ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.1 ರಿಂದ ವರ್ಷವಿಡೀ ಆಕಾಶವಾಣಿಯಲ್ಲಿ 'ಪದ ಸಂಸ್ಕೃತಿ' ಸರಣಿ ಆರಂಭ

|
Google Oneindia Kannada News

ಮೈಸೂರು, ಅಕ್ಟೋಬರ್.30: ಕನ್ನಡ ರಾಜ್ಯೋತ್ಸವದ ಅಂಗವಾಗಿ ಇದೇ ನವೆಂಬರ್ 1ರಿಂದ ವರ್ಷವಿಡೀ ಕನ್ನಡ ಪದಗಳು ಬಳಕೆಯಾಗುವ ನಿಟ್ಟಿನಲ್ಲಿ ಪದ ಸಂಸ್ಕೃತಿ ಸರಣಿ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಮೈಸೂರು ಆಕಾಶವಾಣಿ ಉಪ ನಿರ್ದೇಶಕ ಎಚ್. ಶ್ರೀನಿವಾಸ್ ತಿಳಿಸಿದರು.

ಕೀನ್ಯಾದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಕಾರ್ಕಳದ ವಿಷ್ಣು ಮಾಧವ್ ಪೈಕೀನ್ಯಾದಲ್ಲಿ ಕನ್ನಡ ಡಿಂಡಿಮ ಬಾರಿಸಿದ ಕಾರ್ಕಳದ ವಿಷ್ಣು ಮಾಧವ್ ಪೈ

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದ ಎಲ್ಲಾ 13 ಆಕಾಶವಾಣಿ ಕೇಂದ್ರಗಳಿಂದ ಏಕಕಾಲದಲ್ಲಿ ಪದ ಸಂಸ್ಕೃತಿ ಸರಣಿ ಪ್ರಸಾರವಾಗಲಿದೆ. ಪ್ರತಿದಿನ ಬೆಳಗ್ಗೆ 6:45 ರಿಂದ 6:55 ರ ವರಗೆ 10ನಿಮಿಷಗಳ ಕಾಲ ಪ್ರಸಾರವಿರಲಿದೆ.

 ಸರ್ಕಾರದ ಕಣ್ಣಿಗೆ ಕಾಣುತ್ತಿರುವುದು ಬೆಂಗಳೂರು, ಮೈಸೂರು ಮಾತ್ರ ಎಂದ ವಾಟಾಳ್ ನಾಗರಾಜ್ ಸರ್ಕಾರದ ಕಣ್ಣಿಗೆ ಕಾಣುತ್ತಿರುವುದು ಬೆಂಗಳೂರು, ಮೈಸೂರು ಮಾತ್ರ ಎಂದ ವಾಟಾಳ್ ನಾಗರಾಜ್

ಪ್ರಸ್ತುತ ದಿನಗಳಲ್ಲಿ ಕನ್ನಡ ಪದಗಳ ಬಳಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಭಾಷೆಯ ಸಾಕಷ್ಟು ಪದಗಳನ್ನು ಬಳಸದೇ ಇರುವುದರಿಂದ ಮರೆಯಾಗುತ್ತಿರುವ ಪದಗಳನ್ನು ಆಕಾಶವಾಣಿಯಲ್ಲಿ ಈ ಸರಣಿ ಕಾರ್ಯಕ್ರಮದಲ್ಲಿ ಮರುಕಳಿಸುವಂತೆ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದರು.

Pada Samskruthi series program is being launched on November 1

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಜಾನಪದ, ಭಾವಗೀತೆ, ದಾಸರ ಕೀರ್ತನೆಗಳು, ವಚನಗಳು, ಇವುಗಳ ಸರಸತ್ವ ಹಾಗೂ ಕವಿಯ ರಚನೆಯ ಅರ್ಥವನ್ನು ತಿಳಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 ಕಂಬಿ ಹಿಂದೆ ಕುಳಿತು ಕನ್ನಡ ಕಾಗುಣಿತ ತಿದ್ದುತ್ತಿರುವ ಶಶಿಕಲಾ ಕಂಬಿ ಹಿಂದೆ ಕುಳಿತು ಕನ್ನಡ ಕಾಗುಣಿತ ತಿದ್ದುತ್ತಿರುವ ಶಶಿಕಲಾ

ಕರ್ನಾಟಕದ ಹಲವಾರು ಭಾಷಾ ತಜ್ಞರನ್ನು ಸಂಪರ್ಕ ಮಾಡಿ ಅವರಿಂದ ಕಾರ್ಯಕ್ರಮ ನಡೆಸುವ ಚಿಂತನೆ ಆಕಾಶವಾಣಿ ಮಾಡುತ್ತಿದೆ ಎಂದು ಎಚ್. ಶ್ರೀನಿವಾಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಸುನೀಲ್ ಭಾಟಿಯಾ ಹಾಜರಿದ್ದರು.

English summary
Mysore Akashvani Deputy Director H. Srinivas Said that Pada Samskruthi series program is being launched on November 1 in Akashvani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X