ನಾಡಹಬ್ಬ ದಸರಾಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪ್ಯಾಕೇಜ್ ಟೂರ್
ಮೈಸೂರು, ಅಕ್ಟೋಬರ್. ೦1 : ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಇನ್ನು 17 ದಿನಗಳಷ್ಟೇ ಬಾಕಿ ಉಳಿದಿದೆ. ದಸರಾ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಸಹ ಪ್ರವಾಸಿಗರ ಅನುಕೂಲಕ್ಕಾಗಿ ಪ್ಯಾಕೇಜ್ ಟೂರ್ ವ್ಯವಸ್ಥೆ ಮಾಡಲಾಗಿದೆ.
ಈ ವಿಶೇಷ ಪ್ಯಾಕೇಜ್ ಟೂರ್ ಮೂಲಕ ಪ್ರವಾಸಿಗರು ಅ.11ರಿಂದ ಅ.25ರವರೆಗೆ ಮೈಸೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ. ಕೆಎಸ್ಆರ್ ಟಿಸಿಯ ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ಮತ್ತು ಕೆಎಸ್ ಆರ್ಟಿಸಿ ಖಾಸಗಿ ಬುಕ್ಕಿಂಗ್ ಕೌಂಟರ್ ಹಾಗೂ ಆನ್ ಲೈನ್ ಮುಖಾಂತರವೂ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.
ಗಿರಿಧಾಮಗಳನ್ನು ಸಂದರ್ಶಿಸುವ ಗಿರಿದರ್ಶಿನಿ', ಜಲಾಶಯ ಹಾಗೂ ಜಲಪಾತಗಳ ದರ್ಶನದ ಜಲ ದರ್ಶಿನಿ' ಹಾಗೂ ಧಾರ್ಮಿಕ ಸ್ಥಳಗಳನ್ನು ಸಂದರ್ಶಿಸುವ ದೇವ ದರ್ಶಿನಿ' ಪ್ರವಾಸಗಳನ್ನು ಮುಂದುವರಿಸಲಾಗಿದೆ.

ಗಿರಿ ದರ್ಶಿನಿಯಲ್ಲಿ ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು, ಚಾಮುಂಡಿ ಬೆಟ್ಟಕ್ಕೆ ಭೇಟಿ ಇರುತ್ತದೆ. ತೆರಳುವ ಸಮಯ ಬೆಳಗ್ಗೆ 6.30, ಕ್ರಮಿಸುವ ದೂರ 325 ಕಿಮೀ, ಪ್ರಯಾಣ ದರ 350 ರೂ, ಮಕ್ಕಳಿಗೆ 175 ರೂ.
ಜಲ ದರ್ಶಿನಿಯಲ್ಲಿ ಗೋಲ್ಡನ್ ಟೆಂಪಲ್, ದುಬಾರೆ ಅರಣ್ಯ, ನಿಸರ್ಗಧಾಮ, ಅಬ್ಬಿ ಜಲಪಾತ, ರಾಜಸೀಟ್, ಹಾರಂಗಿ ಜಲಾಶಯ, ಕೆಆರ್ ಎಸ್ ಭೇಟಿ ಇರುತ್ತದೆ. ತೆರಳುವ ಸಮಯ ಬೆಳಗ್ಗೆ 6.30, ಕ್ರಮಿಸುವ ದೂರ 350 ಕಿ.ಮೀ, ಪ್ರಯಾಣ ದರ 375 ರೂ. ಮಕ್ಕಳಿಗೆ 190 ರೂ.
ದೇವದರ್ಶಿನಿಯಲ್ಲಿ ನಂಜನಗೂಡು, ತಲಕಾಡು, ಬ್ಲಫ್, ಮುಡುಕುತೊರೆ, ಸೋಮನಾಥಪುರ, ಶ್ರೀರಂಗಪಟ್ಟಣ, ಕೆಆರ್ ಎಸ್ ಭೇಟಿ ಇರುತ್ತದೆ. ತೆರಳುವ ಸಮಯ ಬೆಳಗ್ಗೆ 6.30, ಕ್ರಮಿಸುವ ದೂರ 250 ಕಿ.ಮೀ., ಪ್ರಯಾಣದರ 275 ರೂ. ಮಕ್ಕಳಿಗೆ 140 ರೂ . ಹೀಗೆ ಈ ಬಾರಿ ವಿಶೇಷವಾದ ಪ್ಯಾಕೇಜ್ ಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೀಡುತ್ತಿರುವುದು ವಿಶೇಷ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications