ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಪದ್ಮಶ್ರೀ ತುಳಸೀಗೌಡ ಚಾಲನೆ
ಮೈಸೂರು, ಮಾರ್ಚ್ 13: ಮೈಸೂರಿನ ರಂಗಾಯಣದ ಅಂಗಳ ಎಂದಿನಂತೆ ಇರಲಿಲ್ಲ, ಕೊರೊನಾದಿಂದ ಹೊರಗೆಲ್ಲೂ ಹೋಗದೆ ಮನೆ ಸೇರಿದ್ದ ರಂಗ ಪ್ರೇಕ್ಷಕರು ಶನಿವಾರ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಾಕ್ಷಿಯಾದರು. ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ತುಳಸೀಗೌಡ ಮತ್ತು ನಟಿ ಮಾಳವಿಕ ಅವಿನಾಶ್ ಮುದ್ದಾದ ಮಗುವಿದ್ದ ತೊಟ್ಟಿಲು ತೂಗುವ ಮೂಲಕ ಬಹುರೂಪಿ ರಾಷ್ಟ್ರೀಯ ರಂಗೋತ್ಸವವನ್ನು ಉದ್ಘಾಟಿಸಿದರು.
ರಾಷ್ಟ್ರೀಯ ರಂಗೋತ್ಸವ ಉದ್ಘಾನೆ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, 'ತಾಯಿ' ಶೀರ್ಷಿಕೆಯಲ್ಲಿ ಹಮ್ಮಿಕೊಂಡಿರುವ ಬಹುರೂಪಿ ರಂಗೋತ್ಸವ ಬಹಳ ಉತ್ತಮವಾಗಿದೆ. 10 ದಿನಗಳ ಕಾಲ ನಾನಾ ನಾಟಕಗಳು, ಕಲಾ ಪ್ರದರ್ಶನ ವೀಕ್ಷಿಸುವ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಉಕ್ರೇನ್ನಲ್ಲಿ ಸಿಲುಕಿದ್ದ ತಮ್ಮ ಮಕ್ಕಳು ತಾಯ್ನಾಡಿಗೆ ಮರಳಿದಾಗ ಆ ತಾಯಂದಿರ ಸಂತೋಷಕ್ಕೆ ಪಾರವೇ ಇರಲಿಲ್ಲ. ತಾಯಿಗೆ ಇರುವ ಶಕ್ತಿಯನ್ನು ವರ್ಣಿಸಲು ಅಸಾಧ್ಯ. ತಾಯಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ರಂಗೋತ್ಸವ ಕಾರ್ಯಕ್ರಮದ ಬಗ್ಗೆ ಎಷ್ಟು ಹೇಳಿದರು ಸಾಲದು ಎಂದು ಎಸ್.ಟಿ. ಸೋಮಶೇಖರ್ ಬಣ್ಣಿಸಿದರು.

ಇದಕ್ಕೂ ಮುನ್ನ ಕರಕುಶಲ ಮೇಳಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು. ಮೇಯರ್ ಸುನಂದಾ ಪಾಲನೇತ್ರ, ಶಾಸಕ ಎಲ್. ನಾಗೇಂದ್ರ, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಮುಡಾ ಅಧ್ಯಕ್ಷ ಎಚ್.ವಿ. ರಾಜೀವ್, ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ ಎನ್.ವಿ. ಫಣೀಶ್, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ, ಕಾಡಾ ಅಧ್ಯಕ್ಷ ಶಿವಲಿಂಗಯ್ಯ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಂಗಾಯಣ ಹಿರಿಯ ಕಲಾವಿದ ರಾಮಚಂದ್ರ ಹಡಪದ ಮತ್ತು ತಂಡದಿಂದ ಪ್ರಾರ್ಥನೆ ನೆರವೇರಿಸಲಾಯಿತು. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಡಾ.ಎನ್. ಮಮತಾ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ರೂಪಿಸಿದ ಬಹುರೂಪಿ ಬುಲೆಟಿನ್ ಹಾಗೂ ಬಹುರೂಪಿ ಕಿರುಪುಸ್ತಿಕೆಯನ್ನು ಇದೇ ವೇದಿಕೆಯಲ್ಲಿ ಅನಾವರಣಗೊಳಿಸಲಾಯಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications