ಮೈಸೂರಲ್ಲಿ ವಾಹನ ನಿಲುಗಡೆ ಶುಲ್ಕ ದಂಧೆಗೆ ಬಿತ್ತು ಕಡಿವಾಣ
ಮೈಸೂರು,ಏಪ್ರಿಲ್,01: ನಗರದಲ್ಲಿ ವಾಹನ ನಿಲುಗಡೆ ಶುಲ್ಕ ವಸೂಲಿ ಒಂದು ದಂಧೆಯಾಗಿ ಪರಿಣಮಿಸಿದ್ದು, ವಾಹನ ನಿಲುಗಡೆದಾರರ ಬಳಿ ಹಣ ವಸೂಲಿ ಮಾಡಿ ವಂಚಿಸುತ್ತಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿ ನಿರ್ದೇಶಕಿ ಇಂದಿರಾ ಅವರು ಆಡಳಿತ ಮಂಡಳಿಯಡಿಯಲ್ಲೇ ಪಾರ್ಕಿಂಗ್ ನಿರ್ವಹಣೆ ಹಾಗೂ ಶುಲ್ಕ ವಸೂಲಿ ಮಾಡುವುದಾಗಿ ತಿಳಿಸಿದ್ದಾರೆ.
ಪ್ರವಾಸಿಗರು ನಗರದ ಯಾವುದೇ ಭಾಗದಲ್ಲಿ ವಾಹನ ನಿಲ್ಲಿಸಿದರೂ ಶುಲ್ಕ ತೆರಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲೂ ಪ್ರವಾಸಿಗರನ್ನು ಸುಲಿಗೆ ಮಾಡುವುದೇ ಕೆಲವರ ಖಯಾಲಿಯಾಗಿದೆ. ಹಾಗಾಗಿ ಅರಮನೆ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.[ಪಾರ್ಕಿಂಗ್ ಪ್ರಾಬ್ಲಂಗೆ ಪರಿಹಾರ ಹುಡುಕಿದ ನಾರಾಯಣ ಭಟ್ಟರು]

ವಾಹನ ನಿಲುಗಡೆ ಶುಲ್ಕ ಹೆಸರಿನಲ್ಲಿ ಪ್ರವಾಸಿಗರ ಸುಲಿಗೆ ನಿರಂತರವಾಗಿ ಸಾಗಿದ್ದು, ಅದರ ಮೇಲೆ ಕಡಿವಾಣವೇ ಇಲ್ಲದಂತಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಮೈಸೂರಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಸಂದರ್ಭ ವಾಹನಗಳನ್ನು ಖಾಲಿ ಇದ್ದ ಸ್ಥಳದಲ್ಲಿ ನಿಲ್ಲಿಸಲಾಗುತ್ತದೆ. ನಗರದ ಯಾವುದೇ ಮೂಲೆಯಲ್ಲಿ ನಿಲ್ಲಿಸಿದರೂ ಶುಲ್ಕವನ್ನಂತೂ ಕಟ್ಟಲೇ ಬೇಕು.[ಎಲ್ಲೆಂದ್ರಲ್ಲಿ ವಾಹನ ಪಾರ್ಕ್ ಮಾಡಿದ್ರೆ ಮನೆಗೆ ಬರುತ್ತೆ ನೋಟಿಸ್]
ಶುಲ್ಕದ ಹೆಸರಿನಲ್ಲಿ ಸಾಕಷ್ಟು ಲಾಭ ಪಡೆಯಬಹುದು ಎಂದು ಯೋಚಿಸಿದ ಜನರು ಗುತ್ತಿಗೆ ಪಡೆಯಲು ಮುಗಿ ಬೀಳುತ್ತಾರೆ. ಗುತ್ತಿಗೆ ನೀಡಿದರೆ ಗುತ್ತಿಗೆದಾರ ಅರಮನೆಯ ಆಡಳಿತ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿ ಅವ್ಯವಹಾರ ನಡೆಸಿದ್ದರೂ ಯಾರೂ ತಲೆಕೆಡಿಸಿಕೊಂಡಿರಲಿಲ್ಲ.
ಆದರೆ ದೂರು ಬಂದಿರುವ ಹಿನ್ನಲೆಯಲ್ಲಿ ಹಾಗೂ ಅರಮನೆ ಮಂಡಳಿಗೆ ನಷ್ಟವಾಗುತ್ತಿರುವ ಹಿನ್ನಲೆಯಲ್ಲಿ ಗುತ್ತಿಗೆದಾರರ ಪರವಾನಗಿಯನ್ನು ರದ್ದುಪಡಿಸಿರುವ ಅರಮನೆ ಆಡಳಿತ ಮಂಡಳಿ ನಿರ್ದೇಶಕಿ ಇಂದಿರಾ ಅವರು ಆಡಳಿತ ಮಂಡಳಿಯಡಿಯಲ್ಲೇ ಪಾರ್ಕಿಂಗ್ ನಿರ್ವಹಣೆ ಹಾಗೂ ಶುಲ್ಕ ವಸೂಲಿ ಮಾಡುವುದಾಗಿ ತಿಳಿಸಿದ್ದಾರೆ.[ಕೆಂಪೇಗೌಡ ವಿಮಾನ ನಿಲ್ದಾಣದ ಪಾರ್ಕಿಂಗ್ ಫೀ ಹೆಚ್ಚಳ]
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications