ನಿವಾರ್ ಚಂಡಮಾರುತ ಎದುರಿಸಲು ಸಜ್ಜು: ಸಿಎಂ ಯಡಿಯೂರಪ್ಪ
ಮೈಸೂರು, ನವೆಂಬರ್ 25: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಎರಡು ದಿನಗಳಿಂದ ಮೈಸೂರು ಪ್ರವಾಸದಲ್ಲಿದ್ದಾರೆ. ಇಂದು ಅಪ್ಪಳಿಸಲಿರುವ ನಿವಾರ್ ಚಂಡಮಾರುತ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ತಮಿಳುನಾಡು ಕರಾವಳಿ ತೀರದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಮಾಹಿತಿ ಇದೆ ಎಂದರು.
ಚಂಡಮಾರುತದಿಂದ ರಾಜ್ಯದಲ್ಲಿಯೂ ಭಾರೀ ಮಳೆಯಾಗುವ ಸಂಭವವಿದ್ದು, ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮ ಕೈಗೊಂಡು ಅಲರ್ಟ್ ಆಗಿರಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ, ಇಂದು ಇನ್ನೂ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುತ್ತೇವೆ. ಇಂದು ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುತ್ತದೆ. ಯಾರ್ಯಾರಿಗೆ ಅವಕಾಶ ತಪ್ಪಿದೆಯೋ ಅವರಿಗೆ ಮುಂದೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ ಸಂಪುಟ ವಿಸ್ತರಣೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದರು.

ತಂಗಿಯ ಮೊಮ್ಮಗನ ವಿವಾಹ ಮಹೋತ್ಸವದಲ್ಲಿ ಯಡಿಯೂರಪ್ಪ ಭಾಗಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮೈಸೂರಿನ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ ತಮ್ಮ ತಂಗಿಯ ಮೊಮ್ಮಗನ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ವಧು-ವರರನ್ನು ಆಶೀರ್ವದಿಸಿದರು.
ತಮ್ಮ ತಂಗಿಯ ಮಗಳಾದ ಬಿ.ಎಸ್.ಸಂಧ್ಯಾರಾಣಿ ಮತ್ತು ಎಸ್.ಸಿ ಅಶೋಕ್ ಅವರ ಪುತ್ರ ಅಜಯ್ ಎಸ್.ಎ ಹಾಗೂ ನಿಸರ್ಗ ಅವರ ವಿವಾಹವು ಬುಧವಾರ ಮೈಸೂರಿನಲ್ಲಿ ನಡೆಯಿತು.
ಮಂಗಳವಾರ ಸಂಜೆ ಕೂಡ ಲಲಿತ್ ಮಹಲ್ ಪ್ಯಾಲೇಸ್ ನಲ್ಲಿ ನಡೆದ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಂಡು ನೂತನ ಜೋಡಿಗೆ ಹೂಗುಚ್ಛ ನೀಡಿ ಶುಭಕೋರಿದ್ದರು. ಆದರೆ ಮದುವೆ ಧಾರೆ ಮುಹೂರ್ತದ ವೇಳೆ ಯಾರೂ ಮಾಸ್ಕ್ ಧರಿಸಿದ್ದಾಗಲಿ, ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಾಗಲಿ ಕಂಡು ಬರಲಿಲ್ಲ ಎನ್ನಲಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications