ನ.1 ರಿಂದ ವರ್ಷವಿಡೀ ಆಕಾಶವಾಣಿಯಲ್ಲಿ 'ಪದ ಸಂಸ್ಕೃತಿ' ಸರಣಿ ಆರಂಭ
ಮೈಸೂರು, ಅಕ್ಟೋಬರ್.30: ಕನ್ನಡ ರಾಜ್ಯೋತ್ಸವದ ಅಂಗವಾಗಿ ಇದೇ ನವೆಂಬರ್ 1ರಿಂದ ವರ್ಷವಿಡೀ ಕನ್ನಡ ಪದಗಳು ಬಳಕೆಯಾಗುವ ನಿಟ್ಟಿನಲ್ಲಿ ಪದ ಸಂಸ್ಕೃತಿ ಸರಣಿ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಮೈಸೂರು ಆಕಾಶವಾಣಿ ಉಪ ನಿರ್ದೇಶಕ ಎಚ್. ಶ್ರೀನಿವಾಸ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದ ಎಲ್ಲಾ 13 ಆಕಾಶವಾಣಿ ಕೇಂದ್ರಗಳಿಂದ ಏಕಕಾಲದಲ್ಲಿ ಪದ ಸಂಸ್ಕೃತಿ ಸರಣಿ ಪ್ರಸಾರವಾಗಲಿದೆ. ಪ್ರತಿದಿನ ಬೆಳಗ್ಗೆ 6:45 ರಿಂದ 6:55 ರ ವರಗೆ 10ನಿಮಿಷಗಳ ಕಾಲ ಪ್ರಸಾರವಿರಲಿದೆ.
ಪ್ರಸ್ತುತ ದಿನಗಳಲ್ಲಿ ಕನ್ನಡ ಪದಗಳ ಬಳಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯ ಸಾಕಷ್ಟು ಪದಗಳನ್ನು ಬಳಸದೇ ಇರುವುದರಿಂದ ಮರೆಯಾಗುತ್ತಿರುವ ಪದಗಳನ್ನು ಆಕಾಶವಾಣಿಯಲ್ಲಿ ಈ ಸರಣಿ ಕಾರ್ಯಕ್ರಮದಲ್ಲಿ ಮರುಕಳಿಸುವಂತೆ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಜಾನಪದ, ಭಾವಗೀತೆ, ದಾಸರ ಕೀರ್ತನೆಗಳು, ವಚನಗಳು, ಇವುಗಳ ಸರಸತ್ವ ಹಾಗೂ ಕವಿಯ ರಚನೆಯ ಅರ್ಥವನ್ನು ತಿಳಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಹಲವಾರು ಭಾಷಾ ತಜ್ಞರನ್ನು ಸಂಪರ್ಕ ಮಾಡಿ ಅವರಿಂದ ಕಾರ್ಯಕ್ರಮ ನಡೆಸುವ ಚಿಂತನೆ ಆಕಾಶವಾಣಿ ಮಾಡುತ್ತಿದೆ ಎಂದು ಎಚ್. ಶ್ರೀನಿವಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಸುನೀಲ್ ಭಾಟಿಯಾ ಹಾಜರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications