ತಲಕಾಡಿನಲ್ಲಿ ಪಂಚಲಿಂಗ ದರ್ಶನ: ಪಂಚಲಿಂಗಗಳ ಸಂಕ್ಷಿಪ್ತ ಮಾಹಿತಿ
ಮೈಸೂರು, ಡಿಸೆಂಬರ್ 14: ಮೈಸೂರು ಜಿಲ್ಲೆಯ ಕಾವೇರಿ ನದಿ ತಟದಲ್ಲಿರುವ ಐತಿಹಾಸಿಕ ತಲಕಾಡು ಪಂಚಲಿಂಗ ದರ್ಶನಕ್ಕೆ ಸಚಿವ ಎಸ್.ಟಿ ಸೋಮಶೇಖರ್ ಅವರಿಂದ ಸೋಮವಾರ ಮುಂಜಾನೆ ವಿದ್ಯುಕ್ತ ಚಾಲನೆ ದೊರೆಯಿತು.
ಕುಹುಯೋಗ ಜ್ಯೇಷ್ಠ ನಕ್ಷತ್ರದಲ್ಲಿ ಮುಂಜಾನೆ 4.30ರ ವೇಳೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ, ಪಂಚಲಿಂಗ ದರ್ಶನ ಮಹೋತ್ಸವದ ಮಹಾಪೂಜೆ, ಮಾಹಾಭಿಷೇಕವು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನೆರವೇರಿತು. ಈ ಹಿಂದೆ 2013ರಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ನಡೆದಿತ್ತು.

ವೈದ್ಯನಾಥೇಶ್ವರ
ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ. ಇದರಿಂದ ಶಿವನನ್ನು ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತದೆ. ಈ ಕಾರಣದದ ಇಲ್ಲಿ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತದೆ.

ಅರ್ಕನಾಥೇಶ್ವರ
ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ. ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ.

ಪಾತಾಳೇಶ್ವರ
ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ. ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.

ಮರಳೇಶ್ವರ
ತಲಕಾಡಿನ ಮರಳಿಗೆಲ್ಲ ಒಡೆಯನೆಂದೇ ಮರಳೇಶ್ವರನನ್ನು ಕರೆಯಲಾಗುತ್ತದೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರ ನೀಡಿದ ಎಂದು ಹೇಳಲಾಗುವುದು. ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ ಸಹ ಇದೆ.

ಮಲ್ಲಿಕಾರ್ಜುನೇಶ್ವರ
ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರ ಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನು ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications