ಸಾವಯವ ಕೃಷಿ, ರೈತರ ಹಿತರಕ್ಷಣೆಯಿಂದ ದೇಶ ಸಮೃದ್ಧ: ಯದುವೀರ್
ಮೈಸೂರು, ನವೆಂಬರ್ 11: ಪರಿಸರ ಉಳಿಸುವುದು ಕೇವಲ ರೈತರ ಜವಾಬ್ದಾರಿ ಮಾತ್ರ ಅಲ್ಲ . ಅದು ಪ್ರತಿಯೊಬ್ಬರ ನಾಗರಿಕರ ಕರ್ತವ್ಯ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ಆರಂಭಗೊಂಡ ಮೂರು ದಿನಗಳ ರಾಷ್ಟ್ರಮಟ್ಟದ ಕಿಸಾನ್ ಸ್ವರಾಜ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮಗಿರುವುದು ಒಂದೇ ಪರಿಸರ. ಸಾವಯವ ಕೃಷಿ, ರೈತರ ಹಿತರಕ್ಷಣೆ ಇದ್ದರೆ ನಮ್ಮ ದೇಶ ಸಮೃದ್ಧವಾಗಿರುತ್ತದೆ. ಇವುಗಳ ರಕ್ಷಣೆ ಜೊತೆಗೆ ಮಣ್ಣಿನ ಸಂರಕ್ಷಣೆ ಆಗಬೇಕು. ಕೃಷಿ ವಲಯದಲ್ಲಿ ಏನೆಲ್ಲಾ ಅಭಿವೃದ್ಧಿ , ಬದಲಾವಣೆ ಆಗಬೇಕು ಎಂಬುದರ ಬಗ್ಗೆ ಎಲ್ಲರೂ ಯೋಚಿಸಬೇಕು. ಎರಡು ಸಾವಿರ ಕೃಷಿಕರು ನಾನಾ ಭಾಗಗಳಿಂದ ಈ ಸಮ್ಮೇಳನಕ್ಕೆ ಬಂದಿರುವುದು ನಿಜಕ್ಕೂ ಖುಷಿ ತಂದಿದೆ ಎಂದರು.
ಕೃಷಿ ವಿಜ್ಞಾನಿ ಎ.ಆರ್.ವಾಸವಿ ಮಾತನಾಡಿ, ''ಇಂದು ಏಕ ಬೆಳೆಯು ಕೃಷಿಭೂಮಿಯನ್ನು ಆವರಿಸಿದ್ದು, ಮಣ್ಣು ಸತ್ವ ಕಳೆದುಕೊಂಡಿದೆ. ಜಾಗತಿಕ ತಾಪಮಾನ ಹೆಚ್ಚಳದಿಂದ ಅತಿವೃಷ್ಟಿ- ಅನಾವೃಷ್ಟಿ ಆಗುತ್ತಿದ್ದು, ಕೃಷಿ ವಲಯ ಬಿಕ್ಕಟ್ಟಿಗೆ ಸಿಲುಕಿದೆ. ಅದಕ್ಕೆ ಸಾವಯವ ಕೃಷಿಯೇ ಪರಿಹಾರ. ಜಾಗತಿಕ ವಾತಾವರಣ ಬದಲಾವಣೆ ಎಲ್ಲ ದೇಶಗಳ ಆಹಾರ ಭದ್ರತೆಗೆ ಸವಾಲನ್ನು ಒಡ್ಡಿದೆ. ಕೃಷಿ ವೈವಿಧ್ಯ ಉಳಿಸಿಕೊಳ್ಳುವುದೇ ನಮ್ಮ ಮುಂದಿರುವ ಆಯ್ಕೆ'' ಎಂದು ತಿಳಿಸಿದರು.

ಬಂಡವಾಳಶಾಹಿ ಪ್ರೇರಿತ ಮಾರುಕಟ್ಟೆಯು ರೈತರನ್ನು ಆದಾಯ ಕೇಂದ್ರಿತ ಕೃಷಿಗೆ ತಳ್ಳಿದೆ. ಅದರಿಂದ ವೈವಿಧ್ಯದ ಬೆಳೆ ಪದ್ಧತಿ ಕಣ್ಮರೆಯಾಗಿ ವಾಣಿಜ್ಯ, ಏಕ ಬೆಳೆಯು ಕೃಷಿಭೂಮಿಯನ್ನು ಆವರಿಸಿಕೊಂಡಿದೆ. ಹಸಿರು ಕ್ರಾಂತಿಯು ಪಾರಂಪರಿಕ ಕೃಷಿಯನ್ನು ಅವಸಾನಕ್ಕೆ ತಳ್ಳಿದೆ. ಕೃಷಿ ಭೂಮಿಯನ್ನು ರಾಸಾಯನಿಕ ಗೊಬ್ಬರ, ಕೀಟನಾಶಕಗಳು ಹಾಳು ಮಾಡಿವೆ. ರೈತ ಸಮುದಾಯ ಆರಂಭದಲ್ಲಿ ಲಾಭಗಳಿಸಿದರೂ ಕಾಲಾನಂತರ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.
ಕೇರಳದ ಕೃಷಿ ಸಚಿವ ಪಿ. ಪ್ರಸಾದ್ ಮಾತನಾಡಿ, "ಇಂದು ಜಾಗತಿಕ ತಾಪಮಾನ ಹೆಚ್ಚುತ್ತಿದೆ. ಆದರೂ ಆಳುವ ಸರಕಾರಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹಾಗಾಗಿ ಪರಿಸರ ಸಂರಕ್ಷಣೆಗೆ ಇದು ಸರಿಯಾದ ಸಮಯ. ಭೂಮಿಯನ್ನು ರಕ್ಷಣೆ ಮಾಡಬೇಕಿದೆ. ಎಲ್ಲೆಡೆ ಉಂಟಾಗುತ್ತಿರುವ ಪ್ರಾಕೃತಿಕ ವಿಕೋಪಗಳನ್ನು ತಡೆಯಬೇಕಾದರೆ ಸಾವಯವ ಕೃಷಿಯತ್ತ ಹೊರಳುವುದು ತುರ್ತು ಅವಶ್ಯಕತೆಯಾಗಿದೆ" ಎಂದರು.
ಕೆಎಸ್ಒಯು ಕುಲಸಚಿವ ಖಾದರ್ ಪಾಷಾ, ಆಶಾ ಕಿಸಾನ್ ಸ್ವರಾಜ್ ಸಂಸ್ಥೆಯ ನಚಿಕೇತ್, ನಿವೃತ್ತ ಮೇಜರ್ ಜನರಲ್ ಒಂಬತ್ಕೆರೆ, ಸಮ್ಮೇಳನದ ಸ್ವಾಗತ ಸದಸ್ಯ ಕೃಷ್ಣಪ್ರಸಾದ್ ಇತರರು ಇದ್ದರು.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications