Get Updates
Get notified of breaking news, exclusive insights, and must-see stories!

"ಕೊರೊನಾ ವೈರಸ್ ನಿಯಂತ್ರಣಕ್ಕೆ ವಿಪಕ್ಷದಿಂದ ಒಂದಿಂಚೂ ಸಹಕಾರ ಸಿಗುತ್ತಿಲ್ಲ''

ಮೈಸೂರು, ಜುಲೈ 15: ಕೊರೊನಾ ವೈರಸ್ ನಿಯಂತ್ರಣ ವಿಷಯದಲ್ಲಿ ವಿರೋಧ ಪಕ್ಷದವರು ಕೇವಲ ಆರೋಪ ಮಾಡುತ್ತಿದ್ದಾರೆ ಹೊರತು, ಅವರಿಂದ ಸ್ವಲ್ಪವೂ ಸಹಕಾರ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.

Recommended Video

      ಪೋಷಕರು ಇಂತ ಸಮಯದಲ್ಲಿ ಮಕ್ಕಳ ಕಡೆ ಗಮನ ಹರಿಸಬೇಕು | oneindia Kannada

      ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಲೆಕ್ಕ ಕೇಳುತ್ತಿರುವ ಪ್ರತಿಪಕ್ಷಗಳು, ಇದು ಆರೋಪ ಮಾಡುವ ಸಮಯವಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಲೆಕ್ಕ ಕೊಡಿ ಎನ್ನುತ್ತಿರುವ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ಲೆಕ್ಕ ತಲುಪಿಸುತ್ತೇವೆ ಎಂದರು.

      ರಾಜ್ಯ ಸರ್ಕಾರ 2-3 ಸಾವಿರ ಕೋಟಿ ರೂ. ಅವ್ಯವಹಾರ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ನಾವು ಅಷ್ಟು ಹಣ ಖರ್ಚು ಸಹ ಮಾಡಿಲ್ಲ. ಈವರೆಗೆ ರಾಜ್ಯ ಸರ್ಕಾರ ಬಳಸಿರೋದು 450 ರಿಂದ 500 ಕೋಟಿ ರೂ. ಅಷ್ಟೇ. ಹೀಗಿರುವಾಗ 2-3 ಸಾವಿರ ಕೋಟಿ ರೂ.ಗಳಿಗೆ ಎಲ್ಲಿಂದ ಲೆಕ್ಕ ಕೊಡಬೇಕು ಎಂದು ಮರು ಪ್ರಶ್ನೆ ಹಾಕಿದರು.

      Opposition Not Cooperating For Coronavirus Control: Minister R. Ashok

      ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹಾಸಿಗೆ, ಹೊದಿಕೆ ಬಾಡಿಗೆ ವಿಚಾರದಲ್ಲಿ ಅವ್ಯವಹಾರ ಆಗಿದೆ ಎನ್ನುತ್ತಾರೆ. ಆದರೆ ಹಾಸಿಗೆ, ಬಕೆಟ್, ಜಗ್ಗು ಮುಂತಾದ ಮರು ಬಳಕೆಯಾಗುವ ವಸ್ತುಗಳನ್ನು ಖರೀದಿ ಮಾಡಲು ನಿರ್ಧರಿಸಿದ್ದೇವೆ.

      ಭವಿಷ್ಯದಲ್ಲಿ ಅವುಗಳನ್ನು ಸ್ಯಾನಿಟೈಸ್ ಮಾಡಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡುತ್ತೇವೆ. ಇದರ ಹೊರತು ಡಿ.ಕೆ ಶಿವಕುಮಾರ್ ಹೇಳುವಂತೆ ಯಾರಿಗೂ ನಾವು ಬಾಡಿಗೆ ಕೊಟ್ಟಿಲ್ಲ. ಇವೆಲ್ಲದರ ನಡುವೆಯೂ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಕಡಿಮೆಯಾದ ಬಳಿಕ ಇಂಚಿಂಚೂ ಲೆಕ್ಕ ಕೊಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+