ಸಿಡಿಮದ್ದು ತಾಲೀಮಿಗೆ ಬೆದರದ ಅರ್ಜುನ, ಬಲರಾಮ, ಅಭಿಮನ್ಯು...
ಮೈಸೂರು, ಅಕ್ಟೋಬರ್.01: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ಮೆರವಣಿಗೆಯಲ್ಲಿ ಭಾಗವಹಿಸುವ ದಸರಾ ಗಜಪಡೆ ಹಾಗೂ ಅಶ್ವಪಡೆ ಕುಶಾಲು ತೋಪುಗಳ ಸದ್ದಿಗೆ ಬೆದರದಿರಲೆಂದು ಕುಶಾಲುತೋಪುಗಳನ್ನು ಸಿಡಿಸುವ ಮೂಲಕ ಎರಡನೇ ಸುತ್ತಿನ ತಾಲೀಮು ನಡೆಸಲಾಯಿತು.
ಎರಡನೇ ಬಾರಿಯೂ ಅಶ್ವಪಡೆಯ ಕೆಲವು ಕುದುರೆಗಳು ಬೆದರಿದವು. ಮತ್ತೆ ಧನಂಜಯ, ಚೈತ್ರ, ದ್ರೋಣ ಬೆದರಿದವು. ಆದರೆ ಅವು ವಿಚಲಿತವಾಗಿ ಓಡುವ ಪ್ರಯತ್ನ ಮಾಡಲಿಲ್ಲ. ಮುಖ ಕೊಟ್ಟು ನಿಲ್ಲಲು ಸಾಧ್ಯವಾಗದೆ ಮುಖವನ್ನು ತಿರುಗಿಸಿದವು.
ನಗರದ ಅರಮನೆ ಮುಂಭಾಗ ಇರುವ ಕೋಟೆ ಮಾರಮ್ಮನ ದೇವಸ್ಥಾನದ ಮೈದಾನದಲ್ಲಿ ಅರ್ಜುನ ನೇತೃತ್ವದ 12 ಆನೆಗಳು ಹಾಗೂ 24 ಕುದುರೆಗಳನ್ನು ನಿಲ್ಲಿಸಿ ಅವುಗಳಿಂದ ಸ್ವಲ್ಪ ದೂರದಲ್ಲಿ ಫಿರಂಗಿಗಳನ್ನು ಸಜ್ಜುಗೊಳಿಸಿ ಮದ್ದು ತುಂಬಿ ಸಿಡಿಸಲಾಯಿತು. ಈ ಮೂಲಕ ಅಗಾಧ ಶಬ್ದವನ್ನು ಆನೆಗಳು ಮತ್ತು ಕುದುರೆಗಳಿಗೆ ಪರಿಚಯಿಸಲಾಯಿತು.

ತಾಲೀಮಿನ ವೇಳೆ ಇದೇ ಮೊದಲ ಬಾರಿಗೆ ಭಾಗವಹಿಸುತ್ತಿರುವ ಧನಂಜಯ, ಚೈತ್ರ ಮತ್ತು ದ್ರೋಣ ಆನೆಗಳು ಬೆದರಿದ್ದವು. ಈ ಹಿನ್ನೆಲೆಯಲ್ಲಿ ಇಂದೂ ಕೂಡ ಈ ಆನೆಗಳನ್ನು ಪ್ರತ್ಯೇಕವಾಗಿ ನಿಲ್ಲಿಸಿ, ಒಟ್ಟು 21 ಬಾರಿ ಕುಶಾಲುತೋಪುಗಳನ್ನು ಸಿಡಿಸುವಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಯಶಸ್ವಿಯಾದರು.

ಆದರೆ ಅಗಾಧ ಶಬ್ದಕ್ಕೆ ಅರ್ಜುನ, ಬಲರಾಮ, ಅಭಿಮನ್ಯು, ವಿಜಯ, ವರಲಕ್ಷ್ಮಿ, ಗೋಪಿ ಸೇರಿದಂತೆ ದಸರಾದಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಆನೆಗಳು ಕೊಂಚವೂ ವಿಚಲಿತವಾಗಲಿಲ್ಲ. ಮೂರನೇ ಸುತ್ತು ತಾಲೀಮು ಸದ್ಯದಲ್ಲೇ ನಡೆಯಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications