯೂ ಪತ್ರದ ಮೂಲಕ ವಿವರವಾಗಿ ತಿಳಿಸಿದ್ದೇನೆ. ನ.20ರ ಪ್ರಾಧಿಕಾರದ ಸಭೆಯಲ್ಲಿ ವಿಷಯ ಮಂಡಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications