ಸಿಡಿಮದ್ದು ತಾಲೀಮಿಗೆ ಬೆದರದ ಅರ್ಜುನ, ಬಲರಾಮ, ಅಭಿಮನ್ಯು...
ಮೈಸೂರು, ಅಕ್ಟೋಬರ್.01: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ಮೆರವಣಿಗೆಯಲ್ಲಿ ಭಾಗವಹಿಸುವ ದಸರಾ ಗಜಪಡೆ ಹಾಗೂ ಅಶ್ವಪಡೆ ಕುಶಾಲು ತೋಪುಗಳ ಸದ್ದಿಗೆ ಬೆದರದಿರಲೆಂದು ಕುಶಾಲುತೋಪುಗಳನ್ನು ಸಿಡಿಸುವ ಮೂಲಕ ಎರಡನೇ ಸುತ್ತಿನ ತಾಲೀಮು ನಡೆಸಲಾಯಿತು.
ಎರಡನೇ ಬಾರಿಯೂ ಅಶ್ವಪಡೆಯ ಕೆಲವು ಕುದುರೆಗಳು ಬೆದರಿದವು. ಮತ್ತೆ ಧನಂಜಯ, ಚೈತ್ರ, ದ್ರೋಣ ಬೆದರಿದವು. ಆದರೆ ಅವು ವಿಚಲಿತವಾಗಿ ಓಡುವ ಪ್ರಯತ್ನ ಮಾಡಲಿಲ್ಲ. ಮುಖ ಕೊಟ್ಟು ನಿಲ್ಲಲು ಸಾಧ್ಯವಾಗದೆ ಮುಖವನ್ನು ತಿರುಗಿಸಿದವು.
ನಗರದ ಅರಮನೆ ಮುಂಭಾಗ ಇರುವ ಕೋಟೆ ಮಾರಮ್ಮನ ದೇವಸ್ಥಾನದ ಮೈದಾನದಲ್ಲಿ ಅರ್ಜುನ ನೇತೃತ್ವದ 12 ಆನೆಗಳು ಹಾಗೂ 24 ಕುದುರೆಗಳನ್ನು ನಿಲ್ಲಿಸಿ ಅವುಗಳಿಂದ ಸ್ವಲ್ಪ ದೂರದಲ್ಲಿ ಫಿರಂಗಿಗಳನ್ನು ಸಜ್ಜುಗೊಳಿಸಿ ಮದ್ದು ತುಂಬಿ ಸಿಡಿಸಲಾಯಿತು. ಈ ಮೂಲಕ ಅಗಾಧ ಶಬ್ದವನ್ನು ಆನೆಗಳು ಮತ್ತು ಕುದುರೆಗಳಿಗೆ ಪರಿಚಯಿಸಲಾಯಿತು.

ತಾಲೀಮಿನ ವೇಳೆ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿರುವ ಧನಂಜಯ, ಚೈತ್ರ ಮತ್ತು ದ್ರೋಣ ಆನೆಗಳು ಬೆದರಿದ್ದವು. ಈ ಹಿನ್ನೆಲೆಯಲ್ಲಿ ಇಂದೂ ಕೂಡ ಈ ಆನೆಗಳನ್ನು ಪ್ರತ್ಯೇಕವಾಗಿ ನಿಲ್ಲಿಸಿ, ಒಟ್ಟು 21 ಬಾರಿ ಕುಶಾಲುತೋಪುಗಳನ್ನು ಸಿಡಿಸುವಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಯಶಸ್ವಿಯಾದರು.

ಆದರೆ ಅಗಾಧ ಶಬ್ದಕ್ಕೆ ಅರ್ಜುನ, ಬಲರಾಮ, ಅಭಿಮನ್ಯು, ವಿಜಯ, ವರಲಕ್ಷ್ಮಿ, ಗೋಪಿ ಸೇರಿದಂತೆ ದಸರಾದಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಆನೆಗಳು ಕೊಂಚವೂ ವಿಚಲಿತವಾಗಲಿಲ್ಲ. ಮೂರನೇ ಸುತ್ತು ತಾಲೀಮು ಸದ್ಯದಲ್ಲೇ ನಡೆಯಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications