ನ.1 ರಿಂದ ವರ್ಷವಿಡೀ ಆಕಾಶವಾಣಿಯಲ್ಲಿ 'ಪದ ಸಂಸ್ಕೃತಿ' ಸರಣಿ ಆರಂಭ
ಮೈಸೂರು, ಅಕ್ಟೋಬರ್.30: ಕನ್ನಡ ರಾಜ್ಯೋತ್ಸವದ ಅಂಗವಾಗಿ ಇದೇ ನವೆಂಬರ್ 1ರಿಂದ ವರ್ಷವಿಡೀ ಕನ್ನಡ ಪದಗಳು ಬಳಕೆಯಾಗುವ ನಿಟ್ಟಿನಲ್ಲಿ ಪದ ಸಂಸ್ಕೃತಿ ಸರಣಿ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಮೈಸೂರು ಆಕಾಶವಾಣಿ ಉಪ ನಿರ್ದೇಶಕ ಎಚ್. ಶ್ರೀನಿವಾಸ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದ ಎಲ್ಲಾ 13 ಆಕಾಶವಾಣಿ ಕೇಂದ್ರಗಳಿಂದ ಏಕಕಾಲದಲ್ಲಿ ಪದ ಸಂಸ್ಕೃತಿ ಸರಣಿ ಪ್ರಸಾರವಾಗಲಿದೆ. ಪ್ರತಿದಿನ ಬೆಳಗ್ಗೆ 6:45 ರಿಂದ 6:55 ರ ವರಗೆ 10ನಿಮಿಷಗಳ ಕಾಲ ಪ್ರಸಾರವಿರಲಿದೆ.
ಪ್ರಸ್ತುತ ದಿನಗಳಲ್ಲಿ ಕನ್ನಡ ಪದಗಳ ಬಳಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯ ಸಾಕಷ್ಟು ಪದಗಳನ್ನು ಬಳಸದೇ ಇರುವುದರಿಂದ ಮರೆಯಾಗುತ್ತಿರುವ ಪದಗಳನ್ನು ಆಕಾಶವಾಣಿಯಲ್ಲಿ ಈ ಸರಣಿ ಕಾರ್ಯಕ್ರಮದಲ್ಲಿ ಮರುಕಳಿಸುವಂತೆ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಜಾನಪದ, ಭಾವಗೀತೆ, ದಾಸರ ಕೀರ್ತನೆಗಳು, ವಚನಗಳು, ಇವುಗಳ ಸರಸತ್ವ ಹಾಗೂ ಕವಿಯ ರಚನೆಯ ಅರ್ಥವನ್ನು ತಿಳಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದ ಹಲವಾರು ಭಾಷಾ ತಜ್ಞರನ್ನು ಸಂಪರ್ಕ ಮಾಡಿ ಅವರಿಂದ ಕಾರ್ಯಕ್ರಮ ನಡೆಸುವ ಚಿಂತನೆ ಆಕಾಶವಾಣಿ ಮಾಡುತ್ತಿದೆ ಎಂದು ಎಚ್. ಶ್ರೀನಿವಾಸ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಸುನೀಲ್ ಭಾಟಿಯಾ ಹಾಜರಿದ್ದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications